ಈದ್ ಮೆರವಣಿಗೆ ವೇಳೆ ಹಿಂದೂಗಳು ದಾಳಿ ಮಾಡಿದ್ರೆ ಏನಾಗುತ್ತೆ ಊಹೆ ಇದೆಯಾ: ಪಂಪ್ ವೆಲ್ ಪ್ರಚೋದನಕಾರಿ ಹೇಳಿಕೆ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹಲವೆಡೆ ಪ್ರತಿಭಟನೆ ಮಾಡಲಾಗುತ್ತಿದೆ. ಇತ್ತ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್​ಪಿ ಧರಣಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ಶರಣ್ ಪಂಪ್ ವೆಲ್, ಈದ್ ಮೆರವಣಿಗೆ ವೇಳೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ಈದ್ ಮೆರವಣಿಗೆ ವೇಳೆ ಹಿಂದೂಗಳು ದಾಳಿ ಮಾಡಿದ್ರೆ ಏನಾಗುತ್ತೆ ಊಹೆ ಇದೆಯಾ: ಪಂಪ್ ವೆಲ್ ಪ್ರಚೋದನಕಾರಿ ಹೇಳಿಕೆ
ಈದ್​ ಮಿಲಾದ್​ ಮೆರವಣಿಗೆ ಅನುಮತಿ ಕೊಡ್ಬಾರದು: ಕೊಟ್ರೆ ಮತ್ತೆ ಗಲಭೆ ಮಾಡ್ತಾರೆ ಎಂದ ಶರಣ್ ಪಂಪ್ ವೆಲ್
Edited By:

Updated on: Sep 12, 2024 | 7:16 PM

ಮಂಗಳೂರು, ಸೆಪ್ಟೆಂಬರ್​​ 12: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಹೆಚ್​ಪಿ ಧರಣಿ ಕೈಗೊಂಡಿದೆ. ಈ ವೇಳೆ ವಿಹೆಚ್​ಪಿ ಮುಖಂಡ ಶರಣ್ ಪಂಪ್ ವೆಲ್ (sharan pumpwell) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈದ್ ಮೆರವಣಿಗೆ ವೇಳೆ ಎಲ್ಲಾ ಹಿಂದೂಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಈದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ. ಆದ್ದರಿಂದ ನಿನ್ನೆಯ ದಾಳಿಕೋರರಿಗೆ ಎಚ್ವರಿಕೆ ಸಂದೇಶ ಕೊಡುತ್ತಿದ್ದೇವೆ. ಸರ್ಕಾರ ಈದ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಈದ್ ನೆಪದಲ್ಲಿ ಕೂಡ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಗಮಂಗಲ ಗಲಭೆ ಪ್ರಕರಣ; ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು-ಸಿದ್ದರಾಮಯ್ಯ

ನಿನ್ನೆಯ ಮಂಡ್ಯ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಕೈವಾಡ ಇದೆ‌. ನಮ್ಮ ಮೆರವಣಿಗೆಗೆ ರಾಜ್ಯ ಸರ್ಕಾರ ಭದ್ರತೆ ನೀಡಲು ಸಿದ್ದವಿಲ್ಲದಿದ್ದರೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಮುಂದಿನ ದಿನಗಳಲ್ಲಿ ಮಿಲಿಟರಿ ಕರೆಸುತ್ತೇವೆ ಎಂದಿದ್ದಾರೆ.

ಈದ್​ ಮಿಲಾದ್​ ಮೆರವಣಿಗೆ ಅನುಮತಿ ಕೊಡ್ಬಾರದು: ಕೊಟ್ರೆ ಮತ್ತೆ ಗಲಭೆ ಮಾಡ್ತಾರೆ

ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ಕೊಡಬಾರದು. ಅನುಮತಿ ಕೊಟ್ಟರೆ ಮತ್ತೆ ಇವರು ಗಲಭೆ ಮಾಡುತ್ತಾರೆ. ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕಿಡಿಕಾರಿದ್ದಾರೆ. ಇದು ಭಯೋತ್ಪಾದಕ ಕೃತ್ಯ. ಗಣೇಶೋತ್ಸವ ನಡೆಸಬಾರದೆಂದು ಪೂರ್ವನಿಯೋಜಿತ ಕೃತ್ಯ. ಇದು ಕೋಮುಗಲಭೆ ಅಲ್ಲ, ಇದು ಗಣೇಶೋತ್ಸವ ಸಮಿತಿಯ ಮೇಲೆ ನಡೆದಿರುವ ದಾಳಿ. ಇಸ್ಲಾಮಿಕ್ ಭಯೋತ್ಪಾದಕರಿಂದ ಹಿಂದೂಗಳ ಮೇಲೆ ದಾಳಿ ಎಂದು ಶರಣ್ ಪಂಪ್ ವೆಲ್ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ: ಸಚಿವ ಜಮೀರ್ ಹೇಳಿದ್ದೇನು?

ಗೃಹ ಸಚಿವರು ಆಕಸ್ಮಿಕ ಘಟನೆ ಅಂತಾ ಹೇಳಿದ್ದಾರೆ. ನಿಮ್ಮ ಇಲಾಖೆಯ ಪೊಲೀಸರ ಮೇಲೆ ಹಲ್ಲೆ ಆಗಿ ಗಾಯಗೊಂಡಿದ್ದಾರೆ. ಇದು ನಿಮಗೆ ಸಣ್ಣ ಘಟನೆನಾ ಎಂದು ಪ್ರಶ್ನಿಸಿದ್ದಾರೆ. ಡಿ.ಜೆ.ಹಳ್ಳಿ, ಕೆಜೆ ಹಳ್ಳಿ, ಮಂಗಳೂರಿನ ಡಿ.ಸಿ.ಕಚೇರಿ, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಗಳ ನಂತರವೂ ಎಚ್ಚೆತ್ತುಕೊಂಡಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:21 pm, Thu, 12 September 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us