AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್: ಸ್ಫೋಟಕ ವಿಚಾರ ಬೆಳಕಿಗೆ

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿಯಿಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಟೆಂಡರ್ ಬಿಡ್ಡಿಂಗ್ ಆಪ್ ಇ-ಪ್ರಕ್ಯೂರ್ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ ಮತ್ತು ಟೀಂ, ಕೇವಲ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ ಹವಾಲ ಹಣ ವರ್ಗಾವಣೆ ಮಾಡಿರುವುದು ಕೂಡ ತಿಳಿದುಬಂದಿದೆ.

ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್: ಸ್ಫೋಟಕ ವಿಚಾರ ಬೆಳಕಿಗೆ
ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ ವಂಚನೆ ಕೇಸ್ ಸಂಬಂಧ ಸ್ಫೋಟಕ ವಿಚಾರ ಬೆಳಕಿಗೆ (ಸಾಂದರ್ಭಿಕ ಚಿತ್ರ)Image Credit source: Mikko Lemola | Getty Images
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: Rakesh Nayak Manchi|

Updated on: Oct 12, 2023 | 7:50 AM

Share

ಬೆಂಗಳೂರು, ಅ.12: ಹ್ಯಾಕರ್ ಶ್ರೀಕೃಷ್ಣನಿಂದ ಇ- ಪ್ರೊಕ್ಯೂರ್ಮೆಂಟ್ (E-Procurement) ವಂಚನೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್​ಐಟಿಯಿಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಟೆಂಡರ್ ಬಿಡ್ಡಿಂಗ್ ಆಪ್ ಇ-ಪ್ರಕ್ಯೂರ್ಮೆಂಟ್ ವೆಬ್ ಸೈಟ್ ಹ್ಯಾಕ್ ಮಾಡಿದ್ದ ಶ್ರೀಕಿ ಮತ್ತು ಟೀಂ, ಕೇವಲ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ ಹವಾಲ ಹಣ ವರ್ಗಾವಣೆ ಮಾಡಿರುವುದು ಕೂಡ ತಿಳಿದುಬಂದಿದೆ.

ಟೆಂಡರ್ ಬಿಡ್ಡಿಂಗ್​ಗೂ ಮೊದಲು ಶ್ರೀಕಿ ವೆಬ್ ಸೈಟ್ ಹ್ಯಾಕ್ ಮಾಡಿದ್ದ. ಶ್ರೀಕಿಗೆ ಸುನೀಶ್ ಹೆಗ್ಗಡೆ ಇದನ್ನು ಮಾಡಿವಂತೆ ತಿಳಿಸಿದ್ದಾನೆ. ಗುತ್ತಿಗೆದಾರರು ಟೆಂಡರ್​ಗೂ ಮುನ್ನಾ ನಿಗದಿತ ಹಣವನ್ನ ಸರ್ಕಾರಿ ಖಾತೆಗೆ ಡೆಪಾಸಿಟ್ ಮಾಡುತ್ತಾರೆ. ಟೆಂಡರ್ ಪಡೆದ ಗುತ್ತಿಗೆದಾರನ ಹೊರತಾಗಿ ಬಿಡ್ಡಿಂಗ್​ನಲ್ಲಿ ಭಾಗಿಯಾದ ಉಳಿದವರಿಗೆ ಡೆಪಾಸಿಟ್ ಹಣ ವಾಪಸ್ಸಾಗತ್ತದೆ.

ಆದರೆ, ವೆಬ್ ಸೈಟ್ ಹ್ಯಾಕ್ ಮಾಡಿದ ಶ್ರೀಕಿ ಹಣವನ್ನು ನಾಗಪುರದ ಎನ್​ಜಿಒ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಸಂಬಂಧ ಹರ್ವಿಂದರ್ ಸಿಂಗ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಸರ್ಕಾರಿ ವೆಬ್ ಸೈಟ್ ಹ್ಯಾಕ್ ಮಾಡಿದ 11.5 ಕೋಟಿ ದುಡ್ಡಲ್ಲಿ 2.5 ಕೋಟಿ ಶ್ರೀಕಿ ಪಾಲಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬಿಟ್​ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ

ಕೇವಲ ಸರ್ಕಾರಿ ವೆಬ್ ಸೈಟ್ ಹ್ಯಾಕ್ ಮಾತ್ರವಲ್ಲ, ಹವಾಲ ದಂಧೆಯಲ್ಲೂ ಹ್ಯಾಕರ್​ನ ಪಾತ್ರ ತಿಳಿದುಬಂದಿದೆ. ಸರ್ಕಾರಿ ವೆಬ್ ಸೈಟ್ ಹ್ಯಾಕಿ ಮಾಡಿ ಹವಾಲ ದಂಧೆ ಮೂಲಕ ಶ್ರೀಕಿ ಮತ್ತು ಸುನೀಶ್ ಹೆಗ್ಡೆ ತಂಡ ಹಣ ವರ್ಗಾವಣೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಅಂಗಡಿಯಾ ಅನ್ನೊ ಹವಾಲ ದಂಧೆಯ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಗುಜರಾತ್ ಮೂಲದ ಪಿ.ಉಮೇಶ್ ಚಂದ್ರ ಆ್ಯಂಡ್ ಸನ್ಸ್ ಎಂಬ ಎಲ್​ಎಲ್​ಪಿ ಕಂಪನಿಯ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿಸಿದ್ದಾರೆ. ದೇಶಾದ್ಯಂತ ಬಹಳಷ್ಟು ಹವಾಲ ಹಣ ವರ್ಗಾವಣೆ ಕಂಪನಿಗಳಿರುವುದು ಹಾಗೂ ಯಾವುದೇ ಅಕೌಂಟ್ ಡೇಟಾಗಳಿಲ್ಲದೇ ಹವಾಲ ದಂಧೆ ನಡೆಸುತ್ತಿರುವುದು ಸಿಐಡಿಯಿಂದ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!