AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಉಳಿಸಿಕೊಂಡ BSY: ರೈತರಿಗೆ ಏಕಕಾಲದಲ್ಲಿ 660 ಕೋಟಿ ಹಣ ಬಿಡುಗಡೆಯಾಯ್ತು!

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ನೆಲಕಚ್ಚಿದ್ದ ರೈತರ ಬದುಕಿಗೆ ಆಸರೆಯಾಗುವುದಾಗಿ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ರೈತರಿಗೆ ಪರಿಹಾರ ನೀಡುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ವೇಳೆ, ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ ಆನ್ ಮೂಲಕ ನೇರವಾಗಿ ಅವರವರ ಅಕೌಂಟ್ ಗೆ ಪರಿಹಾರ ಮೊತ್ತ ಸಂದಾಯ ಮಾಡಿದ್ದಾರೆ. ಇದರಿಂದ ಏಕಕಾಲದಲ್ಲಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ […]

ಮಾತು ಉಳಿಸಿಕೊಂಡ BSY: ರೈತರಿಗೆ ಏಕಕಾಲದಲ್ಲಿ 660 ಕೋಟಿ ಹಣ ಬಿಡುಗಡೆಯಾಯ್ತು!
ಸಾಧು ಶ್ರೀನಾಥ್​
| Edited By: |

Updated on:Jun 02, 2020 | 3:17 PM

Share

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ನೆಲಕಚ್ಚಿದ್ದ ರೈತರ ಬದುಕಿಗೆ ಆಸರೆಯಾಗುವುದಾಗಿ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ರೈತರಿಗೆ ಪರಿಹಾರ ನೀಡುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಈ ವೇಳೆ, ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ ಆನ್ ಮೂಲಕ ನೇರವಾಗಿ ಅವರವರ ಅಕೌಂಟ್ ಗೆ ಪರಿಹಾರ ಮೊತ್ತ ಸಂದಾಯ ಮಾಡಿದ್ದಾರೆ. ಇದರಿಂದ ಏಕಕಾಲದಲ್ಲಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಆನ್​ಲೈನ್ ಮೂಲಕ ಸಿಎಂ ಬಿಡುಗಡೆ ಮಾಡಿದ್ರು. ನಂತರ ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಆಗಿರುವುದನ್ನು ಯಡಿಯೂರಪ್ಪ ಖಾತರಿಪಡಿಸಿಕೊಂಡರು.

ಇದೇ ಸಂದರ್ಭದಲ್ಲಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ 100 ದಿನಗಳ ಪ್ರಗತಿಯ ವರದಿಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ರೈತರ ಸಂಪೂರ್ಣ ಮಾಹಿತಿ ಇದೆ, ಎಲ್ಲ ರೈತರಿಗೆ ಹಣ ತಲುಪಿಸಲಾಗುತ್ತೆ ಮೆಕ್ಕೆ ಜೋಳ ಬೆಳೆದ 10 ಲಕ್ಷ ರೈತರಿಗೆ ಇಂದು ಪರಿಹಾರ ನೀಡೋ ಕೆಲಸ ಆರಂಭವಾಗಿದೆ. ಇಂದು ಏಕಕಾಲದಲ್ಲಿ 943 ರೈತರಿಗೆ ಆನ್ ಲೈನ್ ಮೂಲಕ ಹಣ ತಲುಪಿದೆ. ಮುಂದಿನ 15 ದಿನಗಳಲ್ಲಿ ಎಲ್ಲಾ ಮೆಕ್ಕೆಜೋಳ ಬೆಳೆದ ರೈತರಿಗೆ ಹಣ ತಲುಪಿಸಲಾಗುತ್ತೆ. ನಮ್ಮ ಬಳಿ ರೈತರ ಸಂಪೂರ್ಣ ಮಾಹಿತಿ ಇದೆ. ಮೆಕ್ಕೆಜೋಳ ರೈತರಿಗೆ 500 ಕೋಟಿ ಪರಿಹಾರ ಹಾಗೂ 160 ಕೋಟಿ ಹೂ, ಹಣ್ಣು ಮತ್ತು ತರಕಾರಿ ರೈತರಿಗೆ ನೀಡಲಾಗುತ್ತೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಇದೇ ವೇಳೆ ತಿಳಿಸಿದರು.

ರೇಷ್ಮೆ ಬೆಳೆಗಾರರಿಗೆ 50 ಕೋಟಿ: ರೇಷ್ಮೆ ಬೆಳೆಗಾರರಿಗೆ 50 ಕೋಟಿ ರೂ. ಪರಿಹಾರ ನೀಡಲಾಗಿದೆ. ಇವತ್ತು ರೈತರ ಖಾತೆಗೆ ಹಣ ಹಾಕಲಾಗಿದೆ ಎಂದು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದರು

Published On - 1:54 pm, Tue, 2 June 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು