AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura Earthquake: ಸಾಯಂಕಾಲ ಆಯ್ತು, ಇದೀಗ ರಾತ್ರಿಯೂ ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರದ ಹಲವೆಡೆ ಸಂಜೆ 4.26ಕ್ಕೆ ಭೂಕಂಪನವಾಗಿದೆ. ಅದಾದ ಮೇಲೆ ಪದೇಪದೆ ಭೂಕಂಪನವಾಗುತ್ತಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ.

Vijayapura Earthquake: ಸಾಯಂಕಾಲ ಆಯ್ತು, ಇದೀಗ ರಾತ್ರಿಯೂ ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Aug 22, 2022 | 9:48 PM

Share

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಜಿಲ್ಲೆಯ ಹಲವೆಡೆ ಸಂಜೆ 4.26ಕ್ಕೆ ಭೂಕಂಪನವಾಗಿದ್ದು ಪದೇಪದೆ ಭೂಕಂಪನವಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.6ರಷ್ಟು ದಾಖಲಾಗಿದೆ. ಸಾಯಂಕಾಲದ ಬಳಿಕ ಇದೀಗಾ ಮತ್ತೇ ನಗರದ ಜನತೆ ಭೂಕಂಪನದ ಅನುಭವ ಪಡೆದಿದ್ದಾರೆ.  ಇದರ ಜೊತೆಗೆ ಇಂದು ಸೋಮವಾರ ರಾತ್ರಿ 9.23ಕ್ಕೆ ವಿಜಯಪುರ ನಗರದಲ್ಲಿ ಮತ್ತೆ ಕಂಪನದ ಅನುಭವವಾಗಿದೆ. ವಿಜಯಪುರ ನಗರದ ರೈಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮಟ ಏರಿಯಾ ಸೇರಿದಂತೆ ಬಹುತೇಕ ಕಡೆಗಳಲ್ಲಿ‌ ಭೂಮಿಯಲ್ಲಿ ಸದ್ದು ಕೇಳಿಬಂದಿದೆ.

ಕಳೆದ ವಾರವೂ ಇಲ್ಲಿ ಭೂಕಂಪನದ ಅನುಭವವಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಸಮಗ್ರ ಮಾಹಿತಿ ನೀಡಿದ್ದಾರೆ. ನಿರಂತರ ಭೂಕಂಪನ ಕುರಿತು ಹೆಚ್ಚಿನ ಅಧ್ಯಯನ ಮಾಡಿಸಬೇಕೆಂದು ಜನರು ಒತ್ತಾಯಿಸಿದ್ದಾರೆ (Earthquake, Vijayapura).

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು (Aug 21 ವರದಿ)

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಆಗಸ್ಟ್‌ 19ರ ರಾತ್ರಿ 8.16ಕ್ಕೆ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ. ಜನರು ಮನೆ ಬಿಟ್ಟು ಹೊರಗೋಡಿ ಬಂದಿದ್ದು, ಕೆಲ ಮನೆಗಳಲ್ಲಿನ ಪಾತ್ರೆ ಪಗಡೆ ಕೆಳಗೆ ಬಿದ್ದಿದ್ದವು. ಜನರು ಭೂಕಂಪನದಿಂದ ಆತಂಕಗೊಂಡಿದ್ದರು.

ವಿಜಯಪುರ ‌ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ಶನಿವಾರ ಸಂಜೆ ಭೂಕಂಪದ ಅನುಭವಾಗಿದೆ.(Aug 20 ವರದಿ)

ವಿಜಯಪುರ ‌ಜಿಲ್ಲೆಯಲ್ಲಿ (Vijayapura) ಮತ್ತೆ ಭೂಮಿ ನಡುಗಿದೆ (Mild Earthquake). ಶನಿವಾರ ರಾತ್ರಿ 8.16 ಕ್ಕೆ ಭೂಕಂಪದ ಅನುಭವಾಗಿದೆ. ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆಸ್ತಿಪಾಸ್ತಿ ನಷ್ಟದ ಬಗ್ಗೆಯೂ ವರದಿಯಾಗಿಲ್ಲ.

ವಿಜಯಪುರ ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದೆ. ವಿಜಯಪುರ ‌ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ದಾರೆ. ಈ ಮಧ್ಯೆ ಭೂಕಂಪನದ ತೀವ್ರತೆಯ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಅಧಿಕಥೃತ ಮಾಹಿತಿ ನೀಡಬೇಕಿದೆ.

Published On - 7:32 pm, Mon, 22 August 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!