AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ; ದಿಗ್ವಿಜಯ್ ಸಿಂಗ್ ಹೇಳಿಕೆಗೆ ಸದಾನಂದ ಗೌಡ ಪ್ರತಿಕ್ರಿಯೆ

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್​ಗೆ ವಯಸ್ಸಾಗಿದೆ. ಪ್ರಾಯ ಮುಗಿದಿದೆ. ಹೀಗಾಗಿ ಈ ರೀತಿ ಮಾತನಾಡಿದ್ದಾರೆ. ಇದು ದೇಶ ವಿರೋಧಿ ಹೇಳಿಕೆ. ಯಾವತ್ತೂ ಇದನ್ನ ಸಹಿಸಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.

ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ; ದಿಗ್ವಿಜಯ್ ಸಿಂಗ್ ಹೇಳಿಕೆಗೆ ಸದಾನಂದ ಗೌಡ ಪ್ರತಿಕ್ರಿಯೆ
D.V.ಸದಾನಂದ ಗೌಡ
TV9 Web
| Updated By: sandhya thejappa|

Updated on: Jun 13, 2021 | 11:22 AM

Share

ಬೆಂಗಳೂರು: ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ದುಃಖದ ವಿಷಯ ಎಂಬ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅಧಿಕಾರಕ್ಕೆ ಬರಲು ಆಗಲ್ಲ. ಈಗಾಗಲೇ ಹಲವು ಎಲೆಕ್ಷನ್​ನಲ್ಲಿ ಅಸ್ತಿತ್ವ ಕಳೆದುಕೊಂಡಿದ್ದಾರೆ. ಕೇರಳ, ತಮಿಳುನಾಡಿನಲ್ಲಿ ಅಧ್ಯಾಯ ಮುಗಿದಿದೆ. ಪಶ್ಚಿಮ ಬಂಗಾಳಕ್ಕೆ ಹೋದರೆ ಕಾಂಗ್ರೆಸ್ ಪಕ್ಷವೇ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್​ಗೆ ವಯಸ್ಸಾಗಿದೆ. ಪ್ರಾಯ ಮುಗಿದಿದೆ. ಹೀಗಾಗಿ ಈ ರೀತಿ ಮಾತನಾಡಿದ್ದಾರೆ. ಇದು ದೇಶ ವಿರೋಧಿ ಹೇಳಿಕೆ. ಯಾವತ್ತೂ ಇದನ್ನ ಸಹಿಸಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.

ಇನ್ನು ಲಸಿಕೆ ಬಗ್ಗೆ ಮಾತನಾಡಿದ ಕೇಂದ್ರ ಸಚಿವ, ಕೊವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಪಡೆಯಬೇಕು. 20 ಕೋಟಿ ಜನ ಲಸಿಕೆ ಪಡೆದಿರುವ ಏಕೈಕ ದೇಶ ಭಾರತ. ಅಮೆರಿಕ, ಬ್ರಿಟನ್ ಸೇರಿ ಯಾವ ದೇಶಕ್ಕೂ ಇದು ಆಗಿಲ್ಲ. ಮಕ್ಕಳ ಮೇಲೂ ಕೊವಿಡ್ ಲಸಿಕೆ ಪ್ರಯೋಗ ನಡಿಯುತ್ತಿದೆ. ಲಸಿಕೆ ಬಗ್ಗೆ ಅಪಪ್ರಚಾರ ಮಾಡಿದ್ದವರೇ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ. ಕೊರೊನಾದಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನನ್ನವರನ್ನೂ ಕಳೆದುಕೊಂಡಿದ್ದೇನೆ ಎಂದು ಸದಾನಂದ ಗೌಡ ಭಾವುಕರಾಗಿ, ಒಂದು ನಿಮಿಷ ಮೌನಾಚರಣೆ ಮಾಡಿದರು.

ಇದನ್ನೂ ಓದಿ

ನಿಮ್ಮ ನಿಜವಾದ ಬಣ್ಣ ತೋರಿಸಿದ್ದೀರಿ; ದಿಗ್ವಿಜಯ್ ಸಿಂಗ್​ಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

ಶಿಕ್ಷಣ ಸಚಿವರ ವಿರುದ್ಧ ಅಸಮಧಾನ ಹೊರಹಾಕಿದ ಖಾಸಗಿ ಶಾಲೆಗಳ ಒಕ್ಕೂಟ; ಇಂದು ಸಭೆಗೆ ನಿರ್ಧಾರ

(DV Sadananda Gowda react to the Digvijaya Singh statement)

ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಸೇತುವೆ ಲೋಕಾರ್ಪಣೆಗೊಂಡು ಎರಡು ಗಂಟೆಯಲ್ಲೇ ಮುಚ್ಚಿದ್ದೇಕೆ?
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
ಲಿಫ್ಟ್​ ಬಾಗಿಲು ಹಾಕಿದ್ದೇಕೆಂದು ಗದರಿ ಬಾಲಕನ ಕೈ ಕಚ್ಚಿದ ವ್ಯಕ್ತಿ
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!