AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

eHundi in Dargah: ವಕ್ಫ್ ಒಡೆತನದ ದರ್ಗಾ, ಮಸೀದಿಗಳಿಗೆ ಇಹುಂಡಿ ವ್ಯವಸ್ಥೆ, ಹೊಸ ಆ್ಯಪ್​​ ಬಿಡುಗಡೆ ಮಾಡಿದ ಸಚಿವ

ರಾಜ್ಯ ವಕ್ಫ್ ಮಂಡಳಿಗೆ ಸೇರಿದ ದರ್ಗಾ ಮತ್ತು ಮಸೀದಿಗಳಿಗೆ ದೇಣಿಗೆ ನೀಡಲು ಸರ್ಕಾರಿ ಸ್ವಾಮ್ಯದ ದೇವಸ್ಥಾನಗಳ ಮಾದರಿಯಂತೆ ವಿಶೇಷ ಹುಂಡಿ ಆ್ಯಪ್​​ನ್ನು ಅಭಿವೃದ್ಧಿಪಡಿಸಲಾಗಿದೆ.

eHundi in Dargah: ವಕ್ಫ್ ಒಡೆತನದ ದರ್ಗಾ, ಮಸೀದಿಗಳಿಗೆ ಇಹುಂಡಿ ವ್ಯವಸ್ಥೆ, ಹೊಸ ಆ್ಯಪ್​​ ಬಿಡುಗಡೆ ಮಾಡಿದ ಸಚಿವ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
| Updated By: Digi Tech Desk

Updated on:Jun 28, 2023 | 12:10 PM

ಹಿಂದೂ ಧರ್ಮದ ಕೆಲವೊಂದು ವಿಚಾರಗಳನ್ನು ಇತರ ಧರ್ಮಗಳು ಅನುಸರಿಸುವುದು ಹೊಸದೇನಲ್ಲ, ಆದರೆ ಇದೀಗ ಹಿಂದೂ ದೇವಾಲಯಗಳಲ್ಲಿ ತರಲಾದ ಸರ್ಕಾರಿ ಕ್ರಮಗಳನ್ನು ದರ್ಗಾ ಮತ್ತು ಮಸೀದಿಗಳಲ್ಲೂ ತರಲಾಗುವುದು, ಅಂದರೆ ದೇಣಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ದೇವಾಲಯಗಳ ಹುಂಡಿ ಹಣವನ್ನು ಪಡೆಯುತ್ತಿತ್ತು. ಇದೀಗ ಸರ್ಕಾರಿ ದೇಣಿಗೆ ಪಡೆಯಲು ಮುಸ್ಲಿಂ ಸಮುದಾಯಗಳು ಇದೆ ರೀತಿಯ ಕ್ರಮವನ್ನು ಅನುಸರಿಸುತ್ತಿದೆ. ರಾಜ್ಯ ವಕ್ಫ್ ಮಂಡಳಿಗೆ ಸೇರಿದ ದರ್ಗಾ ಮತ್ತು ಮಸೀದಿಗಳಿಗೆ ದೇಣಿಗೆ ನೀಡಲು ಸರ್ಕಾರಿ ಸ್ವಾಮ್ಯದ ದೇವಸ್ಥಾನಗಳ ಮಾದರಿಯಂತೆ ವಿಶೇಷ ಹುಂಡಿ ಆ್ಯಪ್​​ನ್ನು ಅಭಿವೃದ್ಧಿಪಡಿಸಲಾಗಿದೆ. ಮಂಗಳವಾರ (ಜೂನ್​​.28) ನಡೆದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಆ್ಯಪ್​​ನ್ನು ಬಿಡುಗಡೆ ಮಾಡಿದ್ದಾರೆ.

ಇನ್ನು ಮುಂದೆ ದರ್ಗಾ ಮತ್ತು ಮಸೀದಿಗಳಿಗೆ ಸರ್ಕಾರ ದೇಣಿಗೆ ನೀಡಬೇಕಾದರೆ. ಹಿಂದೂ ದೇವಾಲಯಗಳು ಹುಂಡಿಯ ಹಣವನ್ನು ಹೇಗೆ ಸರ್ಕಾರಕ್ಕೆ ನೀಡುತ್ತಿತ್ತು, ಅದೇ ರೀತಿಯಲ್ಲಿ ದರ್ಗಾ ಮತ್ತು ಮಸೀದಿಗಳು ಕೂಡ ನೀಡಬೇಕು ಎಂದು ಹೇಳಲಾಗಿದೆ. ಈ ದೃಷ್ಟಿಯಿಂದ ಆ್ಯಪ್​ವೊಂದನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಆ್ಯಪ್​​ ಮೂಲಕ ಎಷ್ಟು ಮೊತ್ತ, ಯಾವ ಕ್ಷೇತ್ರದಿಂದ ಬಂದಿದೆ ಎಂಬುದನ್ನು ಪತ್ತೆ ಮಾಡುವುದರ ಜತೆಗೆ, ಸರ್ಕಾರ ನೀಡಿದ ದೇಣಿಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ಮತ್ತು ನಿರ್ದಿಷ್ಟ ಉದ್ದೇಶಗಳಿಗೆ ಬಳಸದಂತೆ ನೋಡಿಕೊಳ್ಳಲು ಈ ಆ್ಯಪ್​​ನ್ನು ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ: Fact Check: ‘ಮಸೀದಿಗಳಲ್ಲಿ ಸಂಗ್ರಹವಾದ ಹಣಕ್ಕೆ ತೆರಿಗೆ ಇಲ್ಲ’, ಚೀಲಗಳಲ್ಲಿ ನೋಟು ತುಂಬುತ್ತಿರುವ ವಿಡಿಯೊ ಭಾರತದ್ದಲ್ಲ

ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾದಲ್ಲಿ ಇಹುಂಡಿ ಅಪ್ಲಿಕೇಶನ್​​ನ್ನು ಪ್ರಯೋಗಿಕವಾಗಿ ಅಭಿವೃದ್ಧಿ ಮಾಡಲಾಗಿದೆ, ಇನ್ನು ಮುಂದೆ ಇದು ವಕ್ಫ್ ಬೋರ್ಡ್ ಅಡಿಯಲ್ಲಿ ಬರುವ ಎಲ್ಲಾ 3,131 ದರ್ಗಾಗಳು ಮತ್ತು 10,398 ಮಸೀದಿಗಳನ್ನು ಒಳಗೊಳ್ಳಲಿದೆ. ಜನರು ಈ ಆ್ಯಪ್​​ನ್ನು ಬಳಸಿಕೊಂಡು, ಗೂಗಲ್ ಪೇ ಮುಂತಾದ ಮೊಬೈಲ್ ಆಧಾರಿತ ಪಾವತಿ ವ್ಯವಸ್ಥೆಗಳನ್ನು ಬಳಸಿಕೊಂಡು ಎಲ್ಲಿಂದಲಾದರೂ ದೇಣಿಗೆ ನೀಡಬಹುದು ಎಂದು ಅವರು ಹೇಳಿದರು.

ರಾಜ್ಯಾದ್ಯಂತ ವಕ್ಫ್ ಬೋರ್ಡ್ ಆಸ್ತಿಗಳ ಒತ್ತುವರಿ ಕುರಿತು, ಅಕ್ರಮ ಒತ್ತುವರಿ ತೆರವು ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದು ಹೇಳಿದರು. ಹಲವು ಪ್ರಕರಣಗಳು ನ್ಯಾಯಾಲಯದಲ್ಲಿದ್ದು, ಕೆಲವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಜತೆ ಚರ್ಚೆ ನಡೆಸಲಾಗುವುದು. ಬಜೆಟ್ ನಂತರ ವಕ್ಫ್ ಆಸ್ತಿ ಅದಾಲತ್ ನಡೆಯಲಿದೆ ಎಂದರು. ಇನ್ನೂ ಸರ್ಕಾರಿ ಸಂಸ್ಥೆಗಳು ವಕ್ಫ್​​ ಬೋರ್ಡ್​​ಗೆ ಸಂಬಂಧಿಸಿದ ಸ್ಥಳಗಳನ್ನು ಒತ್ತವರಿ ಮಾಡಿಕೊಂಡಿದ್ದು. ಖಾಸಗಿಯವರು ಕೂಡ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:08 pm, Wed, 28 June 23

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್