AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್

ಬಾಲಕಿಯರ ಬಾಲ ಮಂದಿರದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಬಾಲ ಮಂದಿರವನ್ನು ಮೈಕ್ರೋಜೋನ್ ಮಾಡಲಾಗಿದ್ದು, ಉಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್
ಕೊರೊನಾ ಪರೀಕ್ಷೆ (ಪ್ರಾತಿನಿಧಿಕ ಚಿತ್ರ)
Follow us
ರಶ್ಮಿ ಕಲ್ಲಕಟ್ಟ
|

Updated on:Apr 27, 2021 | 7:59 PM

ವಿಜಯಪುರ: ವಿಜಯಪುರದಲ್ಲಿರುವ ಜಿಲ್ಲಾ ಬಾಲಕಿಯರ ಬಾಲ ಮಂದಿರದ 8 ವಿದ್ಯಾರ್ಥಿನಿಯರಿಗೆ ಕೊವಿಡ್ ದೃಢಪಟ್ಟಿದೆ. ಸೋಂಕಿತ 8 ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಾಲಮಂದಿರದ ಅಧೀಕ್ಷಕಿ ವಿ.ಜಿ ಮಾನೆ ಹೇಳಿದ್ದಾರೆ . ಈ ಬಾಲಮಂದಿರದಲ್ಲಿ ಒಟ್ಟು 42 ಜನ‌ ವಿದ್ಯಾರ್ಥಿನಿಯರಿದ್ದು, ಅದರಲ್ಲಿ 10 ಜನರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರಿಗೆ ಕೊವಿಡ್ ನೆಗೆಟಿವ್ ವರದಿ ಬಂದಿದ್ದು , 8 ವಿದ್ಯಾರ್ಥಿಗಳಿಗೆ ಕೊವಿಡ್ ದೃಢಪಟ್ಟಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ ಮಾನೆ.

ಬಾಲಕಿಯರ ಬಾಲ ಮಂದಿರದಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆಯಲ್ಲಿ ಬಾಲ ಮಂದಿರವನ್ನು ಮೈಕ್ರೋಜೋನ್ ಮಾಡಲಾಗಿದ್ದು, ಉಸ್ತುವಾರಿಗಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹಾಸ್ಟೆಲ್ ಗಳಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಕೊವಿಡ್ ನಿಯಮಗಳ ಪಾಲನೆಗಾಗಿ ತಂಡ ರಚನೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಸುನೀಲಕುಮಾರ್ ಹೇಳಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಹಾಸಿಗೆ ಸಂಖ್ಯೆ ಏರಿಕೆ

ರೊನಾ ಎರಡನೇ ಅಲೆಗೆ ತುತ್ತಾಗಿರುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸಲು ಹಾಸಿಗೆಗಳ ಸಂಖ್ಯೆ ಹೆಚ್ಚಿಸಿ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ತೀವ್ರ ಕಡಿತಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿರ್ಣಯವನ್ನು ಬಿಎಲ್​ಡಿಇ ಸಂಸ್ಥೆ ಕೈಗೊಂಡಿದೆ.

ಕೊರೊನಾ ಹೆಚ್ಚುತ್ತಿದ್ದು ಆಸ್ಪತ್ರೆಗಳಲ್ಲಿ ಬೆಡ್‍ಗಳು ದೊರಕುತ್ತಿಲ್ಲ, ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿಲ್ಲ ಎಂಬ ವ್ಯಾಪಕ ಕೂಗು ವಿಜಯಪುರ ಜಿಲ್ಲೆಯಲ್ಲಿ ಕೇಳಿಬರುತ್ತಿತ್ತು. ಬಿಎಲ್ಡಿಇ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಂ.ಬಿ ಪಾಟೀಲ್ ಆಸ್ಪತ್ರೆಯ ಹಿರಿಯ ವೈದ್ಯರ ಜೊತೆಗೆ ತುರ್ತು ಸಭೆ ನಡೆಸಿದರು.

ಬಿಎಲ್ಡಿಇ ಆಸ್ಪತ್ರೆಯಲ್ಲಿ 250 ಬೆಡ್‍ಗಳಿಗೆ ಮೀಸಲಾಗಿದ್ದ ಕೊರೊನಾ ಹಾಸಿಗೆಗಳ ಸಂಖ್ಯೆಯನ್ನು 500ಕ್ಕೆ ವಿಸ್ತರಣೆ ಮಾಡಲಾಗಿದ್ದು, ಇದರಲ್ಲಿ ಜನರಲ್ ವಾರ್ಡನಲ್ಲಿ 200, ಐ.ಸಿ.ಯು ನಲ್ಲಿ 50, ಮತ್ತು ಸ್ಪೆಷಲ್ ರೂಂಗಳಲ್ಲಿ 50. ಒಟ್ಟು 300 ಆಕ್ಸಿಜನ್ ಬೆಡ್‍ಗಳು ಲಭ್ಯವಿದೆ. ಅಲ್ಲದೇ 200 ಐಸೊಲೇಶನ್ ಬೆಡ್‍ಗಳು ಸೋಂಕಿತರಿಗೆ ಒದಗಿಸಲಾಗುತ್ತಿದೆ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಅಲ್ಲದೇ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ನಿಗದಿಪಡಿಸಿದ ಚಿಕಿತ್ಸಾ ದರಕ್ಕಿಂತಲೂ ಬಿಎಲ್ಡಿಇ ಆಸ್ಪತ್ರೆಯಲ್ಲಿ ಶೇ 70 ಕಡಿಮೆ ಶುಲ್ಕವನ್ನು ಕಳೆದ 2 ತಿಂಗಳಿಂದಲೂ ಪಡೆಯಲಾಗುತ್ತಿದೆ. ಇದೀಗ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ, ಬಡವರಿಗೆ, ಜನಸಾಮಾನ್ಯರಿಗೆ ಅನಕೂಲವಾಗಲಿ ಎಂಬ ಕಾರಣದಿಂದ ರಿಯಾಯಿತಿ ಶುಲ್ಕವನ್ನು ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಎಂ.ಬಿ ಪಾಟೀಲ ಹೇಳಿದ್ದಾರೆ.

ರಾಜ್ಯ ಸರ್ಕಾರ ಜನರಲ್ ವಾರ್ಡ್‍ಗಳಲ್ಲಿ ಆಕ್ಸಿಜನ್ ರಹಿತ ಬೆಡ್‍ಗೆ ರೂಪಾಯಿ 10 ಸಾವಿರ ನಿಗದಿಪಡಿಸಿದ್ದಾರೆ ಬಿಎಲ್ಡಿಇಯಲ್ಲಿ 3 ಸಾವಿರ, ಆಕ್ಸಿಜನ್ ಸಹಿತ ಬೆಡ್‍ಗೆ ಸರ್ಕಾರ ನಿಗದಿಪಡಿಸಿದ ರೂ 12 ಸಾವಿರ ಬದಲಾಗಿ ಇಲ್ಲಿ ರೂ 5 ಸಾವಿರ ಹಾಗೂ ಐ.ಸಿ.ಯುನಲ್ಲಿ ವೆಂಟಿಲೆಟರ್ ಗೆ ರೂ 25 ಸಾವಿರ ನಿಗದಿತ ವೆಚ್ಚದ ಬದಲಾಗಿ ರೂ 8ಸಾವಿರ ಮಾತ್ರ ಪಡೆಯಲಾಗುತ್ತಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಿಡಿಲು ಬಡಿದು ಮಹಿಳೆ ಸಾವು; ವಿಜಯಪುರ ಜಿಲ್ಲೆಯಲ್ಲಿ ನಡೆದ ಘಟನೆ

ವಿಜಯಪುರ: ಕೊರೊನಾ ಸಂಕಷ್ಟದಲ್ಲಿ ಬಿಎಲ್​ಡಿಇ ಆಸ್ಪತ್ರೆಯಲ್ಲಿ ಹಾಸಿಗೆ ಸಂಖ್ಯೆ ಏರಿಕೆ, ಚಿಕಿತ್ಸಾ ಶುಲ್ಕ ಇಳಿಕೆ

Published On - 3:39 pm, Tue, 27 April 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?