AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ಮೊತ್ತ 15 ಲಕ್ಷ ರೂ; ಹಸುಗಳಿಗೆ ಮೇವು ಪೂರೈಕೆ ಮೊತ್ತ 3 ಲಕ್ಷ ರೂ: ಬಿಬಿಎಂಪಿ

ಬಿಬಿಎಂಪಿ ನೀಡಿರುವ ಸಮರ್ಥನೆ ಪ್ರಕಾರ ಬೆಂಗಳೂರು ನಗರದಲ್ಲಿ 3 ಲಕ್ಷಕ್ಕೂ ಅಧಿಕ ಬೀದಿನಾಯಿಗಳಿದ್ದು, ಅವುಗಳಿಗೆ ದಿನಕ್ಕೆ 250 ಗ್ರಾಂ ಬೇಯಿಸಿದ ಮಾಂಸದಂತೆ ಊಟ ಒದಗಿಸಲಾಗಿದೆಯಂತೆ. ಒಟ್ಟು ಮೂರು ಲಕ್ಷ ನಾಯಿಗಳಿಗೆ ಲಾಕ್​ಡೌನ್ ಅವಧಿಯಲ್ಲಿ ಆಹಾರ ನೀಡಿದ ಮೊತ್ತ 15 ಲಕ್ಷ ರೂಪಾಯಿ ಆಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಲಾಕ್​ಡೌನ್​ ವೇಳೆ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ಮೊತ್ತ 15 ಲಕ್ಷ ರೂ; ಹಸುಗಳಿಗೆ ಮೇವು ಪೂರೈಕೆ ಮೊತ್ತ 3 ಲಕ್ಷ ರೂ: ಬಿಬಿಎಂಪಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Skanda

Updated on: Jun 16, 2021 | 7:34 AM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಹೇರಿದ ಲಾಕ್​ಡೌನ್ ಮನುಷ್ಯರ ಜೀವನದ ಮೇಲೆ ಎಷ್ಟು ಪರಿಣಾಮ ಬೀರಿದೆಯೋ ಅಷ್ಟೇ ತೊಂದರೆಯನ್ನು ಮನುಷ್ಯರನ್ನು ಅವಲಂಬಿಸಿ ಬದುಕುವ ಮೂಕ ಪ್ರಾಣಿಗಳಿಗೂ ಉಂಟುಮಾಡಿದೆ. ಹೋಟೆಲ್, ಬೀದಿ ಬದಿ ಅಂಗಡಿಗಳು ಅಥವಾ ಕೆಲ ಮನೆಯವರು ನೀಡುತ್ತಿದ್ದ ಆಹಾರವನ್ನೇ ನಂಬಿಕೊಂಡು ಬದುಕಿದ್ದ ಬೀದಿನಾಯಿ, ಬೀದಿ ಹಸುಗಳು ಲಾಕ್​ಡೌನ್ ಸಂದರ್ಭದಲ್ಲಿ ಹಸಿವಿನಿಂದ ನರಳಾಡಿವೆ. ಇದನ್ನು ನೋಡಲಾಗದೇ ಕೆಲ ಸ್ವಯಂಸೇವಕರು ತಾವೇ ಮುಂದೆ ನಿಂತು ಅವುಗಳಿಗೆ ಆಹಾರ ಒದಗಿಸಿದ್ದಾರೆ ಕೂಡಾ. ಆದರೆ, ಈ ಬಾರಿಯ ಲಾಕ್​ಡೌನ್​ ಸಂದರ್ಭದಲ್ಲಿ ಬೀದಿ ಪ್ರಾಣಿಗಳ ಹಸಿವು ನೀಗಿಸಿದ ವೆಚ್ಚ ಎಂದು ಬಿಬಿಎಂಪಿ ಬಿಡುಗಡೆ ಮಾಡಿರುವ ಬಿಲ್​ ಎಲ್ಲರ ಹುಬ್ಬೇರುವಂತೆ ಮಾಡಿ ಅನುಮಾನಕ್ಕೂ ಕಾರಣವಾಗಿದೆ.

ಲಾಕ್​ಡೌನ್​ನಲ್ಲಿ ಬೆಂಗಳೂರಿನಲ್ಲಿರುವ ಬೀದಿನಾಯಿಗಳಿಗೆ ಮಾಂಸದೂಟ ಹಾಕಿದ ವೆಚ್ಚ ಎಂದು ಬಿಬಿಎಂಪಿ 15 ಲಕ್ಷ ರೂಪಾಯಿ ಬಿಲ್​ ಮಾಡಿದೆ. ಇತ್ತ ಅನಾಥ ಹಸುಗಳ ಹಸಿವು ನೀಗಿಸಿದ ವೆಚ್ಚ ಎಂದು 3 ಲಕ್ಷ ರೂಪಾಯಿ ಬಿಲ್​ ಮಾಡಿದೆ. ಸದ್ಯ ಈ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆಯೇ ಇಷ್ಟೊಂದು ಮೊತ್ತವನ್ನು ಬಿಬಿಎಂಪಿ ನಿಜವಾಗಿಯೂ ವ್ಯಯಿಸಿದೆಯಾ ಎನ್ನುವ ಅನುಮಾನ ಮೂಡಿದೆ.

ಆದರೆ, ಬಿಬಿಎಂಪಿ ನೀಡಿರುವ ಸಮರ್ಥನೆ ಪ್ರಕಾರ ಬೆಂಗಳೂರು ನಗರದಲ್ಲಿ 3 ಲಕ್ಷಕ್ಕೂ ಅಧಿಕ ಬೀದಿನಾಯಿಗಳಿದ್ದು, ಅವುಗಳಿಗೆ ದಿನಕ್ಕೆ 250 ಗ್ರಾಂ ಬೇಯಿಸಿದ ಮಾಂಸದಂತೆ ಊಟ ಒದಗಿಸಲಾಗಿದೆಯಂತೆ. ಒಟ್ಟು ಮೂರು ಲಕ್ಷ ನಾಯಿಗಳಿಗೆ ಲಾಕ್​ಡೌನ್ ಅವಧಿಯಲ್ಲಿ ಆಹಾರ ನೀಡಿದ ಮೊತ್ತ 15 ಲಕ್ಷ ರೂಪಾಯಿ ಆಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

ಅನಾಥ ಹಸುಗಳ ವಿಚಾರಕ್ಕೆ ಬಂದರೆ ಬಿಬಿಎಂಪಿ ಹೇಳಿರುವ ಪ್ರಕಾರ ಬೆಂಗಳೂರಿನಲ್ಲಿ ಒಟ್ಟು 800ಕ್ಕೂ ಹೆಚ್ಚು ಅನಾಥ ಹಸುಗಳಿದ್ದು, ಲಾಕ್​ಡೌನ್ ಸಂದರ್ಭದಲ್ಲಿ ಅವುಗಳಿಗೆ ಮೇವು ಒದಗಿಸಿದ ಮೊತ್ತ 3 ಲಕ್ಷ ರೂಪಾಯಿ ಆಗಿದೆ ಎನ್ನಲಾಗಿದೆ. ಅಲ್ಲದೇ ಈ ಕಾರ್ಯಕ್ಕೆ ಖಾಸಗಿ ಸಂಸ್ಥೆಗಳು ಕೂಡಾ ಕೈ ಜೋಡಿಸಿದ್ದು, ಕೆಲವೆಡೆ ಖಾಸಗಿಯವರ ಸಹಾಕರದೊಂದಿಗೆ ಹಸು ಹಾಗೂ ನಾಯಿಗಳಿಗೆ ಆಹಾರ ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.

ಆದರೆ, ಈ ದೊಡ್ಡ ಮೊತ್ತವನ್ನು ನಿಜವಾಗಿಯೂ ಮೂಕ ಪ್ರಾಣಿಗಳ ಹಸಿವು ನೀಗಿಸಲೆಂದೇ ಖರ್ಚು ಮಾಡಲಾಗಿದೆಯಾ? ಇಲ್ಲವೇ ಅವುಗಳ ಹೊಟ್ಟೆ ತುಂಬಿಸುವ ಹೆಸರಲ್ಲಿ ಬೇರೆಡೆಗೆ ಹೋಗಿದೆಯಾ? ಎಂದು ಎದ್ದಿರುವ ಅನುಮಾನಕ್ಕೆ ಸ್ಪಷ್ಟ ಉತ್ತರ ನೀಡುವ ಜವಾಬ್ದಾರಿ ಬಿಬಿಎಂಪಿ ಮೇಲಿದೆ.

ಇದನ್ನೂ ಓದಿ: ನಗರದಲ್ಲಿ 3 ಲಕ್ಷ ಬೀದಿನಾಯಿ, ಲಾಕ್​ಡೌನ್​ ವೇಳೆ ಊಟ ಸಿಗದೇ ಮನುಷ್ಯರ ಮೇಲೆ ದಾಳಿ, ವೃದ್ಧೆ ಸಾವು: ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತಾ? 

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು