AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಪಠ್ಯ ಪರಿಷ್ಕರಣೆಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್; ಶಿಕ್ಷಣ ಸಚಿವ ಬಿಸಿ ನಾಗೇಶ್​ರಿಂದ ನಾಳೆಯೇ ಮಾಹಿತಿ

ದಿನೇ ದಿನೇ ಟಿಪ್ಪು ಪಠ್ಯ ಕಡಿತಕ್ಕೆ ಆಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸದಸ್ಯ ಚಕ್ರತೀರ್ಥ ಈಗಾಗಲೇ ಇಲಾಖೆಗೆ ಕಡಿತದ ವರದಿ ನೀಡಿದ್ದಾರೆ.

ಟಿಪ್ಪು ಪಠ್ಯ ಪರಿಷ್ಕರಣೆಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್; ಶಿಕ್ಷಣ ಸಚಿವ ಬಿಸಿ ನಾಗೇಶ್​ರಿಂದ ನಾಳೆಯೇ ಮಾಹಿತಿ
ಟಿಪ್ಪು ಸುಲ್ತಾನ್
TV9 Web
| Edited By: sandhya thejappa|

Updated on:Mar 27, 2022 | 11:26 AM

Share

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು (Tippu) ಪಠ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಟಿಪ್ಪು ಪಠ್ಯವನ್ನು ಕೈಬಿಡಬೇಕೆಂಬ ಒತ್ತಾಯ ಹೆಚ್ಚಾಗಿದ್ದು, ಪರ- ವಿರೋಧಗಳ ಚರ್ಚೆ ಈಗಾಗಲೇ ವ್ಯಾಪಕವಾಗಿ ನಡೆಯುತ್ತಿದೆ. ಇನ್ನು ಈ ಎಲ್ಲ ಚರ್ಚೆಗಳ ನಡುವೆ ಟಿಪ್ಪು ಪಠ್ಯ ಪರಿಷ್ಕರಣೆಗೆ ಉತ್ತರ ನೀಡಲು ಕರ್ನಾಟಕ ಸರ್ಕಾರ ಮುಹೂರ್ತ ಫಿಕ್ಸ್ ಮಾಡಿದೆ. ನಾಳೆಯೇ ಟಿಪ್ಪು ಪಠ್ಯ ಪರಿಷ್ಕರಣೆ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh) ಮಾಹಿತಿ ನೀಡಲಿದ್ದಾರೆ. ಶುಕ್ರವಾರ ಶೀಘ್ರವೇ ಮಾಹಿತಿ ನೀಡುವುದಾಗಿ ಹೇಳಿದ್ದ ಬಿ ಸಿ ನಾಗೇಶ್ ಹೇಳಿದ್ದರು. ಸರ್ಕಾರದ ನಡೆ ತೀವ್ರ ಕುತೂಹಲ ಕೆರಳಿಸಿದೆ.

ದಿನೇ ದಿನೇ ಟಿಪ್ಪು ಪಠ್ಯ ಕಡಿತಕ್ಕೆ ಆಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸದಸ್ಯ ಚಕ್ರತೀರ್ಥ ಈಗಾಗಲೇ ಇಲಾಖೆಗೆ ಕಡಿತದ ವರದಿ ನೀಡಿದ್ದಾರೆ. ಅಧಿಕಾರಿಗಳಿಂದ ಬಿಸಿ ನಾಗೇಶ್ ಮಾಹಿತಿ ತರಿಸಿಕೊಂಡಿದ್ದಾರೆ. ನಾಳೆ ನಡೆಯುವ ಕಲಾಪದಲ್ಲಿ ಉತ್ತರಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷಗಳು ಕೇಳುವ ಪ್ರಶ್ನೆಗೆ ಉತ್ತರಿಸಲು ಸಚಿವ ಬಿ ಸಿ ನಾಗೇಶ್ ಸಜ್ಜಾಗಿದ್ದಾರೆ.

ಸದ್ಯ ಸಂಪೂರ್ಣವಾಗಿ ಟಿಪ್ಪು ಪಠ್ಯ ಕೈ ಬಿಟ್ಟಿಲ್ಲ. ಆದರೆ, ಬಹುತೇಕ ವಿಚಾರಗಳಿಗೆ ಶಿಕ್ಷಣ ಇಲಾಖೆ ಕತ್ತರಿ ಹಾಕಿದೆ. ಹಾಗಾದರೆ ಎಷ್ಟು ಪರಿಷ್ಕರಣೆ ಆಗಿದೆ? ಎಷ್ಟನೇ ತರಗತಿಯವರೆಗೆ ಪಠ್ಯ ಪರಿಷ್ಕರಣೆ ಆಗಿದೆ? ಎಲ್ಲ ತರಗತಿಯ ಪಠ್ಯದಲ್ಲೂ ಟಿಪ್ಪು ಪಾಠ ಕಡಿತವಾಗಿದ್ಯಾ? ಎಂಬ ಪ್ರಶ್ನೆಗಳಿಗೆ ನಾಳೆ ಉತ್ತರ ಸಿಗಲಿದೆ.

ಮಕ್ಕಳಿಗೆ ಯಾವುದೇ ಆತಂಕ ಬೇಡ- ಬಿಸಿ ನಾಗೇಶ್: ನಾಳೆಯಿಂದ‌ ರಾಜ್ಯಾದ್ಯಂತ ಎಸ್​ಎಸ್​ಎಲ್​ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್, ಮಕ್ಕಳಿಗೆ ಯಾವುದೇ ರೀತಿಯ ಆತಂಕ ಬೇಡ. 80 % ಮುಗದಿರುವ ಸಿಲಾಬಸ್​ನಲ್ಲಿಯೇ ಪ್ರಶ್ನೆ ಪತ್ರಿಕೆ ಬರುತ್ತದೆ. ಈ ಸಾರಿ ಪ್ರಶ್ನೆ ಪತ್ರಿಕೆಯಲ್ಲಿ ಆಯ್ಕೆಗಳನ್ನು ಜಾಸ್ತಿ ನೀಡಲಾಗುತ್ತದೆ. ಪಠ್ಯ ಮುಗಿಯದೇ ಇರುವ ಶಾಲೆಯ ವಿದ್ಯಾರ್ಥಿಗಳಿಗೆ ಬೇರೆ ಪ್ರಶ್ನೆ ಆಯ್ಕೆ‌ಮಾಡುವ ಅವಕಾಶ ಇದೆ. ಹಾಗಾಗಿ ಧೈರ್ಯವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಿರಿ ಎಂದರು.

ಹಿಜಾಬ್ ವಿವಾದ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲಿದೆ. ಕರ್ನಾಟಕ ಹೈಕೋರ್ಟ್ ರಾಜ್ಯದ ಆದೇಶವನ್ನ ಎತ್ತಿಹಿಡಿದಿದೆ. ಶಾಲೆ ಸೂಚಿಸಿದ ಸಮವಸ್ತ್ರವನ್ನೇ ವಿದ್ಯಾರ್ಥಿಗಳು ಧರಿಸಬೇಕು. ನಾಳೆಯ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸುವಂತಿಲ್ಲ. ಹೊರಗಿನ, ರಿಪಿಟರ್ಸ್​ಗೆ ಸಮವಸ್ತ್ರದ ಅವಶ್ಯಕತೆಯಿಲ್ಲ. ನಾಳೆ ಸುಸೂತ್ರವಾಗಿ ಪರೀಕ್ಷೆಗಳು ನಡೆಯುತ್ತದೆ ಎಂದು ಬಾಗಲಕೋಟೆಯಲ್ಲಿ ಶಿಕ್ಷಣ ಸಚಿವರು ಹೇಳಿದ್ದಾರೆ

ಇದನ್ನೂ ಓದಿ

ಭ್ರಮನಿರಸನಗೊಂಡ ಸೈನಿಕರಿಂದ ರಷ್ಯಾದ ಕರ್ನಲ್ ಹತ್ಯೆ: ಉಕ್ರೇನ್​ನಲ್ಲಿ ಸತ್ತ ರಷ್ಯಾ ಸೇನಾಧಿಕಾರಿಗಳ ಸಂಖ್ಯೆ 7ಕ್ಕೆ

ಏಪ್ರಿಲ್ 30ರೊಳಗೆ ಇನ್ನಷ್ಟು ಯೋಜನೆಗಳಿಗೆ ಕಾರ್ಯಾದೇಶ; ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

Published On - 11:19 am, Sun, 27 March 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು