ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ

ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಸಾವಿಗೀಡಾದ ರಮೇಶ್ 8 ವರ್ಷಗಳಿಂದ ಸಚಿವ​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಗದೆ ಸಚಿವ ಸುರೇಶ್ ಕುಮಾರ್ ಆಪ್ತ ಕಾರ್ಯದರ್ಶಿ ಕೊರೊನಾಗೆ ಬಲಿ
ಸಚಿವ ಸುರೇಶ್ ಕುಮಾರ್
ಸಾಧು ಶ್ರೀನಾಥ್​

Updated on: Apr 19, 2021 | 3:40 PM

ಬೆಂಗಳೂರು: ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಅವರ ಆಪ್ತ ಕಾರ್ಯದರ್ಶಿ ಹೆಜ್​.ಜೆ. ರಮೇಶ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಡಿವಾಳದ ಸಮೀಪದ ಸೆಂಟ್ ಜಾನ್ಸ್ ಚಿಕಿತ್ಸೆ ಪಡೆಯುತ್ತಿದ್ದರು. ಸೂಕ್ತ ಸಮಯಕ್ಕೆ ಆಕ್ಸಿಜನ್ ಸಿಗದೆ ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ರಮೇಶ್ ಸಾವಿಗೀಡಾಗಿದ್ದಾರೆ.

ಹೆಜ್​.ಜೆ. ರಮೇಶ್ ಅವರು 8 ವರ್ಷಗಳಿಂದ ಎಸ್​ ಸುರೇಶ್ ಕುಮಾರ್ ಅವರ ಜೊತೆ ಸೇವೆ ಸಲ್ಲಿಸಿದ್ದರು. ಈ ಬಗ್ಗೆ ಸ್ವತಃ ಸಚಿವ ಸುರೇಶ್ ಕುಮಾರ್ ಅವರೇ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ’ ಎಂದು ಸಚಿವ ಸುರೇಶ್ ಕುಮಾರ್ ಶ್ರದ್ದಾಂಜಲಿ ಅರ್ಪಿಸಿದ್ದಾರೆ.

(Education minister suresh kumar personal assistant ramesh died due to coronavirus)

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us