AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1ರಿಂದ 9ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ತೇರ್ಗಡೆ? ಕೆಲ ಹೊತ್ತಿನಲ್ಲೇ ನಿರ್ಧಾರ

ಕಲಿಕಾ ಆಸಕ್ತಿ, ಚಟುವಟಿಕೆ ಆಧರಿಸಿ ತೇರ್ಗಡೆಗೆ ಚಿಂತನೆ ನಡೆಸಲಾಗಿದೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ 10ನೇ ತರಗತಿಗೆ ಸೇರುವ ಹಿನ್ನೆಲೆಯಿಂದ ಓಈ ತರಗತಿಯ ಮಕ್ಕಳಿಗೆ ಬಹು ಆಯ್ಕೆಯ ಪ್ರಶ್ನೆಗಳ ಪರೀಕ್ಷೆ ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ.

1ರಿಂದ 9ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ತೇರ್ಗಡೆ? ಕೆಲ ಹೊತ್ತಿನಲ್ಲೇ ನಿರ್ಧಾರ
ಪರೀಕ್ಷೆ (ಸಾಂಕೇತಿಕ ಚಿತ್ರ)
Follow us
guruganesh bhat
|

Updated on: Apr 05, 2021 | 11:24 AM

ಬೆಂಗಳೂರು: ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಇನ್ನಷ್ಟು ಅಪಾಯಕ್ಕೆ ಆಹ್ವಾನ ನೀಡಲಿದೆ ಎಂಬ ಭಯದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಟಗಳು ಮತ್ತು ಶಿಕ್ಷಣ ಸಚಿವ ಸುರೇಶ್ ‌ಕುಮಾರ್ ನೇತೃತ್ವದ ಸಭೆ ನಡೆಯುತ್ತಿದೆ. 1 ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡುವುದು ಮತ್ತು 6ರಿಂದ 8ನೇ ತರಗತಿ ಮಕ್ಕಳಿಗೆ ಲಿಖಿತ ಪರೀಕ್ಷೆ ಬದಲಿಗೆ ಮೌಲ್ಯಾಂಕನ ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ. ಕಲಿಕಾ ಆಸಕ್ತಿ, ಚಟುವಟಿಕೆ ಆಧರಿಸಿ ತೇರ್ಗಡೆಗೆ ಚಿಂತನೆ ನಡೆಸಲಾಗಿದೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವರ್ಷ 10ನೇ ತರಗತಿಗೆ ಸೇರುವ ಹಿನ್ನೆಲೆಯಿಂದ ಓಈ ತರಗತಿಯ ಮಕ್ಕಳಿಗೆ ಬಹು ಆಯ್ಕೆಯ ಪ್ರಶ್ನೆಗಳ ಪರೀಕ್ಷೆ ನಡೆಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಜಿಮ್​ಗಳ ಮೇಲಿನ ನಿರ್ಬಂಧ ತೆರವು ಜಿಮ್​ಗಳ ಮೇಲೆ ಹೇರಿದ್ದ ಸಂಪೂರ್ಣ ನಿರ್ಬಂಧವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಏಪ್ರಿಲ್ 4ರಂದು ನೂತನ ಆದೇಶ ಹೊರಡಿಸಿದೆ. ಜಿಮ್​ಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು ಎಂದು ರಾಜ್ಯ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಈ ನಿಯಮಕ್ಕೆ ಜಿಮ್ ಅಸೋಸಿಯೇಷನ್​ನಿಂದ ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾ ಹಾಲ್​ಗಳಿಗೆ ನೀಡಿದಂತೆ ಜಿಮ್​ಗಳಿಗೂ ಶೇಕಡಾ 50ರಷ್ಟು ಅವಕಾಶ ನೀಡಿ ಎಂದು ಜಿಮ್ ಅಸೋಸಿಯೇಷನ್ ಮನವಿ ಮಾಡಿತ್ತು.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಆದೇಶವನ್ನು ಇಂದು ಹೊರಡಿಸಿದೆ. ಜಿಮ್​ಗಳಲ್ಲಿ ಶೇಕಡಾ 50ರಷ್ಟು ಅವಕಾಶ ನೀಡಿ, ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಜಿಮ್​ಗಳಲ್ಲಿ ಉಪಕರಣಗಳನ್ನ ಸ್ಯಾನಿಟೈಸ್​​​ ಮಾಡಬೇಕು ಎಂದು ಜಿಮ್​ಗಳಿಗೆ ಹೊರಡಿಸಿದ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ.

ಇದನ್ನೂ ಓದಿ: Coronavirus India Update: ಒಂದೇ ದಿನ 1 ಲಕ್ಷಕ್ಕಿಂತಲೂ ಹೆಚ್ಚು ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಗರಿಷ್ಠ ಪ್ರಕರಣ

ಚಿತ್ರದುರ್ಗ: ಆ್ಯಕ್ಸಿಜನ್​ ಖಾಲಿಯಾಗಿ ದಾರಿ ಮಧ್ಯ ಕೊರೊನಾ ಸೋಂಕು ತಗುಲಿದ್ದ ವೃದ್ಧೆ ಸಾವು

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್