AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲಾ ಅಧ್ಯಾಪಕರು ಕಂಗಾಲು: ಮಕ್ಕಳಿಗೆ ಮೊಟ್ಟೆ ನೀಡಲು ಖರ್ಚಾಗುತ್ತಿದೆ ಶಿಕ್ಷಕರ ದುಡ್ಡು!

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆ ಈಗ ಶಿಕ್ಷಕರಿಗೆ ಹೊರೆಯಾಗಿದೆ. ಸರಕಾರಿ ಶಾಲೆಗಳಲ್ಲಿ ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಪ್ರಸ್ತುತ ಮೊಟ್ಟೆ ದರ 8 ರೂ.ಗೆ ಏರಿಕೆಯಾಗಿದ್ದರೂ, ಸರ್ಕಾರ 6 ರೂ. ನಿಗದಿಪಡಿಸಿದ್ದರಿಂದ ಶಿಕ್ಷಕರು ಹೆಚ್ಚುವರಿ ವೆಚ್ಚ ಭರಿಸಬೇಕಾಗಿದೆ. ಇದು ಶಿಕ್ಷಕರ ಜೇಬು ಸುಡುವಂತೆ ಮಾಡಿದೆ.

ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲಾ ಅಧ್ಯಾಪಕರು ಕಂಗಾಲು: ಮಕ್ಕಳಿಗೆ ಮೊಟ್ಟೆ ನೀಡಲು ಖರ್ಚಾಗುತ್ತಿದೆ ಶಿಕ್ಷಕರ ದುಡ್ಡು!
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on: Dec 10, 2025 | 7:55 AM

Share

ಬೆಂಗಳೂರು, ಡಿಸೆಂಬರ್ 10: ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸುವುದರ ಜೊತೆಗೆ ಸರಕಾರಿ ಶಾಲೆಗಳತ್ತ (government Schools) ಮಕ್ಕಳನ್ನು ಸೆಳೆಯುವ ಉದ್ದೇಶದಿಂದ ಮೊಟ್ಟೆ (Egg) ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಸರಕಾರದಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಕೊಡುತ್ತಿದ್ದ ಮೊಟ್ಟೆ ಸೌಲಭ್ಯವನ್ನು ಶಿಕ್ಷಣ ಇಲಾಖೆಯು ಅಜೀಂ ಪ್ರೇಮ್‌ಜೀ ಪ್ರತಿಷ್ಠಾನದ ಸಹಯೋಗದೊಂದಿಗೆ ವಾರದ ಆರು ದಿನಗಳಿಗೆ ವಿಸ್ತರಿಸಿದೆ. ಎರಡು ದಿನಕ್ಕೆ ಏಜೆನ್ಸಿಗಳು ಮೊಟ್ಟೆ ಪೂರೈಸಿದರೆ, ಉಳಿದ 4 ದಿನ ಸರಕಾರ ನೀಡಿದ ಅನುದಾನದಲ್ಲೇ ಮೊಟ್ಟೆ ಖರೀದಿಸಿ ವಿತರಿಸಬೇಕಿದೆ. ಮೊಟ್ಟೆಗೇನೋ ದುಡ್ಡು ಬರುತ್ತಿದೆ. ಆದರೆ, ಅದು ಮೊಟ್ಟೆ ಖರೀದಿಗೆ ಹಾಗೂ ಅದನ್ನು ಬೇಯಿಸಿಕೊಡುವ ಖರ್ಚಿಗೆ ಸಾಕಾಗುತ್ತಿಲ್ಲ. ಹೀಗಾಗಿ ಶಿಕ್ಷಕರು ಹೆಚ್ಚುವರಿ ಮೊತ್ತವನ್ನು ತಮ್ಮ ಜೇಬಿನಿಂದಲೇ ವ್ಯಯಿಸಬೇಕಾಗುತ್ತಿದೆ.

ಎಷ್ಟಿದೆ ಮೊಟ್ಟೆ ದರ?

ಈ ಹಿಂದೆ 5.30 ರೂ.ನಷ್ಟಿದ್ದ ಮೊಟ್ಟೆ ದರ ಕಳೆದ ತಿಂಗಳಿಂದ 7 ರಿಂದ 8 ರೂ. ವರೆಗೆ ಏರಿಕೆಯಾಗಿದೆ. ಉತ್ಪಾದನೆ ಕುಸಿತ ಹಾಗೂ ಬೇಡಿಕೆ ಹೆಚ್ಚಾದ ಹಿನ್ನಲೆ ಮೊಟ್ಟೆ ದರ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ದರ 8 ರೂಪಾಯಿಗೆ ಏರಿಕೆ ಕಂಡಿದೆ. ಆದರೆ ಶಾಲಾ ಶಿಕ್ಷಣ ಇಲಾಖೆ ಪ್ರತಿ ಮೊಟ್ಟೆ ಖರೀದಿಗೆ 6 ರೂಪಾಯಿ ದರ ನಿಗದಿ ಮಾಡಿದೆ. ಇದರಿಂದಾಗಿ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಕೈಯಿಂದ ಹೆಚ್ಚುವರಿ ಹಣ ಹಾಕಿ ಮೊಟ್ಟೆ ದರ ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಮೊಟ್ಟೆ ಬೇಯಿಸಲು ಹೆಚ್ಚು ಹಣ ಖರ್ಚಾಗುತ್ತಿದೆ. ಹೀಗಾಗಿ ಸರ್ಕಾರಿ ಶಾಲಾ ಶಿಕ್ಷಕರಿಗೆ ಮೊಟ್ಟೆ ಖರೀದಿಸಲು ಆಗದ ಮತ್ತು ಹೆಚ್ಚುವರಿ ಹಣ ನೀಡಲು ಸ್ವಂತ ಹಣ ಖರ್ಚು ಮಾಡಬೇಕಾದ, ಅನುದಾನಿಗಳ ಮೊರೆ ಹೋಗಬೇಕಾದ ಸ್ಥಿತಿ ಎದುರಾಗಿದೆ.

ಕಳೆದ ಕೆಲವು ತಿಂಗಳ ಹಿಂದೆ ಶಿಕ್ಷಣ ಇಲಾಖೆ ವಾರದಲ್ಲಿ 2 ದಿನಗಳು ಮಾತ್ರ ಮೊಟ್ಟೆ ವಿತರಣೆ ಮಾಡುತ್ತಿತ್ತು. ಆದರೆ, ಇತ್ತೀಚೆಗೆ ಶಿಕ್ಷಣ ಇಲಾಖೆಯು ಅಜೀಂ ಪ್ರೇಮ್‌ಜೀ ಫೌಂಡೇಷನ್‌ ಜತೆ ಒಪ್ಪಂದ ಮಾಡಿಕೊಂಡು 1,500 ಕೋಟಿ ರೂ.ಅನುದಾನ ಪಡೆದಿದೆ. ಇದರಿಂದ ವಾರದಲ್ಲಿ ಎರಡು ದಿನಗಳ ಬದಲಿಗೆ 6 ದಿನಗಳ ಕಾಲ ಮೊಟ್ಟೆ ನೀಡುತ್ತಿದೆ. ಇದರಿಂದಾಗಿ ಶಾಲೆಗಳಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗುತ್ತಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೋಳಿ ಮೊಟ್ಟೆ ದರ ಏರಿಕೆ: ಕ್ರಿಸ್ಮಸ್, ಹೊಸ ವರ್ಷ ಹಿನ್ನೆಲೆ ಬೇಡಿಕೆ ಹೆಚ್ಚಳ

ಒಟ್ಟಿನಲ್ಲಿ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ನೀಡುವ ಯೋಜನೆಯಿಂದಾಗಿ ಸರ್ಕಾರಿ ಶಾಲೆ ಶಿಕ್ಷಕರಿಗೆ ಸಮಸ್ಯೆ ಎದುರಾಗಿದೆ. ಸರ್ಕಾರ ಈ ಬಗ್ಗೆ ಕೂಡಲೇ ಗಮನಹರಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್