AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್​, ಯಾವುದೇ ಕಾರಣಕ್ಕೂ ಕ್ಲಾಸ್​ಗಳನ್ನ ನಿಲ್ಲಿಸಬೇಡಿ -ಸಚಿವ ಸುರೇಶ್​ ಕುಮಾರ್​ಗೆ ವಿದ್ಯಾರ್ಥಿನಿಯರ ಬಿನ್ನಹ

ಎಲ್ಲ ಕಡೆ ಮಕ್ಕಳು ತರಗತಿಗೆ ಬಂದು ಶಿಕ್ಷಕರಿಂದ ಪಾಠ ಕೇಳಬೇಕೆಂಬ ತುಡಿತ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ತರಗತಿಗಳನ್ನು ನಿಲ್ಲಿಸಬೇಡಿ ಎಂದೂ ಸಹ ಮನವಿ ಮಾಡಿರುವ ಸಂಗತಿಗಳೂ ನಡೆದಿವೆ.

ಸಾರ್​, ಯಾವುದೇ ಕಾರಣಕ್ಕೂ ಕ್ಲಾಸ್​ಗಳನ್ನ ನಿಲ್ಲಿಸಬೇಡಿ -ಸಚಿವ ಸುರೇಶ್​ ಕುಮಾರ್​ಗೆ ವಿದ್ಯಾರ್ಥಿನಿಯರ ಬಿನ್ನಹ
‘ಸಾರ್​.. ಯಾವುದೇ ಕಾರಣಕ್ಕೂ ಕ್ಲಾಸ್​ಗಳನ್ನು ನಿಲ್ಲಿಸಬೇಡಿ’
KUSHAL V
|

Updated on: Jan 02, 2021 | 10:26 PM

Share

ಬೆಂಗಳೂರು: ಕಳೆದ 4 ದಿನಗಳಿಂದ ನಾನು ಶಾಲಾ ಕಾಲೇಜುಗಳಿಗೆ ಭೇಟಿ ನೀಡುತ್ತಿದ್ದೇನೆ. ನಿನ್ನೆ ಮತ್ತು ಇಂದು ಶಾಲಾ ಕಾಲೇಜುಗಳಲ್ಲಿ ಅಪಾರ ಸಂಖ್ಯೆಯ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮಾತನಾಡಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ಎಲ್ಲ ಕಡೆ ಶಾಲೆ-ಕಾಲೇಜುಗಳು ಪ್ರಾರಂಭವಾಗಿರುವ ಬಗ್ಗೆ ಒಳ್ಳೆಯ ಬೆಂಬಲ ಹಾಗೂ ಸಂತಸ ಕಂಡುಬರುತ್ತಿದೆ. ಆದರೆ, ಆಗಲೇ ಜೊತೆ ಜೊತೆಗೆ ಮತ್ತೆ ಆತಂಕ ಉಂಟುಮಾಡುವ ಸುದ್ದಿಗಳೂ ಪ್ರಕಟವಾಗುತ್ತಿವೆ. ನಿನ್ನೆ ಇಂದ ತಾನೇ ನಮ್ಮ SSLC ಮತ್ತು ಎರಡನೇ PUC ತರಗತಿಗಳು ಹಾಗೂ ವಿದ್ಯಾಗಮ ಕಾರ್ಯಕ್ರಮಗಳು ಪ್ರಾರಂಭವಾಗಿದೆ. ಆಗಲೇ ಇಂದು ಶಾಲೆಗಳಲ್ಲಿ ಕೊರೊನಾ ಹರಡುತ್ತಿದೆ ಎಂದು ಅರ್ಥವಾಗುವಂತೆ ಸುದ್ದಿಗಳು ಬರುತ್ತಿದೆ ಎಂದು ಸುರೇಶ್​ ಕುಮಾರ್​ ಹೇಳಿದ್ದಾರೆ.

ಆದರೆ, ಎಲ್ಲ ಕಡೆ ಮಕ್ಕಳು ತರಗತಿಗೆ ಬಂದು ಶಿಕ್ಷಕರಿಂದ ಪಾಠ ಕೇಳಬೇಕೆಂಬ ತುಡಿತ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ತರಗತಿಗಳನ್ನು ನಿಲ್ಲಿಸಬೇಡಿ ಎಂದೂ ಸಹ ಮನವಿ ಮಾಡಿರುವ ಸಂಗತಿಗಳೂ ನಡೆದಿವೆ. ಅದರಲ್ಲಿ ಗ್ರಾಮೀಣ ಭಾಗದ ಶಾಲೆಗಳಲ್ಲಿ ಇದು ಅತ್ಯಂತ ಅಗತ್ಯವಾಗಿರುವುದು ಕಂಡುಬರುತ್ತಿದೆ.

ಹಾಗಾಗಿ, ನಾವೆಲ್ಲರೂ ಈ ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ಕಾಳಜಿ ಇಡೋಣ. ಇವರಿಗೆ ಶಿಕ್ಷಣ ದೊರಕದಿದ್ದರೆ ಇವರ ಬಾಳು ಎತ್ತ ಸಾಗುತ್ತದೋ ನಮಗೆ ತಿಳಿಯದು. ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ, ಬಾಲ್ಯ ವಿವಾಹದ ಪ್ರಸಂಗಗಳು ಹೆಚ್ಚಾಗುವುದು ಸಮಾಜಕ್ಕೆ ಒಳಿತಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಹಾಗಾಗಿ, ಇವರ ವಿದ್ಯಾಭ್ಯಾಸಕ್ಕೆ ಯಾವುದೇ ತೊಡಕಾಗದಂತೆ ಕಾಳಜಿ ವಹಿಸೋಣ ಎಂದು ಹೇಳಿದ್ದಾರೆ.

ಮೈಸೂರು ವಿ.ವಿಯ ಬಿ.ಎಡ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಶುಲ್ಕ ಕಡಿತಗೊಳಿಸಿದ ಆಡಳಿತ ಮಂಡಳಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ