AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್ ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಸಾಧು ಶ್ರೀನಾಥ್​
| Edited By: |

Updated on:Mar 17, 2021 | 12:02 PM

Share

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿರುವ ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಉನ್ನತ ಪೊಲೀಸ್​ ಅಧಿಕಾರಿಗಳಿಂದ ಹಿಡಿದು ಆಡಳಿತಾರೂಢ ಜನಪ್ರತಿನಿಧಿಗಳಿಗೂ ಫೇಸ್‌ಬುಕ್​ನಲ್ಲಿ ವಂಚನೆ ಪ್ರಕರಣಗಳು ಕಾಡತೊಡಗಿವೆ. ತಾಜಾ ಪ್ರಕರಣದಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬಳು ನಕಲಿ ಖಾತೆ ತೆರೆದು ಜನರ ಅಸಲಿ ಖಾತೆಗೆ ಕನ್ನಹಾಕಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೇಘಾ ಅಲಿಯಾಸ್​ ಹರಿಣಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಮೇಘಾ ಅಲಿಯಾಸ್​ ಹರಿಣಿ ಫೇಸ್‌ಬುಕ್ ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಂಡು ಯುವಕರಿಗೆ ವಂಚನೆ ಮಾಡುತ್ತಿದ್ದಳು. ಈ ವಂಚನೆ ಪುರಾಣದಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಆಭರಣಗಳನ್ನು ಲಪಟಾಯಿಸಿರುವುದೂ ಪತ್ತೆಯಾಗಿದೆ. ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿಕೊಂಡು ವಂಚನೆಯಲ್ಲಿ ತೊಡಗಿದ್ದಳು. ಮೇಟಗಳ್ಳಿ ಪೊಲೀಸರ ಸಕಾಲಿಕ ಕಾರ್ಯಾಚರಣೆ ಮೂಲಕ ಯುವತಿ ಈಗ ಪೊಲೀಸ್​ ಬಂಧನದಲ್ಲಿದ್ದಾಳೆ.

Facebook fraud in mysore

ಮೇಘಾ ಅಲಿಯಾಸ್​ ಹರಿಣಿ

ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್​ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ. ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On - 11:03 am, Wed, 17 March 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ