AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ; ಆನ್​ಲೈನ್​ ತರಗತಿ ನಡೆಸುವಂತಿಲ್ಲ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 09, 2021 | 6:29 PM

Share

ಬೆಂಗಳೂರು: ಎಸ್​ಎಸ್​ಎಲ್​ಸಿ ಫಲಿತಾಂಶದ ಬಳಿಕವೇ ಪಿಯುಸಿಗೆ ದಾಖಲಾತಿ ಕಾರ್ಯ ನಡೆಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಪ್ರಥಮ ಪಿಯುಸಿ ದಾಖಲಾತಿಗೆ ಗೈಡ್‌ಲೈನ್ಸ್ ನೀಡುತ್ತೇವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಗೈಡ್‌ಲೈನ್ಸ್ ಹೊರಡಿಸುತ್ತೇವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಮಾರ್ಗಸೂಚಿ 2021-22 ಬಿಡುಗಡೆ ಬಳಿಕ ದಾಖಲಾತಿ ಕಾರ್ಯ ಆರಂಭಿಸಬೇಕು. ಶಿಕ್ಷಣ ಇಲಾಖೆ ಆದೇಶವಿಲ್ಲದೆ ಪ್ರಥಮ ಪಿಯು ದಾಖಲಾತಿ ಮಾಡುವಂತಿಲ್ಲ. ಪ್ರಥಮ ಪಿಯುಸಿ ಆನ್​ಲೈನ್​ ತರಗತಿ ನಡೆಸುವಂತಿಲ್ಲ. ಇಲಾಖೆ ಆದೇಶ ಧಿಕ್ಕರಿಸುವ ಕಾಲೇಜುಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಆದೇಶ ಉಲ್ಲಂಘಿಸುವ ಕಾಲೇಜುಗಳ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಕ್ರಮಗಳ ಬಗ್ಗೆ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮವಹಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.

ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವ ಸಂಬಂಧ ಇಂದು (ಜೂನ್ 9) ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಡಿಡಿಪಿಐಗಳ ಜೊತೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಭೆ ನಡೆಸಿ ಚರ್ಚಿಸದರು. ಸುಧಾರಿತ ಗೈಡ್‌ಲೈನ್ಸ್‌ನೊಂದಿಗೆ ಪರೀಕ್ಷೆ ನಡೆಸೋಣ. ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಎಂದು ಎಲ್ಲ ಡಿಡಿಪಿಐಗಳಿಗೆ ಎಸ್. ಸುರೇಶ್‌ಕುಮಾರ್ ಸೂಚನೆ ನೀಡಿದರು.

ಪರೀಕ್ಷೆ ಬರೆಯುವುದಕ್ಕೆ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಪೋಷಕರಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸಲಹೆ ನೀಡಿದರು. ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ SSLC ಪರೀಕ್ಷಾ ದಿನಾಂಕ ಘೋಷಣೆ ಮಾಡುತ್ತೇವೆ. ಮುಂದಿನ ವ್ಯಾಸಂಗಕ್ಕೆ ವಿದ್ಯಾರ್ಥಿಗಳ ಸಾಮರ್ಥ್ಯ ಅಗತ್ಯ. ಹಾಗಾಗಿ, ಸಾಮರ್ಥ್ಯ ಗುರುತಿಸಿಕೊಳ್ಳುವ ದೃಷ್ಟಿಯಿಂದ ಪರೀಕ್ಷೆ ಮಾಡುತ್ತೇವೆ. ಹೀಗಾಗಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಲು ಕ್ರಮಕೈಗೊಳ್ಳಿ ಎಂದು ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಸೂಚನೆ ನೀಡಿದರು.

ಇದನ್ನೂ ಓದಿ: Karnataka SSLC 2021 Exam: ಎಸ್​ಎಸ್​ಎಸಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ; ಶೀಘ್ರವೇ ಪರೀಕ್ಷಾ ದಿನಾಂಕ ಘೋಷಣೆ: ಸುರೇಶ್ ಕುಮಾರ್

2nd PU Exams for Repeaters: ಪಿಯು ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಿಪೀಟರ್ಸ್ ವಿದ್ಯಾರ್ಥಿಗಳು

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ