AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್

ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ನಾಗೇಂದ್ರನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಸ್ಫೋಟಕ ಮಾಹಿತಿ ಹೊರಬರುತ್ತಿವೆ. ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ 20 ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್
ನಾಗೇಂದ್ರ
ರಮೇಶ್ ಬಿ. ಜವಳಗೇರಾ
|

Updated on: Jul 14, 2024 | 5:19 PM

Share

ಬೆಂಗಳೂರು(ಜು.14): ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪದ ಮೇಲೆಗೆ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದೆ. ಇನ್ನು ಇಡಿ, ನ್ಯಾಯಾಲಯದ ಮಹತ್ವದ ಅಂಶವೊಂದನ್ನು ಬಿಚ್ಚಿಟ್ಟಿದೆ. 20.19 ಕೋಟಿ ರೂ. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಗೇಂದ್ರ ಬಳಕೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ನಿರ್ದೇಶನಾಲಯ (ಇ.ಡಿ.) ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ.

ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆಯಲು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಅದರಲ್ಲಿ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಗರಣದ ಹಣ ವೆಚ್ಚವಾಗಿರುವ ಬಗ್ಗೆ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರವೆರೆಗೆ ಇಡಿ ಕಸ್ಟಡಿಗೆ

ಇದೇ ವರ್ಷದ ಮಾರ್ಚ್ 4ರಂದು 21ರಂದು 44 ಕೋಟಿ ರೂ, ಮಾ. 22ರಂದು 33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ಸೇರಿ ದಂತ ಒಟ್ಟು 187.33 ಕೋಟಿ ರೂ. ಹಣವು ವಾಲ್ಮೀಕಿ ನಿಗಮದ ಬ್ಯಾಂಕ್‌ ಖಾತೆಗಳಿಗೆ ರಾಜ್ಯ ಖಜಾನೆ-2ರಿಂದ ಜಮೆಯಾಗಿತ್ತು. ಈ ಹಣದ ಪೈಕಿ 94.73 ಕೋಟಿ ರೂ. ಹಣವು ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಖಾತೆಯಿಂದ ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ರವಾನೆಯಾಗಿತ್ತು. ಆದರೆ ಅಕ್ರಮ ಸದ್ದು ಮಾಡಿದ ಕೂಡಲೇ 5 ಕೋಟಿ ರೂ. ಮರಳಿ ನಿಗಮದ ಖಾತೆಗೆ ಬಂದಿತ್ತು. ಇನ್ನುಳಿದ 89.73 ಕೋಟಿ ರೂ. ಹಣವನ್ನು ಹೈದರಾಬಾದ್ ಗ್ಯಾಂಗ್ ದೋಚಿತ್ತು ಎಂಬ ಆರೋಪ ಬಂದಿದೆ.

ಪುಷ್ಟಿ ನೀಡುತ್ತಿವೆ ಹಗರಣದ ಟೈಮ್ ಲೈನ್

ಹೌದು… ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎನ್ನುವ ಇಡಿ ಆರೋಪಕ್ಕೆ ಹಗರಣದ ಟೈಮ್​ಲೈನ್ ಪುಷ್ಟಿ ನೀಡುತ್ತಿವೆ. ಯೂನಿಯನ್ ಬ್ಯಾಂಕ್‌ನ ಹೊಸ ಖಾತೆಗೆ 187 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಬಳಿಕ ಹೈದರಾಬಾದ್​​​ ಫಸ್ಟ್ ಬ್ಯಾಂಕ್​ನಲ್ಲಿ ಜನವರಿ ಮತ್ತು ಫೆಬ್ರವರಿಯಲ್ಲಿ 18 ನಕಲಿ ಖಾತೆಗಳನ್ನು ಓಪನ್ ಮಾಡಲಾಗಿದ್ದು, ಈ ಖಾತೆಗಳಿಗೆ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಹಂತ ಹಂತವಾಗಿ ಬರೋಬ್ಬರಿ 89 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ.

ಮೇ 7ರಂದು ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಆದ್ರೆ, ಚುನಾವಣೆಗೂ ಮುನ್ನ ನಿಗಮದ ಹಣ ಆರೋಪಿಗಳ ಕೈಸೇರಿತ್ತು. ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ತಿಂಗಳಲ್ಲಿ ಒಟ್ಟು18 ನಕಲಿ ಖಾತೆಗಳಿಗೆ ಬರೋಬ್ಬರಿ 89 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಚುನಾವಣೆಗೂ ಒಂದು ದಿನ ಮುಂಚೆ ಅಂದರೆ ಮೇ 6ರಂದು ಒಂದು ನಕಲಿ ಖಾತೆಗೆ 5 ಕೋಟಿ ರೂ. ವರ್ಗಾವಣೆ ಆಗಿದೆ.

ಒಟ್ಟಾರೆ ಮೇ 7ಕ್ಕಿಂತ ಮುನ್ನ ನಿಗಮದ ಹಣ ಅಕ್ರಮವಾಗಿ ಆರೋಪಿಗಳ ಕೈ ಸೇರಿತ್ತು. ಈ ಹಣದಲ್ಲೇ ನಾಗೇಂದ್ರ 20.19 ಕೋಟಿ ರೂ. ಹಣ ಚುನಾವಣೆಗೆ ಬಳಕೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ