AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿದ ಶಿಕ್ಷಣ ಇಲಾಖೆ: 6 ವರ್ಷ ಪೂರ್ಣಗೊಂಡ ಮಗುವಿಗೆ ಶಾಲಾ ದಾಖಲಾತಿ ಕಡ್ಡಾಯ

6 ವರ್ಷ ಪೂರ್ಣಗೊಂಡ ಮಗುವನ್ನು ಕಡ್ಡಾಯವಾಗಿ 1ನೇ ತರಗತಿಗೆ ದಾಖಲಿಸಬೇಕೆಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ದಾಖಲಾತಿಗೆ ವಯೋಮಿತಿ ನಿಗದಿಪಡಿಸಿದ ಶಿಕ್ಷಣ ಇಲಾಖೆ: 6 ವರ್ಷ ಪೂರ್ಣಗೊಂಡ ಮಗುವಿಗೆ ಶಾಲಾ ದಾಖಲಾತಿ ಕಡ್ಡಾಯ
ಶಿಕ್ಷಣ ಸಚಿವ ಬಿ ಸಿ ನಾಗೇಶ್​
TV9 Web
| Edited By: |

Updated on:Nov 15, 2022 | 9:02 PM

Share

ಬೆಂಗಳೂರು: 6 ವರ್ಷ ಪೂರ್ಣಗೊಂಡ ಮಗುವನ್ನು ಕಡ್ಡಾಯವಾಗಿ 1ನೇ ತರಗತಿಗೆ ದಾಖಲಿಸಬೇಕೆಂದು ಶಿಕ್ಷಣ ಇಲಾಖೆ (Education Department) ಆದೇಶ ಹೊರಡಿಸಿದೆ. ಈ ವಯೋಮಿತಿ 2025-26ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುತ್ತದೆ ಎಂದು ಇಲಾಖೆ ತಿಳಿಸಿದೆ. 2025-26ನೇ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ 6 ವರ್ಷ ತುಂಬಿದ ಮಗು 1ನೇ ತರಗತಿಗೆ ದಾಖಲಾಗಲು ಅವಕಾಶ ನೀಡಿದೆ.

7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೆರವೇರಿದ ಶಂಕುಸ್ಥಾಪನೆ, ಜಿ.ಪಂ ಸಿಇಒ ಉಸ್ತುವಾರಿ

ರಾಜ್ಯದಲ್ಲಿ 7,601 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿದೆ. ಕೊಠಡಿಗಳ ನಿರ್ಮಾಣದ ಉಸ್ತುವಾರಿಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸಲಾಗಿದೆ ಎಂದು ವಿಧಾನಸೌಧದಲ್ಲಿ  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ 250 ಶೌಚಾಲಯಗಳ ನಿರ್ಮಾಣಕ್ಕೆ ನಿನ್ನೆ (ನ.14) ರಂದು ಸೂಚನೆ ನೀಡಿದ್ದೇವೆ. ಹೈದರಾಬಾದ್ ಕರ್ನಾಟಕದಲ್ಲಿ 900 ಶಾಲಾ ಕೊಠಡಿ ನಿರ್ಮಿಸುತ್ತೇವೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಶಿಕ್ಷಕರ ನೇಮಕಾತಿ ಸಂಬಂಧ ಸಿಇಟಿ ಪರೀಕ್ಷೆ ಮುಗಿದಿದೆ. ನೇಮಕಗೊಂಡ ಶಿಕ್ಷಕರಿಗೆ ತರಬೇತಿ ನೀಡಿ ಕೂಡಲೆ ಶಾಲೆಗಳಿಗೆ ನೇಮಿಸುತ್ತೇವೆ. ಮೌಲ್ಯಾಧಾರಿತ ಶಿಕ್ಷಣ ನೀಡಲು ಎರಡು ಕೊರತೆಗಳನ್ನು ನೀಗಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದೇ ರೀತಿಯ ಬಣ್ಣ ಬಳಿಯಬೇಕು ಅಂತಾ ಸುತ್ತೋಲೆ ಹೊರಡಿಸಿಲ್ಲ

ನೂತನ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ವಿಚಾರವಾಗಿ ಮಾತನಾಡಿದ ಅವರು ಇದೇ ರೀತಿಯ ಬಣ್ಣ ಬಳಿಯಬೇಕು ಅಂತಾ ಸುತ್ತೋಲೆ ಹೊರಡಿಸಿಲ್ಲ. ಅಲ್ಲಿನ ವಾತಾವರಣಕ್ಕೆ ತಕ್ಕಂತೆ ಕೊಠಡಿ ನಿರ್ಮಿಸಿ ಎಂದು ಹೇಳಿದ್ದೇವೆ. ಹಾಗೆ ಶಾಲಾ ಕೊಠಡಿಗಳಿಗೆ ‘ವಿವೇಕ’ ಎಂದು ಹೆಸರಿಡಿ ಎಂದಿದ್ದೇವೆ. ಖಾಸಗಿ ಶಾಲೆಗಳಲ್ಲಿ ಕೇಸರಿ ಬಣ್ಣ ಬಳಿಯೋದು ಅವರಿಗೆ ಬಿಟ್ಟದ್ದು. ಈಗಾಗಲೇ ವಿವೇಕಾನಂದರ ಭಾವಚಿತ್ರ ಕೆಲವು ಶಾಲೆಗಳಲ್ಲಿವೆ. ಎಲ್ಲಾ ಶಾಲೆಗಳಲ್ಲೂ ವಿವೇಕಾನಂದರ ಭಾವಚಿತ್ರ ಹಾಕಲು ತೀರ್ಮಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಜ್ಞಾನ ಸಂಪಾದನೆ, ಮಾಡಲ್ಸ್​​ಗಾಗಿ ವಿವೇಕ ಶಾಲೆಗಳ ಸ್ಥಾಪನೆ ಮಾಡಲಾಗಿದೆ. ಕೊಠಡಿ ಸಹಿತ ಒಳ್ಳೆಯ ವಾತವರಣ ನಿರ್ಮಿಸಬೇಕು. ಇದಕ್ಕಾಗಿ ಹತ್ತು ವರ್ಷಗಳಲ್ಲಿ ಎಲ್ಲಾ ಕೊಠಡಿಗಳನ್ನು ನಿರ್ಮಿಸಲು ಗುರಿ ಇದೆ. 2 ಕಿಮೀ ಒಳಗೆ ಒಂದು ಸರ್ಕಾರಿ ಶಾಲೆ ಇರಬೇಕೆಂದು ನಿಯಮ ಇದೆ. ಕನಿಷ್ಟ ಇಬ್ಬರು ಶಿಕ್ಷಕರು ಪ್ರತಿ ಶಾಲೆಗೆ ಇರಬೇಕು ಎಂದು ನುಡಿದರು.

ಕಾಂಗ್ರೆಸ್ ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡುತ್ತಿದೆ

ಕಾಂಗ್ರೆಸ್ ಶಿಕ್ಷಣ ಕ್ಷೇತ್ರದಲ್ಲೂ ಅನವಶ್ಯಕ ರಾಜಕೀಯ ಮಾಡುತ್ತಿದೆ. ವಿರೋಧ ಮಾಡಿಸುವುದಕ್ಕೆ ಒಂದಿಷ್ಟು ಜನರು ಇದ್ದಾರೆ. ವೋಟ್ ಬ್ಯಾಂಕ್​ಗಾಗಿ ಶಿಕ್ಷಣ ಕ್ಷೇತ್ರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಒಂದು ಧರ್ಮದ ವೋಟ್​ಗಾಗಿ ಈ ರೀತಿ ವಿರೋಧ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Tue, 15 November 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು