AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC, 2nd PUC Exams 2021; ವಿದ್ಯಾರ್ಥಿಗಳಿಗೆ ರಿಲೀಫ್ ಕೊಡುತ್ತಾ ರಾಜ್ಯ ಸರ್ಕಾರ? ಅಂತಿಮ ನಿರ್ಧಾರ ಇಂದು

ಕೇಂದ್ರ ಸರ್ಕಾರವೇ ಸಿಬಿಎಸ್ಇ, ಐಸಿಎಸ್ಇ ಎಕ್ಸಾಂಗೆ ಬ್ರೇಕ್ ಕೊಟ್ಟಿದೆ. ವಿದ್ಯಾರ್ಥಿಗಳಿಗೂ ರಿಲೀಫ್ ಕೊಟ್ಟಿದೆ. ಆದ್ರೆ, ಕರುನಾಡಿನಲ್ಲಿ ಮಾತ್ರ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆ ನಡೆಸ್ಬೇಕಾ.. ಬೇಡ್ವಾ ಅನ್ನೋದರ ಬಗ್ಗೆ ನಿರ್ಧಾರಕ್ಕೆ ಬಂದಿಲ್ಲ. ಆದ್ರೆ, ಇವತ್ತು ಎಲ್ಲಾ ಗೊಂದಲಗಳಿಗೆ ಶಿಕ್ಷಣ ಸಚಿವರು ಫುಲ್ ಸ್ಟಾಪ್ ಇಡುವ ಸಾಧ್ಯತೆ ಇದೆ.

SSLC, 2nd PUC Exams 2021; ವಿದ್ಯಾರ್ಥಿಗಳಿಗೆ ರಿಲೀಫ್ ಕೊಡುತ್ತಾ ರಾಜ್ಯ ಸರ್ಕಾರ? ಅಂತಿಮ ನಿರ್ಧಾರ ಇಂದು
ಸಚಿವ ಎಸ್. ಸುರೇಶ್ ಕುಮಾರ್
TV9 Web
| Edited By: |

Updated on: Jun 04, 2021 | 7:41 AM

Share

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೈಯಲ್ಲಿ ಬುಕ್ ಹಿಡ್ಕೊಂಡು ಓದಿದ್ದಾರೋ ಇಲ್ವೋ ಗೊತ್ತಿಲ್ಲ. ಆದ್ರೆ, ಎಕ್ಸಾಂ ನಡೆದೇ ಬಿಡುತ್ತಾ..? ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷೆ ಮಾಡ್ತಾರಾ ಅಂತ ದಿಕ್ಕುಗಳಂತೂ ನೋಡ್ತಿದ್ದಾರೆ. ಪೋಷಕರೂ ಕೂಡ ಮಕ್ಕಳಿಗೆ ಓದು ಓದು ಅಂತ ಹೇಳೋಕು ಆಗ್ದೆ, ಸುಮ್ಮನೆ ಇರೋಕೆ ಆಗದೆ ಒದ್ದಾಡ್ತಿದ್ದಾರೆ. ಈ ನಡುವೆ ಶಿಕ್ಷಣ ಸಚಿವರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ

ಇವತ್ತೇ ನಿರ್ಧಾರ ಆಗುತ್ತಾ ಎಕ್ಸಾಂ ಭವಿಷ್ಯ? ಕೇಂದ್ರ ಸರ್ಕಾರವೇ ಸಿಬಿಎಸ್ಇ, ಐಸಿಎಸ್ಇ ಎಕ್ಸಾಂ ರದ್ದು ಮಾಡಿದೆ. ಆದ್ರೆ, ರಾಜ್ಯ ಸರ್ಕಾರ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದಲ್ಲಿ SSLC ಹಾಗೂ ದ್ವಿತೀಯ ಪಿಯುಸಿ ಎಕ್ಸಾಂ ಕಥೆ ಏನು ಅನ್ನೋದು ಗೊತ್ತಾಗದೇ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಸಿಲುಕಿದ್ದಾರೆ. ಇದ್ರ ಮಧ್ಯೆ ಕೊರೊನಾ ಕೇಕೆ ಹಾಕ್ತಿರೋದ್ರಿಂದ ಪರೀಕ್ಷೆ ರದ್ದು ಮಾಡುವಂತೆ ಶಿಕ್ಷಣ ತಜ್ಞರು ಮತ್ತು ಪೋಷಕರು ಒತ್ತಾಯಿಸಿದ್ದಾರೆ. ಈ ನಡುವೆ ಅಲರ್ಟ್ ಆಗಿರೋ ಸಚಿವ ಸುರೇಶ್ ಕುಮಾರ್, ಅಳೆದು ತೂಗಿ ಒಂದು ನಿರ್ಧಾರಕ್ಕೆ ಬಂದಿದ್ದಾರಾ ಅನ್ನೋ ಪ್ರಶ್ನೆ ಎದ್ದಿದೆ. ಯಾಕಂದ್ರೆ, ಪರೀಕ್ಷೆ ಬಿಕ್ಕಟ್ಟು ಶಮನಕ್ಕೆ ಇವತ್ತು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಇವತ್ತು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಎಕ್ಸಾಂ ಫಿಕ್ಸ್ ಮಾಡೋಕೆ ಸಚಿವರ ಕೊನೇ ಕಸರತ್ತು ಇನ್ನು, ಕೊನೇ ಹಂತದ ಕಸರತ್ತು ನಡೆಸುತ್ತಿರುವ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್, ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ. ಅಂದ್ರೆ, ಸದ್ಯ ದೇಶದಲ್ಲಿ ಯಾವ್ಯಾವ ರಾಜ್ಯಗಳಲ್ಲಿ ಪರೀಕ್ಷೆ ನಡೆಸುತ್ತಿವೆ? ಒಂದು ವೇಳೆ ನಡೆಸಿದ್ರೆ ಹೇಗೆ..? ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ಜೊತೆಗೆ ಪಿಯುಸಿ ಪರೀಕ್ಷೆ ನಡೆಸೋಕೆ ಪರ್ಯಾಯ ಮಾದರಿ ಏನು ಅನ್ನೋದ್ರ ಬಗ್ಗೆ ಮಾಹಿತಿ ಕೇಳಿದ್ದಾರೆ. ಇಷ್ಟೇ ಅಲ್ಲ, ಶಿಕ್ಷಣ ಇಲಾಖೆಗೆ ತಜ್ಞರು ನೀಡಿರೋ ಪ್ಲ್ಯಾನ್ನಂತೆ ಜುಲೈ 2ನೇ ವಾರದಲ್ಲಿ ಪರ್ಯಾಯ ಮಾದರಿಯಲ್ಲಿ ಪರೀಕ್ಷೆ ನಡೆಯೋ ಸಾಧ್ಯತೆ ಇದೆ.

ಒಟ್ನಲ್ಲಿ, ಈಗಾಗಲೇ ದೇಶದಲ್ಲಿ ಹಲವು ರಾಜ್ಯಗಳು ಪರೀಕ್ಷೆ ರದ್ದು ಮಾಡಿದ್ದು, ನಮ್ಮಲ್ಲಿಯೂ ಎಕ್ಸಾಂ ರದ್ದಾಗುತ್ತಾ ಅಥವಾ ಎಕ್ಸಾಂ ನಡೆಯುತ್ತಾ? ನಡೆದ್ರೆ ಹೇಗಿರುತ್ತೆ? ಅನ್ನೋ ಸಾಲು ಸಾಲು ಪ್ರಶ್ನೆ ಎದ್ದಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇವತ್ತೇ ಉತ್ತರ ನೀಡೋ ಸಾಧ್ಯತೆ ಇದೆ.

ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲಿಗರ ಕಾಟ ತಾಳಲಾರದೆ WWE ಕುಸ್ತಿಪಟು ದಿ ಗ್ರೇಟ್ ಖಲಿ ಮಾಡಿದ್ದೇನು ಗೊತ್ತಾ?

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ