AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಂತರೂ.. ಕುಂತರೂ ಆತಂಕ, ನರಗುಂದದಲ್ಲಿ ಕಂಡ ಕಂಡಲ್ಲಿ ಕುಸಿಯುತ್ತಿದೆ ಭೂಮಿ

ಗದಗ: ನಿಂತ ನೆಲವೇ ಕುಸಿದುಬೀಳುತ್ತಿದೆ. ಏಕಾಏಕಿ ಸಂಭವಿಸುತ್ತಿರುವ ದುರಂತದ ಪರಿಣಾಮ ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅದ್ರಲ್ಲೂ ಒಬ್ಬ ಯುವಕ ಕೂದಲೆಳೆ ಅಂತರದಲ್ಲಿ ಜೀವ ಉಳಿಸಿಕೊಂಡಿದ್ದು, ಜನ ಊರು ತೊರೆಯುವಂತಾ ಪರಿಸ್ಥಿತಿ ಗದಗದಲ್ಲಿ ನಿರ್ಮಾಣವಾಗಿದೆ. ಕಂಡ ಕಂಡಲ್ಲಿ ಕುಸಿಯುತ್ತಿದೆ ಭೂಮಿ..! ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 8 ಬಾರಿ ಭೂಕುಸಿತವಾಗಿದ್ದು, ನರಗುಂದದ ಜನ ಬೆಚ್ಚಿಬಿದ್ದಿದ್ದಾರೆ. ಪಟ್ಟಣದ 3 ಓಣಿಯ ಜನರಿಗೆ ಭೂಕಂಟಕ ಶುರುವಾಗಿದೆ. ಸತತ ಭೂಕುಸಿತದಿಂದ ಜನ ಆತಂಕದಲ್ಲಿ ಬದುಕುತ್ತಿದ್ದಾರೆ. ಹೀಗಾಗಿ, ನಿಂತರೂ ಕಂಟಕ, […]

ನಿಂತರೂ.. ಕುಂತರೂ ಆತಂಕ, ನರಗುಂದದಲ್ಲಿ ಕಂಡ ಕಂಡಲ್ಲಿ ಕುಸಿಯುತ್ತಿದೆ ಭೂಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 6:47 AM

Share

ಗದಗ: ನಿಂತ ನೆಲವೇ ಕುಸಿದುಬೀಳುತ್ತಿದೆ. ಏಕಾಏಕಿ ಸಂಭವಿಸುತ್ತಿರುವ ದುರಂತದ ಪರಿಣಾಮ ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅದ್ರಲ್ಲೂ ಒಬ್ಬ ಯುವಕ ಕೂದಲೆಳೆ ಅಂತರದಲ್ಲಿ ಜೀವ ಉಳಿಸಿಕೊಂಡಿದ್ದು, ಜನ ಊರು ತೊರೆಯುವಂತಾ ಪರಿಸ್ಥಿತಿ ಗದಗದಲ್ಲಿ ನಿರ್ಮಾಣವಾಗಿದೆ.

ಕಂಡ ಕಂಡಲ್ಲಿ ಕುಸಿಯುತ್ತಿದೆ ಭೂಮಿ..! ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ಒಂದೇ ತಿಂಗಳಲ್ಲಿ ಬರೋಬ್ಬರಿ 8 ಬಾರಿ ಭೂಕುಸಿತವಾಗಿದ್ದು, ನರಗುಂದದ ಜನ ಬೆಚ್ಚಿಬಿದ್ದಿದ್ದಾರೆ. ಪಟ್ಟಣದ 3 ಓಣಿಯ ಜನರಿಗೆ ಭೂಕಂಟಕ ಶುರುವಾಗಿದೆ. ಸತತ ಭೂಕುಸಿತದಿಂದ ಜನ ಆತಂಕದಲ್ಲಿ ಬದುಕುತ್ತಿದ್ದಾರೆ. ಹೀಗಾಗಿ, ನಿಂತರೂ ಕಂಟಕ, ಕುಂತರೂ ಆತಂಕ ಅನ್ನುವಂತಾಗಿದೆ.

ಒಂದೇ ತಿಂಗಳಲ್ಲಿ 8 ಬಾರಿ ಭೂಮಿ ಬಾಯಿಬಿಟ್ಟಿದ್ದರೂ ಪ್ರಕೃತಿಗೆ ಸಮಾಧಾನವಾಗಿಲ್ಲ. ಈಗಲೂ ನಿಂತ ನೆಲ ಕುಸಿಯುತ್ತಲೇ ಇದೆ. ಹೀಗೆ ಮತ್ತೆ ನೆಲ ಕುಸಿದಿದ್ದು, ನಬೀಸಾಬ್ ಮೊಕಾಶಿ ಎಂಬುವವರ ಮನೆಯಲ್ಲಿ ದುರಂತ ನಡೆದಿದೆ. ಆದ್ರೆ, ಅದೃಷ್ಟವಶಾತ್ ಅಲ್ಲೇ ಇದ್ದ ನಬೀಸಾಬ್ ಪುತ್ರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನರಗುಂದ ಪಟ್ಟಣದ ಕಸಬಾ, ಅರ್ಭಾಣ ಸೇರಿ ಹಲವು ಓಣಿಗಳಲ್ಲಿ ಭೂಮಿ ಕುಸಿಯುತ್ತಿದೆ. ಮಾತ್ರವಲ್ಲ ಮನೆಗಳ ಗೋಡೆ ಬಿರುಕು ಬಿಡುತ್ತಿದೆ. ಗಣಿ ಇಲಾಖೆ ಅಧಿಕಾರಿಗಳು ಅಧ್ಯಯನ ಮಾಡಿದ್ದರೂ, ನಿಖರ ಕಾರಣ ಮಾತ್ರ ಹೇಳುತ್ತಿಲ್ಲ. ಪ್ರಕರಣ ಗಂಭೀರವಾಗಿ ಪರಿಗಣಿಸಿ ಮಣ್ಣು ಪರೀಕ್ಷೆ ಮಾಡಬೇಕು. ಪದೇ ಪದೆ ಭೂ ಕುಸಿತವಾಗಲು ಕಾರಣ ತಿಳಿಸಬೇಕು ಅಂತಾ ಜನ ಒತ್ತಾಯಿಸುತ್ತಿದ್ದಾರೆ.

Published On - 6:45 am, Thu, 21 November 19

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ