ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಆರ್ಥಿಕ ನೆರವು

ಕರ್ನಾಟಕದಲ್ಲಿ ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳು ಇನ್ನು ಮುಂದೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆಯಲಿದ್ದಾರೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ‘ಧಾರ್ಮಿಕ ಪರಿಷತ್’ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಶೈಕ್ಷಣಿಕ ಆರ್ಥಿಕ ನೆರವು
ಪ್ರಾತಿನಿಧಿಕ ಚಿತ್ರ
Image Credit source: en.m.wikipedia
Rakesh Nayak Manchi

Updated on: Oct 14, 2023 | 7:18 AM

ಬೆಂಗಳೂರು, ಅ.14: ಕರ್ನಾಟಕದಲ್ಲಿ ಬಿ ಮತ್ತು ಸಿ ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರ ಅರ್ಚಕರು ಮತ್ತು ಸಿಬ್ಬಂದಿಯ ಮಕ್ಕಳು ಇನ್ನು ಮುಂದೆ ರಾಜ್ಯ ಸರ್ಕಾರದಿಂದ ಶಿಕ್ಷಣಕ್ಕಾಗಿ ಆರ್ಥಿಕ ನೆರವು ಪಡೆಯಲಿದ್ದಾರೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ನೇತೃತ್ವದಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ‘ಧಾರ್ಮಿಕ ಪರಿಷತ್’ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಮುಜರಾಯಿ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಸರ್ಕಾರವು ಪಿಯುಸಿ ವಿದ್ಯಾರ್ಥಿಗಳಿಗೆ 5,000 ರೂ., ಐಟಿಐ/ ಜೆಒಸಿ/ ಡಿಪ್ಲೊಮಾ ವಿದ್ಯಾರ್ಥಿಗಳಿಗೆ 5,000 ರೂ., ಪದವಿಗೆ 7,000 ರೂ., ಸ್ನಾತಕೋತ್ತರರಿಗೆ 15,000 ರೂ., ಆಯುರ್ವೇದ 25,000 ರೂ. ವಾರ್ಷಿಕ ಆರ್ಥಿಕ ನೆರವು ನೀಡಲಿದೆ. ಹೋಮಿಯೋಪತಿ ಕೋರ್ಸ್‌ಗಳು, ತಾಂತ್ರಿಕ ಶಿಕ್ಷಣಕ್ಕೆ (ಎಂಜಿನಿಯರಿಂಗ್) 25,000 ರೂ., ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ 50,000 ರೂ. ಮತ್ತು ವಿದೇಶದಲ್ಲಿ ಅಧ್ಯಯನಕ್ಕೆ 1 ಲಕ್ಷ ರೂ. ನೆರವು ಸಿಗಲಿದೆ.

ಅರ್ಚಕರ ಕುಟುಂಬಗಳಿಗೆ ಭದ್ರತೆ ನೀಡುವ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆದಿದೆ. ಮೃತಪಟ್ಟ ಅರ್ಚಕರು ಮತ್ತು ಸಿಬ್ಬಂದಿಯ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರವನ್ನು ನೀಡುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

ಇದನ್ನೂ ಓದಿ: ಕಾರ್‌ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ -ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಈ ನೌಕರರನ್ನು ಆಯುಷ್ಮಾನ್ ಭಾರತ್ ಅಡಿಯಲ್ಲಿ ಸೇರಿಸಲಾಗುವುದು ಮತ್ತು ಅವರಿಗೆ ಸರ್ಕಾರ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗುತ್ತದೆ. ಇಲಾಖೆಯ ಯೋಜನೆಯಡಿ ವಾರ್ಷಿಕವಾಗಿ ಕಾಶಿ-ಗಯಾಗೆ ಮುಕ್ತವಾಗಿ ಪ್ರಯಾಣಿಸಲು ಸರ್ಕಾರವು ಅವಕಾಶವನ್ನು ನೀಡಲಿದೆ.

ಅರ್ಚಕರು ಪ್ರತಿ ತಿಂಗಳು ತಸ್ದಿಕ್ ಮೊತ್ತವನ್ನು ಸಂಗ್ರಹಿಸಲು ಸುಲಭವಾಗುವಂತೆ ಡಿಬಿಟಿ ಮೂಲಕ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಇದು ಡಿಸಿ ಅಥವಾ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಸಚಿವರು ಹೇಳಿದರು.

ಮುಜರಾಯಿ ದೇವಸ್ಥಾನಗಳಿಗೆ ಕಾಲ್ ಸೆಂಟರ್‌ಗಳು

ಮುಜರಾಯಿ ಇಲಾಖೆ ಅಧೀನದಲ್ಲಿರುವ ಎಲ್ಲ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲು ಕಾಲ್ ಸೆಂಟರ್ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೇವಾಲಯಗಳಲ್ಲಿ ಲಭ್ಯವಿರುವ ಸೇವೆಗಳ ಬಗ್ಗೆ ಮಾಹಿತಿ ಪಡೆಯಲು ಅಥವಾ ದೇವಾಲಯದ ಬೋರ್ಡಿಂಗ್ ಸೌಲಭ್ಯಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಲು ಭಕ್ತರು ಈ ಕೇಂದ್ರಗಳಿಗೆ ಕರೆ ಮಾಡಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us