AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್ ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಸಾಧು ಶ್ರೀನಾಥ್​
| Edited By: |

Updated on:Mar 17, 2021 | 12:02 PM

Share

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿರುವ ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಉನ್ನತ ಪೊಲೀಸ್​ ಅಧಿಕಾರಿಗಳಿಂದ ಹಿಡಿದು ಆಡಳಿತಾರೂಢ ಜನಪ್ರತಿನಿಧಿಗಳಿಗೂ ಫೇಸ್‌ಬುಕ್​ನಲ್ಲಿ ವಂಚನೆ ಪ್ರಕರಣಗಳು ಕಾಡತೊಡಗಿವೆ. ತಾಜಾ ಪ್ರಕರಣದಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬಳು ನಕಲಿ ಖಾತೆ ತೆರೆದು ಜನರ ಅಸಲಿ ಖಾತೆಗೆ ಕನ್ನಹಾಕಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೇಘಾ ಅಲಿಯಾಸ್​ ಹರಿಣಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಮೇಘಾ ಅಲಿಯಾಸ್​ ಹರಿಣಿ ಫೇಸ್‌ಬುಕ್ ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಂಡು ಯುವಕರಿಗೆ ವಂಚನೆ ಮಾಡುತ್ತಿದ್ದಳು. ಈ ವಂಚನೆ ಪುರಾಣದಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಆಭರಣಗಳನ್ನು ಲಪಟಾಯಿಸಿರುವುದೂ ಪತ್ತೆಯಾಗಿದೆ. ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿಕೊಂಡು ವಂಚನೆಯಲ್ಲಿ ತೊಡಗಿದ್ದಳು. ಮೇಟಗಳ್ಳಿ ಪೊಲೀಸರ ಸಕಾಲಿಕ ಕಾರ್ಯಾಚರಣೆ ಮೂಲಕ ಯುವತಿ ಈಗ ಪೊಲೀಸ್​ ಬಂಧನದಲ್ಲಿದ್ದಾಳೆ.

Facebook fraud in mysore

ಮೇಘಾ ಅಲಿಯಾಸ್​ ಹರಿಣಿ

ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್​ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ. ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On - 11:03 am, Wed, 17 March 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ