Karnataka: ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ
ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯ ಮತ್ತು ಸುಳ್ಯ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ರಾಜ್ಯದ 14 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸಿದ್ದು, ದೇವಸ್ಥಾನಗಳಿಗೆ ತೆರಳಲು ಸಾಧ್ಯವಾಗದ ಭಕ್ತರು http://www.csc.devalaya.com ವೆಬ್ಸೈಟ್ ಮೂಲಕ ಮನೆ ಬಾಗಿಲಿಗೆ ಪ್ರಸಾದವನ್ನು ತರಿಸಿಕೊಳ್ಳಬಹುದು. ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ ಇದೆ.

ಬೆಂಗಳೂರು, ಮಾರ್ಚ್ 30: ಕರ್ನಾಟಕದ ಪ್ರಮುಖ ದೇವಸ್ಥಾನ(Temple)ಗಳ ಪ್ರಸಾದ(Prasad)ವನ್ನು ಭಕ್ತರ ಮನೆಗಳಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಚಾಲನೆ ನೀಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಬೇರೆ ರಾಜ್ಯಗಳ ಭಕ್ತರೂ ಕೂಡ ನಮ್ಮ ರಾಜ್ಯದ ದೇವಾಲಯಗಳ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿ, ಕೆಲ ಸಂದರ್ಭದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ, ಅಂಥಾ ಸಂದರ್ಭದಲ್ಲಿ ಇ-ಪ್ರಸಾದ ಸೇವೆ ಮೂಲಕ ಆರ್ಡರ್ ಮಾಡಿ ಪ್ರಸಾದ ತರಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ನೋ ಲಾಸ್, ನೋ ಪ್ರಾಫಿಟ್ ಅಡಿಯಲ್ಲಿ ಭಕ್ತರಿಗೆ ಸೇವೆ ನೀಡಲಾಗುವುದು.
100 ರಿಂದ 200 ರೂಪಾಯಿಗಳಲ್ಲಿ ಮನೆ ಬಾಗಿಲಿಗೆ ಪ್ರಸಾದ ಕಳುಹಿಸಲಾಗುವುದು ಎಂದು ಹೇಳಿದ್ದರು. ಇದೀಗ ಐದು ಸಾವಿರಕ್ಕೂ ಹೆಚ್ಚು ಭಕ್ತರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಆದರೆ ಜತೆ ಜತೆಯಲ್ಲೇ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನ, ಸವದತ್ತಿ ಯಲ್ಲಮ್ಮನ ಪ್ರಸಾದಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಇದುವರೆಗೆ ಬಂದಿರುವ ಬೇಡಿಕೆಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಯಲ್ಲಮ್ಮ ಹಾಗೂ ಮೂಕಾಂಬಿಕಾದೇವಸ್ಥಾನದ ಪ್ರಸಾದಕ್ಕೆ ಹೆಚ್ಚಿದೆ.
ಗ್ರಾಮಗಳಲ್ಲಿರುವ ಕಾಮನ್ ಸರ್ವೀಸ್ ಸೆಂಟ್ಗೆ ಹೋಗಿ ಮೊದಲು ನೋಂದಾಯಿಸಿಕೊಳ್ಳಬೇಕಿದೆ, ಮುಂಬರುವ ದಿನಗಳಲ್ಲಿ ಮೊಬೈಲ್ನಿಂದ ಆರ್ಡರ್ ಮಾಡಿ ತರಿಸಿಕೊಳ್ಳಬಹುದು. ಪ್ರಸಾದ್ ಸೇವನೆಯಿಂದ ಅಲ್ಲಲ್ಲಿ ಕೆಟ್ಟ ಘಟನೆಗಳು ಸಂಭವಿಸುತ್ತಿರುವುದರಿಂದ ಶುದ್ಧತೆ ಕಡೆ ಹೆಚ್ಚು ಗಮನಕೊಡಲಾಗಿದೆ.
ಮತ್ತಷ್ಟು ಓದಿ:ನಿಮ್ಮ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ: ತರಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಸಾಮಾನ್ಯವಾಗಿ ಆಯಾ ದೇವಾಲಯಗಳಲ್ಲಿ ನಿತ್ಯ ವಿತರಿಸುವ ಕಲಗಲುಸಕ್ಕರೆ, ಕುಂಕುಮ, ಬಿಲ್ವಪತ್ರೆ, ದ್ರಾಕ್ಷಿ, ವಿಭೂತಿ, ತುಳಿಸಿ, ತೀರ್ಥ, ಭಾವಚಿತ್ರ, ದಾರವನ್ನು ಕಳುಹಿಸಲಾಗುತ್ತದೆ. ವೆವ್ಸೈಟ್ ವಿಳಾಸ: https://csc.devalayas.com/
ಯಾವೆಲ್ಲ ದೇವಾಲಯಗಳ ಪ್ರಸಾದ ಲಭ್ಯ? -ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ದ.ಕ. -ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ, ಉಡುಪಿ -ಶ್ರೀ ವಿನಾಯಕ ಸ್ವಾಮಿ ದೇವಾಲಯ ಜಯನಗರ, ಬೆಂಗಳೂರು -ಶ್ರೀ ಚಲುವನಾರಾಯಣ ಸ್ವಾಮಿ ದೇವಾಲಯ, ಮಂಡ್ಯ -ನಂಜನಗೂಡು ಶೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ಮೈಸೂರು -ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯ ಮಾಲೂರು, ಕೋಲಾರ -ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ, ಹಲಸೂರು ಬೆಂಗಳೂರು -ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಗವೀಪುರಂ, ಬೆಂಗಳೂರು -ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನ, ಬೀದರ್ -ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಯಲ್ಲಮ್ಮನಗುಡ್ಡ, ಬೆಳಗಾವಿ – ಶ್ರೀ ಕನಕ ದುರ್ಗಮ್ಮ ದೇವಾಲಯ, ಬಳ್ಳಾರಿ -ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ಹೂವಿನ ಹಡಗಲಿ, ವಿಜಯನಗರ -ಶ್ರೀ ಹುಲಿಗಮ್ಮ ದೇವಾಲಯ ಹುಲಿಗಿ, ಕೊಪ್ಪಳ -ಶ್ರೀ ಗುರುದತ್ತಾತ್ರೇಯ ಸ್ವಾಮಿ ದೇವಾಲಯ ಗಾಣಗಾಪುರ, ಗುಲ್ಬರ್ಗ ಇರುವುದಾಗಿ ತಿಳಿಸಲಾಗಿತ್ತು.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ