AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಬಳ್ಳಾರಿಯಲ್ಲಿ ಬಟ್ಟೆ ಅಂಗಡಿ ಓಪನ್; ಎಫ್ಐಆರ್ ದಾಖಲಿಸಲು ಡಿವೈಎಸ್​ಪಿ ಸೂಚನೆ

ಗ್ರಾಹಕರನ್ನು ಒಳಗಡೆ ಕಳುಹಿಸಿ ವ್ಯಾಪಾರಸ್ಥರು ಅಂಗಡಿಯನ್ನು ಮುಚ್ಚಿದರು. ಈ ವೇಳೆ ಬಟ್ಟೆ ಅಂಗಡಿ ಮೇಲೆ ಬಳ್ಳಾರಿ ನಗರ ಡಿವೈಎಸ್​ಪಿ ರಮೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಯಿತು. ಆಗ ಅಂಗಡಿ ಒಳಗಿದ್ದ ಗ್ರಾಹಕರು ಹೊರಗಡೆ ಬಂದರು.

ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಬಳ್ಳಾರಿಯಲ್ಲಿ ಬಟ್ಟೆ ಅಂಗಡಿ ಓಪನ್; ಎಫ್ಐಆರ್ ದಾಖಲಿಸಲು ಡಿವೈಎಸ್​ಪಿ ಸೂಚನೆ
ಬೇಕಾಬಿಟ್ಟಿಯಾಗಿ ಓಡಾಡುತ್ತಿರುವ ಬಳ್ಳಾರಿ ಜನರು
sandhya thejappa
sandhya thejappa|

Updated on: May 10, 2021 | 11:07 AM

Share

ಬಳ್ಳಾರಿ: ಕೊರೊನಾ ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ರಾಜ್ಯಾದ್ಯಂತ ಲಾಕ್​ಡೌನ್​ ಜಾರಿಗೊಳಿಸಿದೆ. ಅಗತ್ಯ ವಸ್ತುಗಳ ಖರೀದಿಸಲು ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10 ಗಂಟೆ ವರೆಗೆ ಅವಕಾಶ ನೀಡಿದೆ. ಬೇರೆ ಎಲ್ಲ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಮಾಡುವಂತೆ ಸೂಚನೆ ನೀಡಿದೆ. ಹೀಗಿದ್ದೂ, ಬಳ್ಳಾರಿಯಲ್ಲಿ ಲಾಕ್​ಡೌನ್​ ನಿಯಮವನ್ನು ಉಲ್ಲಂಘಿಸಿ ಬಟ್ಟೆ ಅಂಗಡಿಯನ್ನು ತೆರೆದಿದ್ದಾರೆ.

ಗ್ರಾಹಕರನ್ನು ಒಳಗಡೆ ಕಳುಹಿಸಿ ವ್ಯಾಪಾರಸ್ಥರು ಅಂಗಡಿಯನ್ನು ಮುಚ್ಚಿದರು. ಈ ವೇಳೆ ಬಟ್ಟೆ ಅಂಗಡಿ ಮೇಲೆ ಬಳ್ಳಾರಿ ನಗರ ಡಿವೈಎಸ್​ಪಿ ರಮೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಯಿತು. ಆಗ ಅಂಗಡಿ ಒಳಗಿದ್ದ ಗ್ರಾಹಕರು ಹೊರಗಡೆ ಬಂದರು. ನಿಯಮ ಉಲ್ಲಂಘಿಸಿದ ಅಂಗಡಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಡಿವೈಎಸ್​ಪಿ ಸೂಚನೆ ನೀಡಿದರು.

ರಾಯಚೂರಿನ ಪೊಲೀಸರು ಫುಲ್ ಗರಂ ರಾಯಚೂರು: ಲಾಕ್​ಡೌನ್​ ನಡುವೆಯೂ ವಾಹನಗಳು ಓಡಾಡುತ್ತಿರುವ ಹಿನ್ನೆಲೆ ರಾಯಚೂರಿನ ಪೊಲೀಸರು ಫುಲ್ ಗರಂ ಆಗಿದ್ದಾರೆ. ಅನಾವಶ್ಯಕವಾಗಿ ರಸ್ತಗೆ ಇಳಿದವರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದ ಬಟ್ಟೆ ಬಜಾರ್​ನಲ್ಲಿ ಬೇಕಾಬಿಟ್ಟಿಯಾಗಿ ಜನರು ಓಡಾಡುತ್ತಿದ್ದಾರೆ. ಜನರ ಓಡಾಟ ತಪ್ಪಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಪೊಲೀಸರು ಆಟೋ ಚಾಲಕರು ಹಾಗೂ ಬೈಕ್ ಸವಾರರ ವಿರುದ್ಧ ಗರಂ ಆಗಿದ್ದರೂ, ಕೇರ್ ಮಾಡದಂತೆ ಜನರು ಓಡಾಡುತ್ತಿದ್ದಾರೆ.

ಜೀವ ಉಳಿಯಲಿ ಎಂದ ವ್ಯಾಪಾರಸ್ಥರು ಬೆಂಗಳೂರು: ಜನ ಕೊರೊನಾ ಬಂದು ಸಾಯುತ್ತಿದ್ದಾರೆ. ನಾವು ವ್ಯಾಪಾರ ಇಲ್ಲದೆ ಕೊರಗಿ ಕೊರಗಿ ಸಾಯುತ್ತಿದ್ದೀವಿ. 1000 ರೂಪಾಯಿ ಸೌತೆಕಾಯಿ ತಂದಿದ್ದೀನಿ. 200 ರೂಪಾಯಿ ವ್ಯಾಪಾರ ಕೂಡ ಆಗಿಲ್ಲ. ಹೀಗಾದರೆ ಜೀವನ ನಡೆಸುವುದು ಹೇಗೆ? ಎಂದು ಯಶವಂತಪುರ ಬಳಿ ವ್ಯಾಪಾರಸ್ಥರ ಅಳಲು ತೋಡಿಕೊಂಡಿದ್ದಾರೆ. ವ್ಯಾಪಾರ ಮೊದಲ ಹಾಗೆ ಇಲ್ಲ. ತುಂಬಾನೇ ಕಡಿಮೆ ಆಗೋಗಿದೆ. ಆದರು ಪರವಾಗಿಲ್ಲ. ಹೀಗೆ ಲಾಕ್​ಡೌನ್​ ಮಾಡಿದರು ಪರವಾಗಿಲ್ಲ. ವ್ಯಾಪಾರ ಮುಂದೆ ಒಂದಿನ ಮಾಡಬಹುದು. ಸದ್ಯಕ್ಕೆ ಈಗ ಜೀವ ಉಳಿಯಲಿ ಎಂದು ಕೆಲ ವ್ಯಾಪಾರಸ್ಥರು ಹೇಳುತ್ತಿದ್ದಾರೆ.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

(DYSP raided an open clothing store in violation of lockdown rule at Bellary)

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ