AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್: ಸ್ಫೋಟಕ ವಿಚಾರ ಬೆಳಕಿಗೆ

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿಯಿಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಟೆಂಡರ್ ಬಿಡ್ಡಿಂಗ್ ಆಪ್ ಇ-ಪ್ರಕ್ಯೂರ್ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ ಮತ್ತು ಟೀಂ, ಕೇವಲ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ ಹವಾಲ ಹಣ ವರ್ಗಾವಣೆ ಮಾಡಿರುವುದು ಕೂಡ ತಿಳಿದುಬಂದಿದೆ.

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್: ಸ್ಫೋಟಕ ವಿಚಾರ ಬೆಳಕಿಗೆ
ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್ ಸಂಬಂಧ ಸ್ಫೋಟಕ ವಿಚಾರ ಬೆಳಕಿಗೆ (ಸಾಂದರ್ಭಿಕ ಚಿತ್ರ)Image Credit source: Mikko Lemola | Getty Images
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on: Oct 12, 2023 | 7:50 AM

Share

ಬೆಂಗಳೂರು, ಅ.12: ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ (E-Procurement) ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿಯಿಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಟೆಂಡರ್ ಬಿಡ್ಡಿಂಗ್ ಆಪ್ ಇ-ಪ್ರಕ್ಯೂರ್ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ ಮತ್ತು ಟೀಂ, ಕೇವಲ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ ಹವಾಲ ಹಣ ವರ್ಗಾವಣೆ ಮಾಡಿರುವುದು ಕೂಡ ತಿಳಿದುಬಂದಿದೆ.

ಟೆಂಡರ್ ಬಿಡ್ಡಿಂಗ್​ಗೂ ಮೊದಲು ಶ್ರೀಕಿ ವೆಬ್ ಸೈಟ್ ಹ್ಯಾಕ್ ಮಾಡಿದ್ದ. ಶ್ರೀಕಿಗೆ ಸುನೀಶ್ ಹೆಗ್ಗಡೆ ಇದನ್ನು ಮಾಡಿವಂತೆ ತಿಳಿಸಿದ್ದಾನೆ. ಗುತ್ತಿಗೆದಾರರು ಟೆಂಡರ್​ಗೂ ಮುನ್ನಾ ನಿಗದಿತ ಹಣವನ್ನ ಸರ್ಕಾರಿ ಖಾತೆಗೆ ಡೆಪಾಸಿಟ್ ಮಾಡುತ್ತಾರೆ. ಟೆಂಡರ್ ಪಡೆದ ಗುತ್ತಿಗೆದಾರನ ಹೊರತಾಗಿ ಬಿಡ್ಡಿಂಗ್​ನಲ್ಲಿ ಭಾಗಿಯಾದ ಉಳಿದವರಿಗೆ ಡೆಪಾಸಿಟ್ ಹಣ ವಾಪಸ್ಸಾಗತ್ತದೆ.

ಆದರೆ, ವೆಬ್ ಸೈಟ್ ಹ್ಯಾಕ್ ಮಾಡಿದ ಶ್ರೀಕಿ ಹಣವನ್ನು ನಾಗಪುರದ ಎನ್​ಜಿಒ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಸಂಬಂಧ ಹರ್ವಿಂದರ್ ಸಿಂಗ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಸರ್ಕಾರಿ ವೆಬ್ ಸೈಟ್ ಹ್ಯಾಕ್ ಮಾಡಿದ 11.5 ಕೋಟಿ ದುಡ್ಡಲ್ಲಿ 2.5 ಕೋಟಿ ಶ್ರೀಕಿ ಪಾಲಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಕೇವಲ ಸರ್ಕಾರಿ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ, ಹವಾಲ ದಂಧೆಯಲ್ಲೂ ಹ್ಯಾಕರ್​ನ ಪಾತ್ರ ತಿಳಿದುಬಂದಿದೆ. ಸರ್ಕಾರಿ ವೆಬ್ ಸೈಟ್ ಹ್ಯಾಕಿ ಮಾಡಿ ಹವಾಲ ದಂಧೆ ಮೂಲಕ ಶ್ರೀಕಿ ಮತ್ತು ಸುನೀಶ್ ಹೆಗ್ಡೆ ತಂಡ ಹಣ ವರ್ಗಾವಣೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಅಂಗಡಿಯಾ ಅನ್ನೊ ಹವಾಲ ದಂಧೆಯ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಗುಜರಾತ್ ಮೂಲದ ಪಿ.ಉಮೇಶ್ ಚಂದ್ರ ಆ್ಯಂಡ್ ಸನ್ಸ್ ಎಂಬ ಎಲ್​ಎಲ್​ಪಿ ಕಂಪನಿಯ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿಸಿದ್ದಾರೆ. ದೇಶಾದ್ಯಂತ ಬಹಳಷ್ಟು ಹವಾಲ ಹಣ ವರ್ಗಾವಣೆ ಕಂಪನಿಗಳಿರುವುದು ಹಾಗೂ ಯಾವುದೇ ಅಕೌಂಟ್ ಡೇಟಾಗಳಿಲ್ಲದೇ ಹವಾಲ ದಂಧೆ ನಡೆಸುತ್ತಿರುವುದು ಸಿಐಡಿಯಿಂದ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ