AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್ ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Mar 17, 2021 | 12:02 PM

Share

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿರುವ ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಉನ್ನತ ಪೊಲೀಸ್​ ಅಧಿಕಾರಿಗಳಿಂದ ಹಿಡಿದು ಆಡಳಿತಾರೂಢ ಜನಪ್ರತಿನಿಧಿಗಳಿಗೂ ಫೇಸ್‌ಬುಕ್​ನಲ್ಲಿ ವಂಚನೆ ಪ್ರಕರಣಗಳು ಕಾಡತೊಡಗಿವೆ. ತಾಜಾ ಪ್ರಕರಣದಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬಳು ನಕಲಿ ಖಾತೆ ತೆರೆದು ಜನರ ಅಸಲಿ ಖಾತೆಗೆ ಕನ್ನಹಾಕಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೇಘಾ ಅಲಿಯಾಸ್​ ಹರಿಣಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಮೇಘಾ ಅಲಿಯಾಸ್​ ಹರಿಣಿ ಫೇಸ್‌ಬುಕ್ ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಂಡು ಯುವಕರಿಗೆ ವಂಚನೆ ಮಾಡುತ್ತಿದ್ದಳು. ಈ ವಂಚನೆ ಪುರಾಣದಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಆಭರಣಗಳನ್ನು ಲಪಟಾಯಿಸಿರುವುದೂ ಪತ್ತೆಯಾಗಿದೆ. ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿಕೊಂಡು ವಂಚನೆಯಲ್ಲಿ ತೊಡಗಿದ್ದಳು. ಮೇಟಗಳ್ಳಿ ಪೊಲೀಸರ ಸಕಾಲಿಕ ಕಾರ್ಯಾಚರಣೆ ಮೂಲಕ ಯುವತಿ ಈಗ ಪೊಲೀಸ್​ ಬಂಧನದಲ್ಲಿದ್ದಾಳೆ.

Facebook fraud in mysore

ಮೇಘಾ ಅಲಿಯಾಸ್​ ಹರಿಣಿ

ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್​ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ. ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On - 11:03 am, Wed, 17 March 21

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ