AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ, ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸೀದಾ ಹೋಗಿದ್ದೆಲ್ಲಿಗೆ?

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಮಧ್ಯೆ ಹಠ ತೊಟ್ಟವರಂತೆ SSLC ಪರೀಕ್ಷೆ ಬರೆಯಿಸಿದ್ದ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಇಂದು ಫಲಿತಾಂಶವನ್ನೂ ಖುದ್ದು ಅವರೇ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ, ಸಮಾಧಾನದ ನಿಟ್ಟುಸಿರುಬಿಟ್ಟರು. ಸಚಿವರಾಗಿ ಸುರೇಶ ಕುಮಾರ್ ಪಟ್ಟ ಶ್ರಮಕ್ಕೆ ಎಲ್ಲೆಡೆಯಿಂದ ಇದೀಗ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ‘ಯಾವೊಬ್ಬ ವಿದ್ಯಾರ್ಥಿಯೂ ಆತಂಕ ಎದುರಿಸದೇ, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಪ್ಪಾ ಭಗವಂತಾ!’ ಎಂದು ಸಚಿವ ಸುರೇಶ ಕುಮಾರ್ ಅದ್ಯಾವ ದೇವರಿಗೆ ಹರಕೆ ಹೊತ್ತಿದ್ದರೋ ಗೊತ್ತಿಲ್ಲ. ಆದ್ರೆ ಇವತ್ತು ಸಂಜೆ ಫಲಿತಾಂಶ ಪ್ರಕಟಿಸಿ, […]

ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿ, ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸೀದಾ ಹೋಗಿದ್ದೆಲ್ಲಿಗೆ?
ಸಾಧು ಶ್ರೀನಾಥ್​
|

Updated on:Aug 10, 2020 | 8:59 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಮಧ್ಯೆ ಹಠ ತೊಟ್ಟವರಂತೆ SSLC ಪರೀಕ್ಷೆ ಬರೆಯಿಸಿದ್ದ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಇಂದು ಫಲಿತಾಂಶವನ್ನೂ ಖುದ್ದು ಅವರೇ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ, ಸಮಾಧಾನದ ನಿಟ್ಟುಸಿರುಬಿಟ್ಟರು. ಸಚಿವರಾಗಿ ಸುರೇಶ ಕುಮಾರ್ ಪಟ್ಟ ಶ್ರಮಕ್ಕೆ ಎಲ್ಲೆಡೆಯಿಂದ ಇದೀಗ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ.

‘ಯಾವೊಬ್ಬ ವಿದ್ಯಾರ್ಥಿಯೂ ಆತಂಕ ಎದುರಿಸದೇ, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಪ್ಪಾ ಭಗವಂತಾ!’ ಎಂದು ಸಚಿವ ಸುರೇಶ ಕುಮಾರ್ ಅದ್ಯಾವ ದೇವರಿಗೆ ಹರಕೆ ಹೊತ್ತಿದ್ದರೋ ಗೊತ್ತಿಲ್ಲ. ಆದ್ರೆ ಇವತ್ತು ಸಂಜೆ ಫಲಿತಾಂಶ ಪ್ರಕಟಿಸಿ, ಭುಜದ ಮೇಲಿನ ಭಾರ ಇಳಿದವರಂತೆ ನಿರಾಳವಾಗಿ, ಕೋಲಾರ ಜಿಲ್ಲೆಯ ಮುಳಬಾಗಿಲು ಕಡೆಗೆ ಹೊರಟಿದ್ದಾರೆ.

ಅಲ್ಲಿ ಇತಿಹಾಸ ಪ್ರಸಿದ್ಧ ಕುರುಡುಮಲೆ ಗಣೇಶ ಮಂದಿರಕ್ಕೆ ದಂಪತಿ ಸಮೇತ ತೆರಳಿದ್ದಾರೆ. ದೇವರಿಗೆ ಕೈಮುಗಿಯುತ್ತಾ ‘ವಿಘ್ನ ನಿವಾರಕ ವಿನಾಯಕ, ಏನಪ್ಪಾ ನಿನ್ನ ಲೀಲೆ? ಎಂತೆಂಥಾ ಸಂಕಷ್ಟಗಳು ಎದುರಾದವು. ಅದನ್ನೆಲ್ಲ ಹೂ ಎತ್ತಿ ಪಕ್ಕಕ್ಕಿಟ್ಟಷ್ಟು ಸಲೀಸಾಗಿ ದೂರ ಮಾಡಿಬಿಟ್ಟೆಯಲ್ಲಪ್ಪಾ! ನಿಜಕ್ಕೂ ನೀನು ಗ್ರೇಟ್!!!’ ಎಂದು ಗಣಪನಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಬಂದಿದ್ದಾರೆ.

‘ಬಹು ನಿರೀಕ್ಷಿತ SSLC ಫಲಿತಾಂಶ ಪ್ರಕಟವಾಯಿತು. ನನ್ನ ಮನಸ್ಸು ನಿರಾಳವಾಯಿತು. ಕುರುಡುಮಲೆ ವಿನಾಯಕ ಮಂದಿರಕ್ಕೆ ಬಂದು ಭಗವಂತನಿಗೆ ಶರಣಾದೆ’ ಎಂದು ದೇವಸ್ಥಾನದ ಬಳಿ ಸಚಿವ ಸುರೇಶ್​ ಕುಮಾರ್ ತಿಳಿಸಿದರು. ಆಗ ಪಕ್ಕದಲ್ಲೇ ಇದ್ದ ಅವರ ಪತ್ನಿಯ ಕಣ್ಣಂಚಿನಲ್ಲಿ ಧನ್ಯತಾ ಭಾವ ಮಿಂಚಾಗಿ ಹೊಳೆಯುತ್ತಿತ್ತು!

Published On - 8:18 pm, Mon, 10 August 20

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ