AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ 980 ಕೋಟಿ ಹಣ ಬರಬೇಕು: ಹೆಚ್.ಕೆ ಪಾಟೀಲ್

ರಾಮನಗರ: ರಾಜಕೀಯ ಬಲ್ಲ ಎಳೇ ಮಗುವಿಗೂ ಈಗಲ್ಟನ್ ರೆಸಾರ್ಟ್ ಗೊತ್ತು. ಅದರ ಕುಖ್ಯಾತಿ ನಾಡಿನುದ್ದಗಲಕ್ಕೂ ಹರಡಿದೆ. ಈ ಮಧ್ಯೆ ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ ಎಷ್ಟು ಹಣ ಬರಬೇಕು ಎಂಬುದನ್ನು ಕಾಂಗ್ರೆಸ್​ನ ಹಿರಿಯ ನಾಯಕರಾದ ಹೆಚ್.ಕೆ ಪಾಟೀಲರೇ ಹೇಳಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್​ವರೆಗೂ ಹೋಗಿದೆ. ಆದರೂ ಸರ್ಕಾರಕ್ಕೆ ಒಂದು ರೂಪಾಯಿ ಬಂದಿಲ್ಲ ಎಂದು ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ ಪಾಟೀಲರೇ ಮಾಹಿತಿ ನೀಡಿದ್ದಾರೆ. ಈಗಲ್ಟನ್ ರೆಸಾರ್ಟ್ ಒಟ್ಟು 508 ಎಕರೆ ಪ್ರದೇಶದಲ್ಲಿ ಇದೆ. ಅದರಲ್ಲಿ 208 […]

ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ 980 ಕೋಟಿ ಹಣ ಬರಬೇಕು: ಹೆಚ್.ಕೆ ಪಾಟೀಲ್
ಸಾಧು ಶ್ರೀನಾಥ್​
|

Updated on:Feb 04, 2020 | 4:51 PM

Share

ರಾಮನಗರ: ರಾಜಕೀಯ ಬಲ್ಲ ಎಳೇ ಮಗುವಿಗೂ ಈಗಲ್ಟನ್ ರೆಸಾರ್ಟ್ ಗೊತ್ತು. ಅದರ ಕುಖ್ಯಾತಿ ನಾಡಿನುದ್ದಗಲಕ್ಕೂ ಹರಡಿದೆ. ಈ ಮಧ್ಯೆ ಈಗಲ್ಟನ್ ರೆಸಾರ್ಟ್​ನಿಂದ ಸರ್ಕಾರಕ್ಕೆ ಎಷ್ಟು ಹಣ ಬರಬೇಕು ಎಂಬುದನ್ನು ಕಾಂಗ್ರೆಸ್​ನ ಹಿರಿಯ ನಾಯಕರಾದ ಹೆಚ್.ಕೆ ಪಾಟೀಲರೇ ಹೇಳಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್​ವರೆಗೂ ಹೋಗಿದೆ. ಆದರೂ ಸರ್ಕಾರಕ್ಕೆ ಒಂದು ರೂಪಾಯಿ ಬಂದಿಲ್ಲ ಎಂದು ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಹೆಚ್.ಕೆ ಪಾಟೀಲರೇ ಮಾಹಿತಿ ನೀಡಿದ್ದಾರೆ.

ಈಗಲ್ಟನ್ ರೆಸಾರ್ಟ್ ಒಟ್ಟು 508 ಎಕರೆ ಪ್ರದೇಶದಲ್ಲಿ ಇದೆ. ಅದರಲ್ಲಿ 208 ಎಕರೆ 33 ಗುಂಟೆ ಭೂಮಿ ಸರ್ಕಾರದ್ದು. ಈ ವಾಜ್ಯ ಸುಪ್ರೀಂ ಕೋರ್ಟ್ ವರೆಗೂ ಹೋಗಿದೆ. ಈ ವಿಚಾರವಾಗಿ ಕ್ಯಾಬಿನೆಟ್ ಕಮಿಟಿ, ಸಬ್ ಕಮಿಟಿ ಕೂಡ ನೇಮಕವಾಗಿದೆ. ಇದರಲ್ಲಿ 28 ಎಕರೆ ಭೂಮಿಯನ್ನ ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಅಲ್ಲಿರುವ 77 ಎಕರೆ ಭೂಮಿಗೆ 980 ಕೋಟಿ ಹಣವನ್ನು ಕಟ್ಟಬೇಕಿತ್ತು. ಆದ್ರೆ ಅವರು ಹಣವನ್ನು ಕಟ್ಟಿಲ್ಲ. ಈ ಕುರಿತು ಕೋರ್ಟ್ ಗೆ ಹೋಗಿದ್ದಾರೆ.

ಉಳಿಕೆ ಸರ್ಕಾರಿ ಭೂಮಿ ಕೂಡ ಇದೆ. 28 ಎಕರೆ ವೀಕ್ಷಣೆ ಮಾಡಲಾಗಿದೆ. ಆದ್ರೆ ಅದು ಸರ್ಕಾರಿ ಭೂಮಿ ಎಂದು ಬೋರ್ಡ್ ಹಾಕಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಉಳಿಕೆ ಭೂಮಿಯನ್ನು ವಶಕ್ಕೆ ಪಡೆಯಲು ಕಾನೂನಾತ್ಮಕವಾಗಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನನ್ನ ಗಾಳಿಗೆ ತೂರಿ ಜಮೀನನ್ನ ಒತ್ತುವರಿ ಮಾಡಿದ್ದಾರೆ. ಆಡಳಿತ ವ್ಯವಸ್ಥೆ ಕುಸಿಯುವಂತೆ ಮಾಡಿದ್ದಾರೆ. ಕಂದಾಯ ಇಲಾಖೆ ಸುಪ್ರಿಂ ಕೋರ್ಟ್ ಗೆ ಸಲ್ಲಿಸಿರುವ ದಾಖಲೆಯಲ್ಲಿ 208 ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ತಿಳಿಸಿದೆ.

Published On - 4:16 pm, Tue, 4 February 20

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?