AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ಮೊತ್ತ 15 ಲಕ್ಷ ರೂ; ಹಸುಗಳಿಗೆ ಮೇವು ಪೂರೈಕೆ ಮೊತ್ತ 3 ಲಕ್ಷ ರೂ: ಬಿಬಿಎಂಪಿ

ಬಿಬಿಎಂಪಿ ನೀಡಿರುವ ಸಮರ್ಥನೆ ಪ್ರಕಾರ ಬೆಂಗಳೂರು ನಗರದಲ್ಲಿ 3 ಲಕ್ಷಕ್ಕೂ ಅಧಿಕ ಬೀದಿನಾಯಿಗಳಿದ್ದು, ಅವುಗಳಿಗೆ ದಿನಕ್ಕೆ 250 ಗ್ರಾಂ ಬೇಯಿಸಿದ ಮಾಂಸದಂತೆ ಊಟ ಒದಗಿಸಲಾಗಿದೆಯಂತೆ. ಒಟ್ಟು ಮೂರು ಲಕ್ಷ ನಾಯಿಗಳಿಗೆ ಲಾಕ್​ಡೌನ್ ಅವಧಿಯಲ್ಲಿ ಆಹಾರ ನೀಡಿದ ಮೊತ್ತ 15 ಲಕ್ಷ ರೂಪಾಯಿ ಆಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಲಾಕ್​ಡೌನ್​ ವೇಳೆ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ಮೊತ್ತ 15 ಲಕ್ಷ ರೂ; ಹಸುಗಳಿಗೆ ಮೇವು ಪೂರೈಕೆ ಮೊತ್ತ 3 ಲಕ್ಷ ರೂ: ಬಿಬಿಎಂಪಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 16, 2021 | 7:34 AM

Share

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೇರಿದ ಲಾಕ್​ಡೌನ್ ಮನುಷ್ಯರ ಜೀವನದ ಮೇಲೆ ಎಷ್ಟು ಪರಿಣಾಮ ಬೀರಿದೆಯೋ ಅಷ್ಟೇ ತೊಂದರೆಯನ್ನು ಮನುಷ್ಯರನ್ನು ಅವಲಂಬಿಸಿ ಬದುಕುವ ಮೂಕ ಪ್ರಾಣಿಗಳಿಗೂ ಉಂಟುಮಾಡಿದೆ. ಹೋಟೆಲ್, ಬೀದಿ ಬದಿ ಅಂಗಡಿಗಳು ಅಥವಾ ಕೆಲ ಮನೆಯವರು ನೀಡುತ್ತಿದ್ದ ಆಹಾರವನ್ನೇ ನಂಬಿಕೊಂಡು ಬದುಕಿದ್ದ ಬೀದಿನಾಯಿ, ಬೀದಿ ಹಸುಗಳು ಲಾಕ್​ಡೌನ್ ಸಂದರ್ಭದಲ್ಲಿ ಹಸಿವಿನಿಂದ ನರಳಾಡಿವೆ. ಇದನ್ನು ನೋಡಲಾಗದೇ ಕೆಲ ಸ್ವಯಂಸೇವಕರು ತಾವೇ ಮುಂದೆ ನಿಂತು ಅವುಗಳಿಗೆ ಆಹಾರ ಒದಗಿಸಿದ್ದಾರೆ ಕೂಡಾ. ಆದರೆ, ಈ ಬಾರಿಯ ಲಾಕ್​ಡೌನ್​ ಸಂದರ್ಭದಲ್ಲಿ ಬೀದಿ ಪ್ರಾಣಿಗಳ ಹಸಿವು ನೀಗಿಸಿದ ವೆಚ್ಚ ಎಂದು ಬಿಬಿಎಂಪಿ ಬಿಡುಗಡೆ ಮಾಡಿರುವ ಬಿಲ್​ ಎಲ್ಲರ ಹುಬ್ಬೇರುವಂತೆ ಮಾಡಿ ಅನುಮಾನಕ್ಕೂ ಕಾರಣವಾಗಿದೆ.

ಲಾಕ್​ಡೌನ್​ನಲ್ಲಿ ಬೆಂಗಳೂರಿನಲ್ಲಿರುವ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ವೆಚ್ಚ ಎಂದು ಬಿಬಿಎಂಪಿ 15 ಲಕ್ಷ ರೂಪಾಯಿ ಬಿಲ್​ ಮಾಡಿದೆ. ಇತ್ತ ಅನಾಥ ಹಸುಗಳ ಹಸಿವು ನೀಗಿಸಿದ ವೆಚ್ಚ ಎಂದು 3 ಲಕ್ಷ ರೂಪಾಯಿ ಬಿಲ್​ ಮಾಡಿದೆ. ಸದ್ಯ ಈ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆಯೇ ಇಷ್ಟೊಂದು ಮೊತ್ತವನ್ನು ಬಿಬಿಎಂಪಿ ನಿಜವಾಗಿಯೂ ವ್ಯಯಿಸಿದೆಯಾ ಎನ್ನುವ ಅನುಮಾನ ಮೂಡಿದೆ.

ಆದರೆ, ಬಿಬಿಎಂಪಿ ನೀಡಿರುವ ಸಮರ್ಥನೆ ಪ್ರಕಾರ ಬೆಂಗಳೂರು ನಗರದಲ್ಲಿ 3 ಲಕ್ಷಕ್ಕೂ ಅಧಿಕ ಬೀದಿನಾಯಿಗಳಿದ್ದು, ಅವುಗಳಿಗೆ ದಿನಕ್ಕೆ 250 ಗ್ರಾಂ ಬೇಯಿಸಿದ ಮಾಂಸದಂತೆ ಊಟ ಒದಗಿಸಲಾಗಿದೆಯಂತೆ. ಒಟ್ಟು ಮೂರು ಲಕ್ಷ ನಾಯಿಗಳಿಗೆ ಲಾಕ್​ಡೌನ್ ಅವಧಿಯಲ್ಲಿ ಆಹಾರ ನೀಡಿದ ಮೊತ್ತ 15 ಲಕ್ಷ ರೂಪಾಯಿ ಆಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಅನಾಥ ಹಸುಗಳ ವಿಚಾರಕ್ಕೆ ಬಂದರೆ ಬಿಬಿಎಂಪಿ ಹೇಳಿರುವ ಪ್ರಕಾರ ಬೆಂಗಳೂರಿನಲ್ಲಿ ಒಟ್ಟು 800ಕ್ಕೂ ಹೆಚ್ಚು ಅನಾಥ ಹಸುಗಳಿದ್ದು, ಲಾಕ್​ಡೌನ್ ಸಂದರ್ಭದಲ್ಲಿ ಅವುಗಳಿಗೆ ಮೇವು ಒದಗಿಸಿದ ಮೊತ್ತ 3 ಲಕ್ಷ ರೂಪಾಯಿ ಆಗಿದೆ ಎನ್ನಲಾಗಿದೆ. ಅಲ್ಲದೇ ಈ ಕಾರ್ಯಕ್ಕೆ ಖಾಸಗಿ ಸಂಸ್ಥೆಗಳು ಕೂಡಾ ಕೈ ಜೋಡಿಸಿದ್ದು, ಕೆಲವೆಡೆ ಖಾಸಗಿಯವರ ಸಹಾಕರದೊಂದಿಗೆ ಹಸು ಹಾಗೂ ನಾಯಿಗಳಿಗೆ ಆಹಾರ ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.

ಆದರೆ, ಈ ದೊಡ್ಡ ಮೊತ್ತವನ್ನು ನಿಜವಾಗಿಯೂ ಮೂಕ ಪ್ರಾಣಿಗಳ ಹಸಿವು ನೀಗಿಸಲೆಂದೇ ಖರ್ಚು ಮಾಡಲಾಗಿದೆಯಾ? ಇಲ್ಲವೇ ಅವುಗಳ ಹೊಟ್ಟೆ ತುಂಬಿಸುವ ಹೆಸರಲ್ಲಿ ಬೇರೆಡೆಗೆ ಹೋಗಿದೆಯಾ? ಎಂದು ಎದ್ದಿರುವ ಅನುಮಾನಕ್ಕೆ ಸ್ಪಷ್ಟ ಉತ್ತರ ನೀಡುವ ಜವಾಬ್ದಾರಿ ಬಿಬಿಎಂಪಿ ಮೇಲಿದೆ.

ಇದನ್ನೂ ಓದಿ: ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ? 

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!