ಮತ್ತೆ ಶುರುವಾದ ನಕಲಿ ಚಿನ್ನದ ದಂಧೆ; 4.80 ಲಕ್ಷ ರೂಪಾಯಿ ವಂಚಿಸಿದ ಓರ್ವನ ಬಂಧನ

ನಕಲಿ ಬಂಗಾರದ ಬಿಲ್ಲೆ ನೀಡಿ 4,80,000 ರೂಪಾಯಿ ದೋಚಿದ್ದ ಆರೋಪಿಯನ್ನು ಸದ್ಯ ನ್ಯಾಮತಿ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಯನ್ನು ಹುಡುಕುತ್ತಿದ್ದಾರೆ.

ಮತ್ತೆ ಶುರುವಾದ ನಕಲಿ ಚಿನ್ನದ ದಂಧೆ; 4.80 ಲಕ್ಷ ರೂಪಾಯಿ ವಂಚಿಸಿದ ಓರ್ವನ ಬಂಧನ
Follow us
preethi shettigar
|

Updated on: Apr 24, 2021 | 1:14 PM

ದಾವಣಗೆರೆ: ನಕಲಿ ಬಂಗಾರ ನೀಡಿ ವ್ಯಕ್ತಿಯೊಬ್ಬರಿಗೆ 4.80 ಲಕ್ಷ ರೂಪಾಯಿ ವಂಚಿಸಿದ ಆರೋಪಿಯನ್ನು ನ್ಯಾಮತಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಗ್ರಾಮದ ಉಲ್ಲಾಸ್‌ ಬಂಧಿತ ಆರೋಪಿ. ಈತನಿಂದ 2.72 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದು, ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲ್ಲೂಕಿನ ಗೋರಬಾಳ ಗ್ರಾಮದ ಪರಶುರಾಮ ಹಣ ಕಳೆದುಕೊಂಡವರು. ಉಲ್ಲಾಸ್‌ ಹಾಗೂ ಇನ್ನೊಬ್ಬ ಆರೋಪಿ ಇಬ್ಬರೂ ಸೇರಿಕೊಂಡು, ನಮಗೆ ಮನೆಯ ಅಡಿಪಾಯ ತೆಗೆಯುವಾಗ ಬಂಗಾರದ ನಿಧಿ ಸಿಕ್ಕಿದೆ ಎಂದು ಪರಶುರಾಮ ಅವರನ್ನು ನಂಬಿಸಿ ನ್ಯಾಮತಿ ತಾಲ್ಲೂಕಿನ ಚೀಲೂರು ಗ್ರಾಮಕ್ಕೆ ಬರಲು ತಿಳಿಸಿದ್ದರು.

ಪರಶುರಾಮ‌ ಚೀಲೂರಿಗೆ ಬಂದಾಗ ಆರೋಪಿಗಳು ಒಂದು ಚಿನ್ನದ ಬಿಲ್ಲೆ ನೀಡಿ ಅವರ ನಂಬಿಕೆ ಸಂಪಾದಿಸಿದ್ದರು. ಬಳಿಕ ಅರ್ಧ ಕೆ.ಜಿ. ನಕಲಿ ಬಂಗಾರದ ಬಿಲ್ಲೆ ನೀಡಿ 4,80,000 ರೂಪಾಯಿ ದೋಚಿದ್ದಾರೆ. ಈ ಸಂಬಂಧ ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಎಸ್ಪಿ ಹನುಮಂತರಾಯ, ಎಎಸ್‌ಪಿ ರಾಜೀವ್‌ ಎಂ, ಡಿವೈಎಸ್‌ಪಿ ಡಾ. ಸಂತೋಷ್‌ ಕೆ.ಎಂ. ಮಾರ್ಗದರ್ಶನದಲ್ಲಿ ಹೊನ್ನಾಳಿ ಸಿಪಿಐ ದೇವರಾಜ ಟಿ.ವಿ, ಪಿಎಸ್‌ಐ ಪಿ.ಎಸ್‌. ರಮೇಶ, ಸಿಬ್ಬಂದಿ ಮಂಜಪ್ಪ ಕೆ, ಎನ್‌. ರವಿನಾಯಕ, ಮಂಜುನಾಥ ಟಿ.ಎಂ, ಮೌನೇಶಾಚಾರಿ, ಚನ್ನೇಶ ಅವರ ತಂಡ ಕಾರ್ಯಾಚರಣೆ ನಡೆಸಿದ್ದು, ವಂಚನೆ ಪ್ಎಕರಣವನ್ನು ಭೇದಿಸಿದ್ದಾರೆ.

ಇದನ್ನೂ ಓದಿ:

ಅಸಲಿ ಚಿನ್ನ ತೋರಿಸಿ ನಕಲಿ ಚಿನ್ನ ನೀಡಿದ ಐನಾತಿ ಕಳ್ಳರ ಬಂಧನ, ಎಲ್ಲಿ?

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

ಪೊಲೀಸರ ಸೋಗಿನಲ್ಲಿ ಬಂದು ಉದ್ಯಮಿಯ ಚಿನ್ನ ದರೋಡೆ; ಕಲಬುರಗಿಯಲ್ಲಿ ಹಾಡಹಗಲೇ ದುಷ್ಕೃತ್ಯ

(Duplicate gold thief arrested by Davangere police)

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ