AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಬೋಧನಾ ಶುಲ್ಕದ ಶೇ. 70ರಷ್ಟು ಹಣ ಪಡೆಯಬೇಕು. ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರದ ಕಟ್ಟಾಜ್ಞೆ

1, 2 ಅಥವಾ 3 ಕಂತುಗಳಲ್ಲೂ ಶುಲ್ಕ ಪಡೆಯಬಹುದು. ಆಡಳಿತ, ಹೆಚ್ಚುವರಿ ಶುಲ್ಕ ಪಡೆದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

2019ರ ಬೋಧನಾ ಶುಲ್ಕದ ಶೇ. 70ರಷ್ಟು ಹಣ ಪಡೆಯಬೇಕು. ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ರಾಜ್ಯ ಸರ್ಕಾರದ ಕಟ್ಟಾಜ್ಞೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
TV9 Web
| Edited By: |

Updated on:Apr 06, 2022 | 8:31 PM

Share

ಬೆಂಗಳೂರು: ಕೊವಿಡ್ ಕಾರಣದಿಂದ ಎಲ್ಲರಿಗೂ ಆರ್ಥಿಕವಾಗಿ ಸಂಕಷ್ಟ ಉಂಟಾಗಿದೆ. ಒಂದೆಡೆ, ಪೋಷಕರು ಶುಲ್ಕ ಪಾವತಿಸದಿರುವ ಸ್ಥಿತಿಯಲ್ಲಿ ಇದ್ದರೆ, ಮತ್ತೊಂದೆಡೆ ಶಾಲೆಯಲ್ಲಿ ಶಿಕ್ಷಕರಿಗೆ ವೇತನ ಕೊಡಲಾಗದ ಸ್ಥಿತಿ ಇದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖೇದ ವ್ಯಕ್ತಪಡಿಸಿದ್ದಾರೆ.

ಪರೀಕ್ಷಾ ದಿನಾಂಕ ನಿಗದಿ, ಶಾಲೆ ಪುನಾರಂಭದ ಬಗ್ಗೆ ಇರುವ ಗೊಂದಲ ಹಾಗೂ ಶುಲ್ಕ ಪಾವತಿ ವಿಚಾರದ ಸಮಸ್ಯೆಗಳ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಬಾರಿ ಶಾಲೆಗಳು, 2019ರ ಬೋಧನಾ ಶುಲ್ಕದ ಶೇ. 70ರಷ್ಟು ಶುಲ್ಕವನ್ನು ಪಡೆಯಬೇಕು. ಶಾಲೆಗಳು ಯಾವುದೇ ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ. ಟ್ರಸ್ಟ್​ಗಳ ಅಭಿವೃದ್ಧಿಗೆ ಹಣ ತೆಗೆದುಕೊಳ್ಳುವಂತಿಲ್ಲ. ರಾಜ್ಯದ ಎಲ್ಲ ಮಾದರಿ ಶಾಲೆಗಳಿಗೂ ಈ ಶುಲ್ಕ ಅನ್ವಯ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

1, 2 ಅಥವಾ 3 ಕಂತುಗಳಲ್ಲೂ ಶುಲ್ಕ ಪಡೆಯಬಹುದು. ಆಡಳಿತ, ಹೆಚ್ಚುವರಿ ಶುಲ್ಕ ಪಡೆದಿದ್ದರೆ ಅದನ್ನು ಮುಂದಿನ ವರ್ಷಕ್ಕೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆಗೆ ದಾಖಲಾಗುವಾಗ ಒಂದು ಕಂತಿನ ಶುಲ್ಕ ಪಾವತಿಯಾಗುತ್ತದೆ. ಈಗ ಎರಡನೇ ಕಂತಿನ ಶುಲ್ಕದ ಬಗ್ಗೆ ಚರ್ಚೆಯಾಗುತ್ತಿದೆ. ನಾನು ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದಿಲ್ಲ. ಈ ವರ್ಷ ಯಾವ ಶಾಲೆಯೂ ಶುಲ್ಕ ಹೆಚ್ಚಳ ಮಾಡಬಾರದು ಎಂದು ತಿಳಿಸಿದ್ದಾರೆ.

ಶುಲ್ಕ ನಿಯಂತ್ರಣ ಕಾಯ್ದೆ ಬಗ್ಗೆ ಹೈಕೋರ್ಟ್​ ಒಪ್ಪಿದೆ. ಸರ್ಕಾರ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಿಸಬಹುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 2020-21 ನೇ ಸಾಲಿಗೆ ಸಿಮೀತಗೊಂಡಂತೆ ಈ ನಿಯಮ ರೂಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಶಿಕ್ಷಣ ಇಲಾಖೆ ಇರೋದು ಯಾರ ಕತ್ತು ಹಿಸುಕೋಕು ಅಲ್ಲ. ನಾವು ಯಾವ ಲಾಬಿಗೂ ಶರಣಾಗೋದಿಲ್ಲ. ಅನೇಕ ಪೋಷಕರು ರಾತ್ರಿಯಿಡೀ ಕ್ಯೂ ನಿಂತು ಶಾಲೆ ಸೀಟ್ ಪಡೆದಿದ್ದಾರೆ. ಆಗ ಪೋಷಕರಿಗೆ ಶಾಲೆ ಬಗ್ಗೆ ಒಲವಿತ್ತು. ಆದರೆ ಈಗ ಕೊರೊನಾದಿಂದ ಇಬ್ಬರ ಸಂಬಂಧವೂ ಹದಗೆಟ್ಟಿದೆ.

ಶಾಲೆ ಆಡಳಿತ ಮಂಡಳಿ ಸಮಿತಿ ರಚಿಸಬೇಕು. ಅಲ್ಲಿ ಪೋಷಕರು, ಹಾಗೂ ಶಾಲೆಯವರು ಚರ್ಚೆ ಮಾಡಬೇಕು. ಆದರೆ ಈ ರೀತಿ ಕೆಲಸಗಳು ಆಗಿಲ್ಲ. ಹೀಗಾಗಿ ನಮ್ಮ ಆಯುಕ್ತರು ಮತ್ತೆ ಎಲ್ಲರ ಜತೆ ಚರ್ಚೆ ಮಾಡಿದ್ದಾರೆ. ಎಲ್ಲರೂ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವರ್ಷ ಕೊವೀಡ್ ಬಂದ ಹಿನ್ನೆಲೆ, ಯಾವುದೇ ಶಾಲೆ ಶುಲ್ಕ ಹೆಚ್ಚಳ ಮಾಡಬಾರದು. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಮಾಡಬಾರದು ಅಂತ ಸುತ್ತೋಲೆ ಹೊರಡಿಸಿದ್ದೆ. ಶಿಕ್ಷಣ ತಜ್ಞರ ಜತೆ ಚರ್ಚೆ ನಡೆಸಿದ್ದೇನೆ. ಮೈಸೂರು ಭಾಗದ ಶಾಲೆ ಕಾಲೇಜು ಹಾಗೂ ದ. ಕ‌. ಭಾಗದ ಶಾಲಾ ಸಂಘಟನೆಗಳ‌ ಜತೆ ಚರ್ಚೆ ಆಗಿದೆ. ಕ್ಯಾಮ್ಸ್, ರುಪ್ಸಾ, ಕುಸುಮ, ಸಿಬಿಎಸ್​ಸಿ ಜತೆ ಕೂಡ ಚರ್ಚೆ ಮಾಡಿದ್ದೇವೆ. ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಜತರಗೂ ಈ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಚಾರದಲ್ಲಿ ಏನಾದರೂ ತಕರಾರು ಬಂದರೆ, ಒಂದು ಅಧಿಕಾರಯುತ ಸಮಿತಿ ರಚನೆ ಮಾಡಿ, ಅದರ ಮೂಲಕ ದೂರು ಪಡೆಯುತ್ತೇವೆ. ಪೋಷಕರು ಈಗಾಗಲೇ ಫೀಸ್ ಜಾಸ್ತಿ ಕಟ್ಟಿದ್ರೆ, ಮುಂದಿನ ವರ್ಷದ ಶುಲ್ಕದ ಜೊತೆ ಅದನ್ನು ಹೊಂದಾಣಿಕೆ ಮಾಡಿಕೊಳ್ಳಬೇಕು. ಈ ವರ್ಷ ನಾವೆಲ್ಲಾ ಕೊಟ್ಟು ತೆಗೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳೋಣ ಎಂದು ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

Published On - 5:05 pm, Fri, 29 January 21

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ