AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ, ಯಡಿಯೂರಪ್ಪ ಸರ್ಕಾರ ಮಾತ್ರ ಫೀಲ್ಡ್​​ನಲ್ಲಿದೆ: ಅರುಣ್ ಸಿಂಗ್ ವ್ಯಾಖ್ಯಾನ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಅರುಣ್​ ಸಿಂಗ್ ಇಂದು ಸಂಜೆ ಸಭೆ ನಡೆಸಲಿದ್ದಾರೆ. ಹಾಗಾಗಿ ಇದುವರೆಗೆ ಬಿಜೆಪಿ ಕಚೇರಿಗೆ 31 ಸಚಿವರು ಆಗಮಿಸಿದ್ಬೆಂದಾರೆ. ಆದರೆ ಸಚಿವ ಸಿ.ಪಿ.ಯೋಗೇಶ್ವರ್ ಸಭೆಗೆ ಇನ್ನೂ ಬಂದಿಲ್ಲ. ನಿನ್ನೆ ಹೈದರಾಬಾದ್‌ಗೆ ತೆರಳಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೈದರಾಬಾದ್‌ನಿಂದ ದೆಹಲಿಗೆ ತೆರಳಿದ್ದರು.

ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ, ಯಡಿಯೂರಪ್ಪ ಸರ್ಕಾರ ಮಾತ್ರ  ಫೀಲ್ಡ್​​ನಲ್ಲಿದೆ: ಅರುಣ್ ಸಿಂಗ್ ವ್ಯಾಖ್ಯಾನ
ಅರುಣ್​ ಸಿಂಗ್​
TV9 Web
| Updated By: ಸಾಧು ಶ್ರೀನಾಥ್​|

Updated on:Jun 16, 2021 | 6:00 PM

Share

ಬೆಂಗಳೂರು: ನಾನು 3 ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಸಿಎಂ ಮತ್ತು ಸಚಿವರ ಜತೆ ಚರ್ಚಿಸುವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ವಿದ್ಯಮಾನಗಳ ಕೆಲಸ ಇದೆ. ಮೂರು ದಿನಗಳ ಕಾರ್ಯಕ್ರಮ ಇದೆ. ಶಾಸಕರು, ಸಚಿವರ ಜೊತೆ ಪ್ರತ್ಯೇಕವಾಗಿ ಚರ್ಚಿಸುತ್ತೇನೆ. BSY ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಇದನ್ನು ಪದೇಪದೆ ಹೇಳುವ ಅಗತ್ಯವಿಲ್ಲ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.

ಸರ್ಕಾರದ ಕೊರೊನಾ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಒಂದು ಲಕ್ಷ ರೂ. ಪರಿಹಾರ ಕೊಟ್ಟಿದೆ. ಮಾಧ್ಯಮಗಳ ಮುಂದೆ ಇದೆಲ್ಲ ಹೇಳಿಕೆ ನೀಡಬಾರದು. ಪದೇ ಪದೇ ಹೇಳುವ ಅಗತ್ಯ ಇಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಒಳ್ಳೆಯ ಕೆಲಸ ಆಗ್ತಿದೆ. ಪಕ್ಷದ ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ ಅಂತಾ ಅರುಣ್ ಸಿಂಗ್ ಹೇಳಿದರು.

ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ

ಕೊವಿಡ್ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್‌ನಿಂದ ಟೀಕೆಯಷ್ಟೇ ಕೇಳಿಬರುತ್ತಿದೆ. ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ. ಯಡಿಯೂರಪ್ಪ ಸರ್ಕಾರ ಮಾತ್ರ ಫೀಲ್ಡ್ ನಲ್ಲಿದೆ. ಜೆಡಿಎಸ್ ಕ್ವಾರಂಟೈನ್ ನಲ್ಲಿದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿನ ಹಾಲಿ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ದೆಹಲಿಗೆ ಹೋಗಿಲ್ಲ. ವೈಯಕ್ತಿಕ ಕೆಲಸಕ್ಕೆ ಹೈದರಾಬಾದ್‌ಗೆ ಹೋಗಿದ್ದೆ: ಸಭೆಗೆ ಮುನ್ನ ಸಚಿವ ಸಿ.ಪಿ.ಯೋಗೇಶ್ವರ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಅರುಣ್​ ಸಿಂಗ್ ಇಂದು ಸಂಜೆ ಸಭೆ ನಡೆಸಲಿದ್ದಾರೆ. ಹಾಗಾಗಿ ಇದುವರೆಗೆ ಬಿಜೆಪಿ ಕಚೇರಿಗೆ 31 ಸಚಿವರು ಆಗಮಿಸಿದ್ದಾರೆ. ಆದರೆ ಸಚಿವ ಸಿ.ಪಿ.ಯೋಗೇಶ್ವರ್ ಸಭೆಗೆ ಇನ್ನೂ ಬಂದಿಲ್ಲ. ನಿನ್ನೆ ಹೈದರಾಬಾದ್‌ಗೆ ತೆರಳಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೈದರಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲಿಂದ ನೇರವಾಗಿ ಅರುಣ್​ ಸಿಂಗ್ ಸಭೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಬೆಗಳೂರಿಗೆ ವಾಪಸಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜಕೀಯವಾಗಿ ನಾನು ಏನೂ ಮಾತನಾಡಲ್ಲ. ನಾನು ದೆಹಲಿಗೆ ಹೋಗಿಲ್ಲ. ವೈಯಕ್ತಿಕ ಕೆಲಸಕ್ಕೆ ಹೈದರಾಬಾದ್‌ಗೆ ಹೋಗಿದ್ದೆ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಅರುಣ್ ಸಿಂಗ್ ಜತೆ ಸಭೆಗೂ ಮುನ್ನ ವಲಸಿಗ ಸಚಿವರ ಸಭೆ:

ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಮನ ಹಿನ್ನೆಲೆ ಅರುಣ್ ಸಿಂಗ್ ಜತೆ ಸಭೆಗೂ ಮುನ್ನ ವಲಸಿಗ ಸಚಿವರು ಸಭೆ ನಡೆಸಿದರು. ಸಚಿವ ಬಿ.ಸಿ. ಪಾಟೀಲ್ ನಿವಾಸದಲ್ಲಿ ವಲಸಿಗ ಸಚಿವರ ಸಭೆ ನಡೆಯಿತು. ಸಚಿವರಾದ ಡಾ.ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್​, ಶಿವರಾಂ ಹೆಬ್ಬಾರ್, ಆನಂದ್​ ಸಿಂಗ್ ಮತ್ತಿತರರು ಭಾಗಿಯಾಗಿದ್ದರು.

ಸಚಿವ ಈಶ್ವರಪ್ಪ ಹೇಳಿಕೆಗೆ ಎಂಟಿಬಿ ನಾಗರಾಜ್​ ತಿರುಗೇಟು:

ವಲಸಿಗರಿಂದ ರಾಜ್ಯ ಬಿಜೆಪಿಯಲ್ಲಿ ಹೀಗಾಗಿದೆ ಎಂದು ಸಚಿವ ಕೆ ಎಸ್​ ಈಶ್ವರಪ್ಪ ಹೇಳಿಕೆ ನೀಡುವ ವಿಚಾರವಾಗಿ ಎಂಟಿಬಿ ನಾಗರಾಜ್​ ತಿರುಗೇಟು ನೀಡಿದ್ದಾರೆ. ನಾವು 17 ಜನರು ಬಿಜೆಪಿಗೆ ಬಂದಿದ್ದರಿಂದ ಸಮಸ್ಯೆಯಾಗಿಲ್ಲ. ನಾವು ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ. 17 ಶಾಸಕರು ವಲಸೆ ಬರದಿದ್ದರೆ ಸರ್ಕಾರ ಎಲ್ಲಿ ರಚಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

(during corona times congress limited to criticizing jds is in quarantine describes karnataka bjp in charge arun singh in bangalore)

Published On - 5:40 pm, Wed, 16 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!