AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ತುಂಗಾ ಭದ್ರಾ ಡ್ಯಾಂ ಇನ್ ಡೇಂಜರ್: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಹೇಳಿದ್ದೇನು?

ಶಿವಮೊಗ್ಗ: ಮೈನಿಂಗ್ ಮಾಫಿಯಾ ಅಕ್ರಮದಿಂದ ನಿನ್ನೆ ರಾತ್ರಿ ಒಂದೇ ಒಂದು ಸ್ಫೋಟಕ್ಕೆ ಇಡೀ ಶಿವಮೊಗ್ಗ ಜಿಲ್ಲೆ ಶೇಕ್ ಆಗಿದೆ. ಅದೂ ಸ್ಫೋಟದ ಸ್ಥಳದಿಂದ ಭದ್ರಾ ಡ್ಯಾಂ 36 ಕಿ. ಮೀ. ದೂರದಲ್ಲಿದ್ದು, ತುಂಗಾ ಡ್ಯಾಂ ಕೇವಲ 18 ಕಿ ಮೀ ದೂರದಲ್ಲಿದೆ. ಒಂದು ವೇಳೆ ಸ್ಫೋಟದ ತೀವ್ರತೆ ಇನ್ನೂ ಹೆಚ್ಚಾಗಿದಿದ್ದದ್ದರೆ.. ಶಿವಮೊಗ್ಗ ಜಿಲ್ಲೆಗೆ ದೊಡ್ಡ ಗಂಡಾಂತರ ಇತ್ತು. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳು ಸೇರಿದಂತೆ ತಾಲೂಕುಗಳು ಮುಳುಗಡೆ ಆಗುವ ಸಾಧ್ಯತೆ ಇತ್ತು. ಅಕ್ರಮ ಗಣಿಗಾರಿಕೆಗೆ ಇದೊಂದು ದೊಡ್ಡ […]

Shivamogga Blast ತುಂಗಾ ಭದ್ರಾ ಡ್ಯಾಂ ಇನ್ ಡೇಂಜರ್: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಹೇಳಿದ್ದೇನು?
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ
ಸಾಧು ಶ್ರೀನಾಥ್​
|

Updated on:Jan 22, 2021 | 10:59 AM

Share

ಶಿವಮೊಗ್ಗ: ಮೈನಿಂಗ್ ಮಾಫಿಯಾ ಅಕ್ರಮದಿಂದ ನಿನ್ನೆ ರಾತ್ರಿ ಒಂದೇ ಒಂದು ಸ್ಫೋಟಕ್ಕೆ ಇಡೀ ಶಿವಮೊಗ್ಗ ಜಿಲ್ಲೆ ಶೇಕ್ ಆಗಿದೆ. ಅದೂ ಸ್ಫೋಟದ ಸ್ಥಳದಿಂದ ಭದ್ರಾ ಡ್ಯಾಂ 36 ಕಿ. ಮೀ. ದೂರದಲ್ಲಿದ್ದು, ತುಂಗಾ ಡ್ಯಾಂ ಕೇವಲ 18 ಕಿ ಮೀ ದೂರದಲ್ಲಿದೆ. ಒಂದು ವೇಳೆ ಸ್ಫೋಟದ ತೀವ್ರತೆ ಇನ್ನೂ ಹೆಚ್ಚಾಗಿದಿದ್ದದ್ದರೆ.. ಶಿವಮೊಗ್ಗ ಜಿಲ್ಲೆಗೆ ದೊಡ್ಡ ಗಂಡಾಂತರ ಇತ್ತು. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳು ಸೇರಿದಂತೆ ತಾಲೂಕುಗಳು ಮುಳುಗಡೆ ಆಗುವ ಸಾಧ್ಯತೆ ಇತ್ತು. ಅಕ್ರಮ ಗಣಿಗಾರಿಕೆಗೆ ಇದೊಂದು ದೊಡ್ಡ ಎಚ್ಚರಿಕೆ ಪಾಠವಾಗಬೇಕಿದೆ.

ಈ ಮಧ್ಯೆ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ನಿನ್ನೆ ರಾತ್ರಿಯೇ ಭದ್ರಾ ಜಲಾಶಯವನ್ನು ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 10.20ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಭಾರಿ ಕಂಪನದ ಹಿನ್ನೆಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯವನ್ನು ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಭದ್ರಾ ಕಾಡ ಪ್ರಾಧಿಕಾರವು ಸುಮಾರು 12ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಸುಮಾರು 5ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ. ನಿನ್ನೆ ರಾತ್ರಿಯ ಭೂ ಕಂಪನದಿಂದ ಜಲಾಶಯಕ್ಕೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಈ ಭರವಸೆಯ ಮಾತುಗಳನ್ನಾಡಿದ್ದಾರೆ.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ

Published On - 10:46 am, Fri, 22 January 21

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!