Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Jun 09, 2021 | 6:29 PM

ಬೆಂಗಳೂರು: ಎಸ್​ಎಸ್​ಎಲ್​ಸಿ ಫಲಿತಾಂಶದ ಬಳಿಕವೇ ಪಿಯುಸಿಗೆ ದಾಖಲಾತಿ ಕಾರ್ಯ ನಡೆಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪ್ರಥಮ ಪಿಯುಸಿ ದಾಖಲಾತಿಗೆ ಗೈಡ್‌ಲೈನ್ಸ್ ನೀಡುತ್ತೇವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ಹೊರಡಿಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಮಾರ್ಗಸೂಚಿ 2021-22 ಬಿಡುಗಡೆ ಬಳಿಕ ದಾಖಲಾತಿ ಕಾರ್ಯ ಆರಂಭಿಸಬೇಕು. ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ. ಪ್ರಥಮ ಪಿಯುಸಿ ಆನ್​ಲೈನ್​ ತರಗತಿ ನಡೆಸುವಂತಿಲ್ಲ. ಇಲಾಖೆ ಆದೇಶ ಧಿಕ್ಕರಿಸುವ ಕಾಲೇಜುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಆದೇಶ ಉಲ್ಲಂಘಿಸುವ ಕಾಲೇಜುಗಳ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ಸಂಬಂಧ ಇಂದು (ಜೂನ್ 9) ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಡಿಪಿಐಗಳ ಜೊತೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಭೆ ನಡೆಸಿ ಚರ್ಚಿಸದರು. ಸುಧಾರಿತ ಗೈಡ್‌ಲೈನ್ಸ್‌ನೊಂದಿಗೆ ಪರೀಕ್ಷೆ ನಡೆಸೋಣ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಎಂದು ಎಲ್ಲ ಡಿಡಿಪಿಐಗಳಿಗೆ ಎಸ್. ಸುರೇಶ್‌ಕುಮಾರ್ ಸೂಚನೆ ನೀಡಿದರು.

ಪರೀಕ್ಷೆ ಬರೆಯುವುದಕ್ಕೆ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಪೋಷಕರಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಲಹೆ ನೀಡಿದರು. ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ SSLC ಪರೀಕ್ಷಾ ದಿನಾಂಕ ಘೋಷಣೆ ಮಾಡುತ್ತೇವೆ. ಮುಂದಿನ ವ್ಯಾಸಂಗಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಅಗತ್ಯ. ಹಾಗಾಗಿ, ಸಾಮರ್ಥ್ಯ ಗುರುತಿಸಿಕೊಳ್ಳುವ ದೃಷ್ಟಿಯಿಂದ ಪರೀಕ್ಷೆ ಮಾಡುತ್ತೇವೆ. ಹೀಗಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರಮಕೈಗೊಳ್ಳಿ ಎಂದು ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಸೂಚನೆ ನೀಡಿದರು.

ಇದನ್ನೂ ಓದಿ: Karnataka SSLC 2021 Exam: ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ; ಶೀಘ್ರವೇ ಪರೀಕ್ಷಾ ದಿನಾಂಕ ಘೋಷಣೆ: ಸುರೇಶ್ ಕುಮಾರ್

2nd PU Exams for Repeaters: ಪಿಯು ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಿಪೀಟರ್ಸ್ ವಿದ್ಯಾರ್ಥಿಗಳು

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ