AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್​ಗೆ E.D ನೋಟಿಸ್​ ವಿಚಾರ: ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಜಾರಿನಿರ್ದೇಶನಾಲಯ ನೀಡಿದ ನೋಟಿಸ್​ ವಿಚಾರವಾಗಿ ಮೊದಲು ಡಿಕೆಶಿ ಟಾರ್ಚರ್ ಕೊಡ್ತಿದ್ದಾರೆಂದು ಗೊಣಗಾಡುವುದನ್ನು ಬಿಡಲಿ ಎಂದಿದ್ದಾರೆ. ಇದರ ಜೊತೆ ಸಿದ್ದರಾಮಯ್ಯ, H.D.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್​ಗೆ E.D ನೋಟಿಸ್​ ವಿಚಾರ: ವಾಗ್ದಾಳಿ ನಡೆಸಿದ ಕೆ.ಎಸ್.ಈಶ್ವರಪ್ಪ
ಡಿ,ಕೆ ಶಿವಕುಮಾರ್​, ಕೆ.ಎಸ್​ ಈಶ್ವರಪ್ಪ
TV9 Web
| Edited By: |

Updated on:Feb 08, 2023 | 8:33 PM

Share

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಜಾರಿ ನಿರ್ದೇಶನಾಲಯ (E.D) ನೋಟಿಸ್​ ನೀಡಿರುವ ವಿಚಾರವಾಗಿ, ಡಿಕೆಶಿಗೆ ಟಾರ್ಚರ್ ಕೊಡ್ತಿದ್ದಾರೆಂದು ಗೊಣಗಾಡುವುದನ್ನು ಮೊದಲು ಬಿಡಲಿ, ಕಾನೂನಿಗೆ ಗೌರವ ಕೊಡುತ್ತೇನೆ ಅಂತಾ ಹೇಳಲಿ ನೋಡೋಣ, ಪ್ರತಿ ಬಾರಿ ನೋಟಿಸ್ ಕೊಟ್ಟಾಗ ಈ ರೀತಿ ಹೇಳೋದು ಸರಿಯಲ್ಲ. ಕಾಂಗ್ರೆಸ್​ ಸರ್ಕಾರ ಇದ್ದಾಗಲೂ ಇ.ಡಿ, ಸಿಬಿಐ ಇತ್ತು ಎಂದು ನಗರದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಪ್ರಹ್ಲಾದ್​ ಜೋಶಿ ಸಿಎಂ ಮಾಡಲು RSS​​​ ಹುನ್ನಾರ ಎಂಬ ಹೆಚ್​​ಡಿಕೆ ಹೇಳಿಕೆ ಕುರಿತು ಮಾತನಾಡಿದ ಕೆ.ಎಸ್​​.ಈಶ್ವರಪ್ಪ ಯಾರನ್ನ ಸಿಎಂ ಮಾಡಬೇಕೆಂಬುದು ಹೈಕಮಾಂಡ್​ಗೆ ಬಿಟ್ಟ ವಿಚಾರ ಅದರ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋದು ಹೆಚ್​​ಡಿಕೆಗೆ ಶೋಭೆ ತರುವುದಿಲ್ಲ. ಬಿಜೆಪಿಗೆ ಬಹುಮತ ಬರುತ್ತೆ ಅಂತಾ H.D.ಕುಮಾರಸ್ವಾಮಿಗೆ ಗೊತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಜಾತಿಯ ವಿಷ ಬೀಜ ಬಿತ್ತುತ್ತಿದ್ದಾರೆ. ​ ಜಾತಿಯ ವಿಷಬೀಜ ಬಿತ್ತಿ ರಾಜ್ಯದಲ್ಲಿ ಕಾಂಗ್ರೆಸ್​ ನಿರ್ನಾಮವಾಗಿದೆ. ಸಿದ್ದರಾಮಯ್ಯ ಮಾಡಿದ ಕುತಂತ್ರದಿಂದ ಸಿಎಂ ಸ್ಥಾನ ಕಳೆದುಕೊಂಡ್ರು, ಸಮಾಜದಲ್ಲಿ ಸಾಕಷ್ಟು ಗೌರವಯುತವಾದ ಜಾತಿಗಳಲ್ಲಿ ಬ್ರಾಹ್ಮಣರು ಒಬ್ಬರು, ಅಂತರವನ್ನು ಅಪಮಾನ‌ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್​ಡಿಕೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ:ಪ್ರಜಧ್ವನಿ ಯಾತ್ರೆಯಲ್ಲಿ ಅಡ್ಡಗೆರೆ ಹಸ್ತ ಬಳಕೆ, ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯನ್ನೇ ಬದಲಿಸಿದ್ರಾ ಡಿಕೆಶಿ? ಹೊಸ ರೇಖೆ ಹಿಂದಿರುವ ನಂಬಿಕೆ ಏನು?

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಸಿದ್ದರಾಮಯ್ಯ ಹಿಂದೂನಾ ಅಲ್ವಾ ಅನ್ನೋದನ್ನು ಹೇಗೆ ಹೇಳಲಿ, ವೈಚಾರಿಕವಾಗಿ ಏನು ಹೇಳಬೇಕು ಅನ್ನೋದು ಅವರಿಗೆ ಗೊತ್ತಿಲ್ಲ. ಮುಸ್ಲಿಮರ ಮತ ಎಷ್ಟು ಮುಖ್ಯವೋ ಹಿಂದೂಗಳ ಮತವೂ ಮುಖ್ಯವಾಗಿದೆ. ಹಿಂದೂ ನಂಬುತ್ತೇನೆ, ಹಿಂದುತ್ವ ನಂಬಲ್ಲ ಅಂತಾ ಹೇಗೆ ಹೇಳುತ್ತಾರೆ. ನಾನು ಮುಸಲ್ಮಾನ, ಮುಸಲ್ಮಾನತ್ವವನ್ನು ನಂಬಲ್ಲ ಅಂತಾ ಹೇಳಲಿ ನೋಡೋಣ. ಹಿಂದುತ್ವ ನಂಬಲ್ಲ ಅಂತಾ ಹೇಳಿದ್ರೆ ಸಿದ್ದರಾಮಯ್ಯ ಮುಸಲ್ಮಾನನಾ? ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ವಿಚಾರ ಏನು ಅಂತಾ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:24 pm, Wed, 8 February 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ