AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಮೈಸೂರಿನ ಮುಡಾ ಹಗರಣದ ತನಿಖೆಯನ್ನು ಇಡಿ ಅಧಿಕಾರಿಗಳು ಮತ್ತೊಂದು ಚುರುಕುಗೊಳಿಸಿದ್ದು, ಎಂಎಂಜಿ ಕನ್ಸ್ಟ್ರಕ್ಷನ್ ಕಚೇರಿ ಮತ್ತು ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಮೇಲೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಬೃಹತ್ ಭ್ರಷ್ಟಾಚಾರ ನಡೆದಿರಬಹುದು ಎಂಬ ಅನುಮಾನಗಳು ಮೂಡಿವೆ.

ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?
ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 29, 2024 | 3:32 PM

Share

ಮೈಸೂರು, ಅಕ್ಟೋಬರ್​ 29: ಮುಡಾ ಹಗರಣಕ್ಕೆ (Muda case) ಸಂಬಂಧಿಸಿದಂತೆ ನಿನ್ನೆ ಮೈಸೂರಿನಲ್ಲಿ ಬಿಲ್ಡರ್ ಜಯರಾಮ್ ಮನೆ, ಕಚೇರಿ ಮೇಲೆ ಇಡಿ ತಂಡ ದಾಳಿ ಮಾಡಿತ್ತು. ಇದೀಗ ಅದರ ಬೆನ್ನಲ್ಲೇ ನಗರದ ಎಂಎಂಜಿ ಕಚೇರಿ ಕೆಳಗೆ ಇರುವ ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಆ ಮೂಲಕ ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿತ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ದಿನೇಶ್ ಕುಮಾರ್ ಆಯುಕ್ತರಾಗಿ ಮೈಸೂರಿಗೆ ಬಂದ ಬಳಿಕ ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘ ಆರಂಭವಾಗಿದೆ. ದಿನೇಶ್ ಕುಮಾರ್ ಕುಟುಂಬಸ್ಥರಿಬ್ಬರು ನಿರ್ದೇಶಕರಾಗಿದ್ದಾರೆ ಎನ್ನಲಾಗಿದೆ. ಹಾಗಾಗಿ 50-50 ಹಗರಣಕ್ಕಾಗಿಯೇ ವಕ್ರತುಂಡ ಸೊಸೈಟಿ ಸೃಷ್ಟಿಯಾಯಿತಾ? ಇಡೀ ಹಗರಣದ ಬೇನಾಮಿ ಕೇಂದ್ರವೆ ವಕ್ರತುಂಡ ಸೊಸೈಟಿನಾ ಎಂಬ ಸಾಕಷ್ಟು ಅನುಮಾನಗಳು ಶುರುವಾಗಿವೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

ಮುಡಾ ಹಗರಣ ಕುರಿತ ತನಿಖೆಯನ್ನು ಇಡಿ ಅಧಿಕಾರಿಗಳ ತಂಡ ಚುರುಕುಗೊಳಿಸಿದ್ದು, ಮತ್ತಷ್ಟು ಜನರಿಗೆ ನಡುಕ ಶುರುವಾಗಿದೆ. ಜಾರಿ ನಿರ್ದೇಶನಾಲಯ ತಂಡ, ಉದ್ಯಮಿಗಳು, ಜನಪ್ರತಿನಿಧಿಗಳು ಸೇರಿದಂತೆ 20ಕ್ಕೂ ಹೆಚ್ಚು ಪ್ರಭಾವಿಗಳ ಹೆಸರುಗಳನ್ನು ಪಟ್ಟಿ ಮಾಡಿದೆ. ಅಲ್ಲದೇ, ಪ್ರತಿಯೊಬ್ಬರ ಚಲನವಲನಗಳ ಮೇಲೂ ಕಣ್ಣಿಟ್ಟಿದೆ.

ಮೈಸೂರಿನ ಎಂಎಂಜಿ ಕನ್ಸ್ಟ್ರಕ್ಷನ್ ಕಚೇರಿ ಮೇಲೆ ಇಡಿ ದಾಳಿ

ಮುಡಾ ಸೈಟ್​ ಅಕ್ರಮ ಸಂಬಂಧ ಮೈಸೂರಿನ ಎಂಎಂಜಿ ಕನ್ಸ್ಟ್ರಕ್ಷನ್ ಕಚೇರಿ ಮೇಲೆ ಇಡಿ ದಾಳಿ ಮಾಡಿದ್ದಾರೆ. ಎಂಎಂಜಿ ಕನ್ಸ್ಟ್ರಕ್ಷನ್​​ ಕಚೇರಿಗೆ ಕೆನರಾ ಬ್ಯಾಂಕ್ ಡಿವಿಷನಲ್ ಮ್ಯಾನೇಜರ್ ಗೋಪಾಲ್​, ಕುವೆಂಪುನಗರ ಕೆನರಾ ಬ್ಯಾಂಕ್​ ಶಾಖೆ ಮ್ಯಾನೇಜರ್ ಆಗಮಿಸಿದ್ದಾರೆ. ಅಧಿಕಾರಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕುವೆಂಪುನಗರ ಕ್ಯಾನರಾ ಬ್ಯಾಂಕ್​ ವಹಿವಾಟು ಬಗ್ಗೆ ಇಡಿ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪರಮಾಪ್ತನ ಮನೆ ಮೇಲೂ ಇಡಿ ದಾಳಿ, ಮುಂದಿನ ಟಾರ್ಗೆಟ್ ಯಾರು?

ಸಿಎಂ ಸಿದ್ದರಾಮಯ್ಯ ಆಪ್ತ ರಾಕೇಶ್ ಪಾಪಣ್ಣ ಮನೆಯಲ್ಲೂ ಇಡಿ ಶೋಧ ನಡೆಸಿದೆ. ನಿನ್ನೆ ಬೆಳಗ್ಗೆಯಿಂದ ತಡರಾತ್ರಿವರೆಗೂ ಶೋಧಿಸಿದ್ದ ಅಧಿಕಾರಿಗಳು, ಮತ್ತೆ ಇಂದು ಬೆಳಗ್ಗೆಯಿಂದ ಹುಡುಕಾಟ ಮುಂದುವರಿಸಿದ್ದಾರೆ. ಮುಡಾಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು