AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಗೌರಿಬಿದನೂರು ತಾಲೂಕು ಆಸ್ಪತ್ರೆ, ಚಿಕ್ಕಬಳ್ಳಾಪುರದ ಖಾಸಗಿ ಜೀವನ್ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಕೊರೊನಾ ವರದಿ ತಂದರೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಕೊವಿಡ್ ವರದಿ ನೆಗಟಿವ್ ಬಂದಿತ್ತು.

ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು
ಮೃತ ಗರ್ಭಿಣಿ ರಮ್ಯಾ
TV9 Web
| Edited By: sandhya thejappa|

Updated on:Jun 02, 2021 | 10:41 AM

Share

ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ 8 ತಿಂಗಳ ತುಂಬು ಗರ್ಭಿಣಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುಲಿಕುಂಟೆ ಗ್ರಾಮದ ರಮ್ಯಾ ಮೃತ ದುರ್ಧೈವಿ. 22 ವರ್ಷದ ರಮ್ಯಾ ಸಾಮಾನ್ಯ ಕೆಮ್ಮು ಹಾಗೂ ಸಾಮಾನ್ಯ ಗರ್ಭಿಣಿ ಚೆಕ್ ಅಪ್ಗಾಗಿ ಪರದಾಡಿ ಕೊನೆಯುಸಿರೆಳೆದಿದ್ದಾರೆ.

ಗೌರಿಬಿದನೂರು ತಾಲೂಕು ಆಸ್ಪತ್ರೆ, ಚಿಕ್ಕಬಳ್ಳಾಪುರದ ಖಾಸಗಿ ಜೀವನ್ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋಗಿದ್ದರು. ಕೊರೊನಾ ವರದಿ ತಂದರೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಕೊವಿಡ್ ವರದಿ ನೆಗಟಿವ್ ಬಂದಿತ್ತು. ಗೌರಿಬಿದನೂರಿನಿಂದ ಮತ್ತೆ ವಾಣಿವಿಲಾಸ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾಗಿ ಕೆಲವೆ ನಿಮಿಷಗಳಲ್ಲಿ ರಮ್ಯಾ ಮೃತಪಟ್ಟಿದ್ದಾರೆ. ವೈದ್ಯರು ನಿರ್ಲಕ್ಷ್ಯದಿಂದ ಪತ್ನಿ ಸಾವನ್ನಪ್ಪಿದ್ದಾರೆ ಎಂದು ಪತಿ ವಿಜಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಸಂಪೂರ್ಣ ಲಾಕ್​ಡೌನ್​ ನಾಳೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಸಂಪೂರ್ಣ ಲಾಕ್​ಡೌನ್​ ಆಗುತ್ತಿರುವ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. 10 ಗಂಟೆಯ ವರೆಗೆ ಅವಕಾಶ ಇರುವುದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಜನರ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ. ಈ ನಡುವೆ ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಮಂಡ್ಯದಲ್ಲಿ ಫಂಗಸ್​ಗೆ ಮೊದಲ ಬಲಿ ಮಂಡ್ಯ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್​ಗೆ ಓರ್ವ ವೃದ್ಧ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. 68 ವರ್ಷದ ವೃದ್ಧ ಮಂಡ್ಯದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ನಾಲ್ವರಿಗೆ ಬ್ಲ್ಯಾಕ್ ಫಂಗಸ್ ದೃಢಪಟ್ಟಿತ್ತು. ಇದರಲ್ಲಿ ಇದೀಗ ಒಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ

 ಸೇವಾ ಸಿಂಧು ಪೋರ್ಟಲ್​ನಲ್ಲಿ ತಾಂತ್ರಿಕ ದೋಷಗಳು: ಯಾರಿಗೆ ಹೇಳೋಣ ನಮ್ಮ ಪ್ರಾಬ್ಲಮು ಅಂತಿದ್ದಾರೆ ಚಾಲಕರು

ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಕನಿಷ್ಠ 594 ಭಾರತೀಯ ವೈದ್ಯರು ಮೃತಪಟ್ಟಿದ್ದಾರೆ: ಐಎಂಎ ವರದಿ

(eight months pregnant lady died Not getting timely treatment in Chikkaballapur hospitals)

Published On - 10:36 am, Wed, 2 June 21

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ