AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮ ಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ -ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ

‘ರಾಮ ಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ. ರಾಜ್ಯದ ಯಾವುದೇ ಗ್ರಂಥಾಲಯಗಳಲ್ಲಿ ಪುಸ್ತಕ ಸಿಗುತ್ತಿಲ್ಲ. ಈ ಪುಸ್ತಕ ಓದಲು ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ ಕೊಟ್ಟಿದ್ದಾರೆ.

‘ರಾಮ ಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ -ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ
‘ರಾಮಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ -ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ
KUSHAL V
|

Updated on: Jan 19, 2021 | 10:39 PM

Share

ಬೆಂಗಳೂರು: ‘ರಾಮ ಮಂದಿರ ಏಕೆ ಬೇಡ?’ ಪುಸ್ತಕಗಳ ಖರೀದಿ ನಡೆದಿಲ್ಲ. ರಾಜ್ಯದ ಯಾವುದೇ ಗ್ರಂಥಾಲಯಗಳಲ್ಲಿ ಪುಸ್ತಕ ಸಿಗುತ್ತಿಲ್ಲ. ಈ ಪುಸ್ತಕ ಓದಲು ಸಿಗುವಂತೆ ಸರ್ಕಾರ ವ್ಯವಸ್ಥೆ ಮಾಡಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸಚಿವರಿಂದ ಸ್ಪಷ್ಟನೆ ಸಿಕ್ಕಿದೆ.

ರಾಮ ಮಂದಿರ ಏಕೆ ಬೇಡ? ಪುಸ್ತಕ ಗ್ರಂಥಾಲಯ ಇಲಾಖೆಯಿಂದ ಸ್ವೀಕೃತವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಪುಸ್ತಕ ಸ್ವೀಕೃತ ಪಟ್ಟಿಯಲ್ಲಿ 4,062ನೇ ಕ್ರಮಸಂಖ್ಯೆಯಲ್ಲಿದೆ. 2018ರಲ್ಲಿ 10,571 ಪುಸ್ತಕಗಳು ಮಾತ್ರ ಸ್ವೀಕೃತವಾಗಿವೆ. ಆಯ್ಕೆ ಸಮಿತಿ ಆಯ್ಕೆ ಮಾಡಿದ್ದ 5,109 ಪುಸ್ತಕಗಳ ಪೈಕಿ ಮೊದಲು 350 ಪುಸ್ತಕ ಖರೀದಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಉಳಿದಂತೆ ಯಾವುದೇ ಪುಸ್ತಕ ಖರೀದಿಗೆ ಅನುದಾನ ನೀಡಿಲ್ಲ ಎಂದು ಸಚಿವ ಸ್ಪಷ್ಟನೆ ನೀಡಿದ್ದಾರೆ. ಮೊದಲ ಹಂತದಲ್ಲಿ 350 ಪುಸ್ತಕ ಮಾತ್ರ ಖರೀದಿ ಪ್ರಕ್ರಿಯೆಯಲ್ಲಿದೆ ಎಂದು ಸುರೇಶ್​ ಕುಮಾರ್​ ಹೇಳಿದರು.

ರಾಮಮಂದಿರ ಏಕೆ ಬೇಡ? ಹೆಸರಿನ ಪುಸ್ತಕ ಖರೀದಿಮಾಡಿಲ್ಲ. ಈ ವಿಚಾರ ಗಮನಕ್ಕೆ ಬಂದ ಕೂಡಲೇ ಪಟ್ಟಿ ಪರಿಶೀಲಿಸಿ ವರದಿ ಮಂಡಿಸಲು ನಿರ್ಧರಿಸಲಾಗಿದೆ. ಸಮಾಜಕ್ಕೆ ಧಕ್ಕೆಯಾಗುವ ಪುಸ್ತಕ ಖರೀದಿಗೆ ನಿರ್ಧರಿಸಿಲ್ಲ ಎಂದು ಸಚಿವ ಎಸ್.ಸುರೇಶ್ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ವಿವಿಧ ಪ್ರಕಾಶನಗಳು ಪ್ರತಿ ವರ್ಷ ಆಯಾ ಸಾಲಿನಲ್ಲಿ ಪ್ರಕಟಿಸುವ ಹತ್ತಾರು ಸಾವಿರ ಪುಸ್ತಕಗಳು ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ…

Posted by Suresh Kumar S on Monday, January 18, 2021

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ