AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KGF Babu ಚುನಾವಣೆ ತಯಾರಿಯಲ್ಲಿರುವ ಕೋಟಿ ಕುಬೇರ ಕೆಜಿಎಫ್ ಬಾಬುಗೆ ಇಡಿ ಶಾಕ್

ಇತ್ತೀಚೆಗಷ್ಟೇ ಕಾಂಗ್ರೆಸ್​ನಿಂದ ಅಮಾನತುಗೊಂಡಿರುವ ಕೆಜಿಎಫ್​ ಬಾಬುಗೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

KGF Babu ಚುನಾವಣೆ ತಯಾರಿಯಲ್ಲಿರುವ ಕೋಟಿ ಕುಬೇರ ಕೆಜಿಎಫ್ ಬಾಬುಗೆ ಇಡಿ ಶಾಕ್
ಕೆಜಿಎಫ್‌ ಬಾಬು
TV9 Web
| Edited By: |

Updated on:Jan 18, 2023 | 5:50 PM

Share

ನವದೆಹಲಿ/ಬೆಂಗಳೂರು: ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಿ ಕುಬೇರ ಕೆಜಿಎಫ್ ಬಾಬುಗೆ (KGF Babu) ಇಡಿ ಸಮನ್ಸ್ ನೀಡಿದೆ. ವಿಚಾರಣೆಗಾಗಿ ನಾಳೆ 11ಗಂಟೆಗೆ ನವದೆಹಲಿಯ ಇಡಿ(ED) ಕಚೇರಿಗೆ ಬರುವಂತೆ ಕೆಜಿಎಫ್ ಬಾಬು ಸಮನ್ಸ್ ನೀಡಲಾಗಿದೆ. ಕಳೆದ ಮೇ ತಿಂಗಳಲ್ಲಿ ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್​ ಬಾಬು ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. 6 ಕಾರುಗಳಲ್ಲಿ 3 ತಂಡವಾಗಿ ಬಂದಿದ್ದ ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳು ಉದ್ಯಮಿ ಹಾಗೂ ರಾಜಕಾರಣಿ ಕೆಜಿಎಫ್‌ ಬಾಬು ನಿವಾಸ ಹಾಗೂ ಕಚೇರಿಗಳಲ್ಲಿ ದಾಳಿ ಮಾಡಿ ಶೋಧ ನಡೆಸಿದ್ದರು.

ಇದನ್ನೂ ಓದಿ: KGF Babu: ಕೋಟಿ ಕುಬೇರ ಕೆಜಿಎಫ್‌ ಬಾಬುನನ್ನು ಪಕ್ಷದಿಂದ ಅಮಾನತು ಮಾಡಿದ ಕಾಂಗ್ರೆಸ್

ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಶಂಕೆ

ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ಇಡಿ ಶಾಕ್ ನೀಡಿತ್ತು. ಬಾಬು ಒಡೆತನದ ಬಂಗಲೆ, ಕಚೇರಿ ಸೇರಿ 7 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು. ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

ಚುನಾವಣೆ ತಯಾರಿಯಲ್ಲಿ ಕೋಟಿ ಒಡೆಯ

ಹೌದು…ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಜಿಎಫ್​ ಬಾಬು ತಯಾರಿ ನಡೆಸಿದ್ದಾರೆ. ಈ ಮೊದಲು ಕೋಲಾರಿಂದ ಸ್ಪರ್ಧೆ ಮಾಡಬೇಕು ಎಂದು ಕೊಂಡಿದ್ದ ಬಾಬು ಬಳಿಕ ಅಲ್ಲಿಂದ ಬೆಂಗಳೂರಿನ ಚಿಕ್ಕಪೇಟೆಯಿಂದ ಅಖಾಡಕ್ಕಿಳಿಯಲು ಪ್ಲಾನ್ ಮಾಡಿದ್ದಾರೆ. ಇದರ ಮಧ್ಯೆ  ಪಕ್ಷ ವಿರೋಧಿ ಆರೋಪದ ಮೇಲೆ ಕಾಂಗ್ರೆಸ್​ನಿಂದ ಅಮಾನತುಗೊಂಡು ಏಕಾಂಗಿಯಾಗಿದ್ದಾರೆ. ಮೂಲಗಳ ಪ್ರಕಾರ ಪಕ್ಷೇತರ ಬದಲು ಜೆಡಿಎಸ್​ನಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On - 5:11 pm, Wed, 18 January 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ