AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗಾಗಿ ಡಿಕೆಶಿ ಪುತ್ರಿ ಐಶ್ವರ್ಯಾಗೂ ಇ.ಡಿ ಬುಲಾವ್​

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ್ದು, ಸೆಪ್ಟೆಂಬರ್​ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನ ಮಗಳ ಹೆಸರಲ್ಲಿ ಸುಮಾರು ಕೋಟಿ ಆಸ್ತಿ ಮಾಡಿಟ್ಟಿದ್ದಾರೆ. ಅಲ್ಲದೆ ಡಿಕೆಶಿ ಪುತ್ರಿಯ ಅಕೌಂಟ್​ನಿಂದ ಕೋಟಿ ಕೋಟಿ ಹಣ ವರ್ಗಾವಣೆಯಾಗಿದೆ. ಐಶ್ವರ್ಯಾ ಖಾತೆಯಿಂದ ಮೊದಲು ಕೆಫೆ ಕಾಫಿ ಡೇ ಮತ್ತು ಸೋಲ್​ ಸ್ಪೇಸ್​ ಕಂಪನಿಗೆ 20 ಕೋಟಿ ಹಣ ವರ್ಗಾವಣೆಯಾಗಿದೆ. ಬಳಿಕ ಕಾಫಿ […]

ವಿಚಾರಣೆಗಾಗಿ ಡಿಕೆಶಿ ಪುತ್ರಿ ಐಶ್ವರ್ಯಾಗೂ ಇ.ಡಿ ಬುಲಾವ್​
Follow us
ಸಾಧು ಶ್ರೀನಾಥ್​
|

Updated on:Sep 11, 2019 | 5:12 PM

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾಗೂ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ್ದು, ಸೆಪ್ಟೆಂಬರ್​ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇಡಿ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನ ಮಗಳ ಹೆಸರಲ್ಲಿ ಸುಮಾರು ಕೋಟಿ ಆಸ್ತಿ ಮಾಡಿಟ್ಟಿದ್ದಾರೆ. ಅಲ್ಲದೆ ಡಿಕೆಶಿ ಪುತ್ರಿಯ ಅಕೌಂಟ್​ನಿಂದ ಕೋಟಿ ಕೋಟಿ ಹಣ ವರ್ಗಾವಣೆಯಾಗಿದೆ. ಐಶ್ವರ್ಯಾ ಖಾತೆಯಿಂದ ಮೊದಲು ಕೆಫೆ ಕಾಫಿ ಡೇ ಮತ್ತು ಸೋಲ್​ ಸ್ಪೇಸ್​ ಕಂಪನಿಗೆ 20 ಕೋಟಿ ಹಣ ವರ್ಗಾವಣೆಯಾಗಿದೆ. ಬಳಿಕ ಕಾಫಿ ಡೇ ಸಿದ್ಧಾರ್ಥರಿಂದ ಐಶ್ವರ್ಯಾ ಖಾತೆಗೆ 20 ಕೋಟಿ ರೂ. ಸಾಲ ನೀಡಲಾಗಿದೆ. ಉದ್ಯೋಗವೇ ಇಲ್ಲದ ಐಶ್ವರ್ಯಾ ಬಳಿ ಅಷ್ಟೊಂದ ಹಣ ಹೇಗೆ ಬಂತು ? ಎಂಬ ಹಲವು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಐಶ್ವರ್ಯಾರನ್ನು ಕೇಳಲಿದ್ದಾರೆ.

ಇನ್ನು ಇತ್ತೀಚೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್​ ಸಹ 20 ಕೋಟಿ ಹಣದ ವರ್ಗಾವಣೆ ಮುಚ್ಚಿಟ್ಟಿದ್ದ. ಆದರೆ ಈ ಹಣದ ದಾಖಲೆ ಸುಖಾಪುರಿ ಮನೆಯಲ್ಲಿ ಅಧಿಕಾರಿಗಳಿಗೆ ಸಿಕ್ಕಿತ್ತು. ಈ ಹಣ ವರ್ಗಾವಣೆಯೂ ಹಲವು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೆ ಪುತ್ರಿ ಹೆಸರಲ್ಲಿ ಡಿಕೆ ಶಿವಕುಮಾರ್ ಹಣದ ವ್ಯವಹಾರ ಮಾಡಿದ್ರಾ ಎಂಬ ಅನುಮಾನ ಇಡಿ ಅಧಿಕಾರಿಗಳಿಗೆ ಕಾಡುತ್ತಿದ್ದೆ. ಹೀಗಾಗಿ ಸೆಪ್ಟಂಬರ್ 12ರಂದು ವಿಚಾರಣೆಗೆ ಹಾಜರಾಗಲು ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಮನ್ಸ್​ ನೀಡಿದ್ದಾರೆ.

Published On - 5:13 pm, Tue, 10 September 19

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ