AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಮತ್ತೆ ಇಡಿ ನೋಟಿಸ್, ಅಕ್ಟೋಬರ್ 7ರಂದು ಹಾಜರಾಗುವಂತೆ ಸೂಚನೆ

DK Shivakumar 7 ನೇ ತಾರೀಖು ನನಗೆ ಹಾಗೂ ಡಿಕೆ ಸುರೇಶ್ ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7 ನೇ ತಾರೀಖು ಬಿಟ್ಟು ಬೇರೆ ದಿನ ಕೊಡಿ ಅಂತ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ಗೆ ಮತ್ತೆ ಇಡಿ ನೋಟಿಸ್, ಅಕ್ಟೋಬರ್ 7ರಂದು ಹಾಜರಾಗುವಂತೆ ಸೂಚನೆ
ಡಿಕೆ ಶಿವಕುಮಾರ್
TV9 Web
| Edited By: |

Updated on:Oct 02, 2022 | 2:26 PM

Share

ಬೆಂಗಳೂರು: ನ್ಯಾಷನಲ್ ಹೆರಾಲ್ಡ್  ಪ್ರಕರಣದಲ್ಲಿ (National herald case) ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಅವರಿಗೆ  ನೋಟಿಸ್ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಮಾತನಾಡಿದ ಡಿಕೆಶಿ ಎಐಸಿಸಿ ಅಧ್ಯಕ್ಷ ಚುನಾವಣೆ ಹಿನ್ನೆಲೆ ಕಾಲಾವಕಾಶ ಕೇಳಿದ್ದೇನೆ. ಆದರೆ ಇಡಿ ಅಧಿಕಾರಿಗಳು ಆಗಲ್ಲ ಎಂದು ಹೇಳಿದ್ದಾರೆ ಎಂದಿದ್ದಾರೆ. ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಕೇಸ್​​ನಲ್ಲಿ ಹೊಸ ಸಮನ್ಸ್ ಕೊಟ್ಟಿದ್ದಾರೆ. 7 ನೇ ತಾರೀಖು ನನಗೆ ಹಾಗೂ ಡಿಕೆ ಸುರೇಶ್ ಗೆ ನೋಟಿಸ್ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಅಂದು ಆದಿಚುಂಚನಗಿರಿಗೆ ಹೋಗುತ್ತಿದ್ದಾರೆ. 7 ನೇ ತಾರೀಖು ಬಿಟ್ಟು ಬೇರೆ ದಿನ ಕೊಡಿ ಅಂತ ಇನ್ನೊಮ್ಮೆ ಮನವಿ ಮಾಡಿಕೊಂಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಆದಿಚುಂಚನಗಿರಿಗೆ ಪ್ರಿಯಾಂಕ  ಗಾಂಧಿ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ನಾನು ಇಲ್ಲದೇ ಹೋದ್ರೆ ತಪ್ಪಾಗುತ್ತದೆ. ಎಲ್ಲಾ ಜವಾಬ್ದಾರಿ ನನ್ನ ತಮ್ಮನೇ ಮಾಡುತ್ತಿದ್ದಾನೆ. ಇಲ್ಲಿಂದ ಅಲ್ಲಿಯವರಗೂ ಬ್ಯಾನರ್ ಕಟ್ಟುತ್ತಿದ್ದಾನೆ. ಆದಿಚುಂಚನಗಿರಿಯಲ್ಲಿ ರಾಹುಲ್ ಗಾಂಧಿ ತಂಗಲಿದ್ದಾರೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಬೊಮ್ಮಾಯಿ ಹೇಳಿಕೆಗೆ ಡಿಕೆಶಿ  ತಿರುಗೇಟು

ಇಂದು ಗಾಂಧಿ ಜಯಂತಿ, ನಕಲಿ ಗಾಂಧಿಗಳ ಬಗ್ಗೆ ನಾನೇಕೆ ಮಾತನಾಡಬೇಕು? ಇಡೀ ಕಾಂಗ್ರೆಸ್ ಪಕ್ಷ ಜಾಮೀನು ಪಡೆದು ಹೊರಗಿದೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಡಿಕೆ ಶಿವಕುಮಾರ್ ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಆಗಿತ್ತು, ಈಗ ಅದು ಇಲ್ಲ ಎಂದು  ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೊಮ್ಮಾಯಿ ಮಾತಿಗೆ  ಪ್ರತಿಕ್ರಿಯಿಸಿದ  ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಹೊರಗಿದ್ದಾರೆ.  ಅವರು (ಬಿಜೆಪಿ) ಜಾಮೀನಿನ ಮೇಲೆ ಹತ್ತಾರು ಮಂದಿ ಹೊರಗೆ ಇದ್ದಾರೆ. ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಬೊಮ್ಮಾಯಿ ನನ್ನ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ನನ್ನನ್ನು ಪರಪ್ಪನ ಅಗ್ರಹಾರಕ್ಕೆ (ಕೇಂದ್ರ ಕಾರಾಗೃಹ) ಕಳುಹಿಸಲಿ, ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

Published On - 1:57 pm, Sun, 2 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ