AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನಕ್ಕೂ ಒಂದು ವಿವಿ: ಉಳಿದವು ಎಲ್ಲೆಲ್ಲಿ?

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ - ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ

ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನಕ್ಕೂ ಒಂದು ವಿವಿ: ಉಳಿದವು ಎಲ್ಲೆಲ್ಲಿ?
ರಾಜ್ಯದಲ್ಲಿ 8 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಹಸಿರು ನಿಶಾನೆ, ಹಾಸನದಲ್ಲೂ ವಿವಿ ಸ್ಥಾಪನೆ: ಉಳಿದವು ಎಲ್ಲೆಲ್ಲಿ?
TV9 Web
| Edited By: ಸಾಧು ಶ್ರೀನಾಥ್​|

Updated on: Aug 25, 2022 | 2:56 PM

Share

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ‘ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ (higher education minister Dr cn Ashwathnarayan) ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದಿದ್ದಾರೆ.

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18, ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140, ಕೊಡಗು 24, ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು ಬರಲಿವೆ ಎಂದು ಅವರು ವಿವರಿಸಿದರು.

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿ.ವಿ.ಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ಹೇಳಿದರು.

ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್