ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ದಿನಗಳಿಂದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ನಾಗೇಂದ್ರ ಇಡಿ ವಶಕ್ಕೆ
ಶಾಸಕ ಬಿ ನಾಗೇಂದ್ರ
Follow us
| Updated By: ವಿವೇಕ ಬಿರಾದಾರ

Updated on:Jul 12, 2024 | 9:14 AM

ಬೆಂಗಳೂರು, ಜುಲೈ 12: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮದ (Valmiki Scheduled Tribes Development Corporation) 187 ಕೋಟಿ ರೂ. ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ವಶಕ್ಕೆ ಪಡೆದುಕೊಂಡರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಕೇಸ್​ನಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಇಡಿ ಅಧಿಕಾರಿಗಳು  ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು  ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಪಿಎ ಹರೀಶ್​ ಬಂಧನ, ಯಾರು ಈತ? ಇಲ್ಲಿದೆ ವಿವರ

ಶಾಸಕ ನಾಗೇಂದ್ರ ವಿರುದ್ಧ ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ನಾಗೇಂದ್ರ ಪಿಎ ಹರೀಶ್‌ಗೆ ತಲುಪಿತ್ತು ಎನ್ನಲಾಗಿದೆ. ಅಲ್ಲದೆ ಏಪ್ರಿಲ್ ತಿಂಗಳಿನ ಎರಡನೇ ವಾರ ಪದ್ಮನಾಭನಿಂದ ಹರೀಶ್‌ 25 ಲಕ್ಷ ಹಣ ಪಡೆದಿದ್ದನು. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.

ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ಣುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ನನ್ನು ಇಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರು ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:58 am, Fri, 12 July 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ