AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 18 ಜನರಿಗೆ ಸೋಂಕು, ವಲಸಿಗರಿಂದಲೇ ಕೊರೊನಾ ಹರಡುತ್ತಿದೆ ಎಂಬ ಶಂಕೆ ವ್ಯಕ್ತಪಡಿಸಿದ ತಹಶೀಲ್ದಾರ್

ಮೃತನ ಮನೆಗೆ ಸಾಂತ್ವನ ಹೇಳಲು ಬಂದಿದ್ದ ಸಂಬಂಧಿಕರು, ಬಳಿಕ ಮೃತನ ಕುಟುಂಬಸ್ಥರು ಸೇರಿ 18 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಂಕ್ರಪ್ಪ ಗೌಡರ(48) ಮೇ 5 ರಂದು ಮೃತಪಟ್ಟಿದ್ದ ವ್ಯಕ್ತಿ. ಇವರು ಕೊವಿಡ್ ಶಂಕೆ ಹಿನ್ನೆಲೆಯಲ್ಲಿ ಕೊರೊನಾ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿತ್ತು. ಮೃತಪಟ್ಟ ನಂತರ ಸಂಬಂಧಿಕರು ಕುಟುಂಬಸ್ಥರಿಗೆ ಸಾಂತ್ವನ ಹೇಳೋಕೆ ಬಂದಿದ್ದರು...

ವ್ಯಕ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 18 ಜನರಿಗೆ ಸೋಂಕು, ವಲಸಿಗರಿಂದಲೇ ಕೊರೊನಾ ಹರಡುತ್ತಿದೆ ಎಂಬ ಶಂಕೆ ವ್ಯಕ್ತಪಡಿಸಿದ ತಹಶೀಲ್ದಾರ್
ಕೊರೊನಾ ಟೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: May 17, 2021 | 11:07 AM

Share

ಬಾಗಲಕೋಟೆ: ವ್ಯಕ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 18 ಜನರಿಗೆ ಕೊರೊನಾ ಸೋಂಕು ತಗುಲಿದೆ. ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ರೈಲ್ವೆ ಸ್ಟೇಷನ್ ಗ್ರಾಮದಲ್ಲಿ ಮೇ 5ರಂದು ವ್ಯಕ್ತಿ ಮೃತಪಟ್ಟಿದ್ದರು. ಕೊವಿಡ್ ಶಂಕೆ ಹಿನ್ನೆಲೆ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಆದರೆ ಈಗ ವ್ಯಕ್ತಿ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 18 ಜನರಿಗೆ ಕೊರೊನಾ ತಗುಲಿದೆ.

ಮೃತನ ಮನೆಗೆ ಸಾಂತ್ವನ ಹೇಳಲು ಬಂದಿದ್ದ ಸಂಬಂಧಿಕರು, ಬಳಿಕ ಮೃತನ ಕುಟುಂಬಸ್ಥರು ಸೇರಿ 18 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಂಕ್ರಪ್ಪ ಗೌಡರ(48) ಮೇ 5 ರಂದು ಮೃತಪಟ್ಟಿದ್ದ ವ್ಯಕ್ತಿ. ಇವರು ಕೊವಿಡ್ ಶಂಕೆ ಹಿನ್ನೆಲೆಯಲ್ಲಿ ಕೊರೊನಾ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರ ಮಾಡಲಾಗಿತ್ತು. ಮೃತಪಟ್ಟ ನಂತರ ಸಂಬಂಧಿಕರು ಕುಟುಂಬಸ್ಥರಿಗೆ ಸಾಂತ್ವನ ಹೇಳೋಕೆ ಬಂದಿದ್ದರು. ಈ ವೇಳೆ ಆರೋಗ್ಯ ಇಲಾಖೆ ಇವರನ್ನು ತಪಾಸಣೆಗೆ ಒಳಪಡಿಸಿದೆ. ತಪಾಸಣೆ ವೇಳೆ ಮೃತನ ಕುಟುಂಬದ 10 ಜನ, ಸಾಂತ್ವನ ಹೇಳೋಕೆ ಬಂದ 8 ಜನ ಸಂಬಂಧಿಕರಿಗೆ ಕೊವಿಡ್ ಇರುವುದು ದೃಢಪಟ್ಟಿದೆ.

ಸದ್ಯ ಮೃತನ ಕುಟುಂಬಸ್ಥರು ಹೋಮ್ ಕ್ವಾರಂಟೈನ್ ಆಗಿದ್ದು, ಸಾಂತ್ವನ ಹೇಳೋಕೆ‌ ಬಂದ ಸಂಬಂಧಿಕರಿಗೆ ಹೋಮ್‌ ಐಸೊಲೇಶನ್ ಇರೋಕೆ ಸೂಚಿಸಿದ್ದಾರೆ. ಗುಳೇದಗುಡ್ಡ ರೈಲ್ವೆ ಸ್ಟೇಷನ್ ವ್ಯಾಪ್ತಿ ಪ್ರದೇಶಕ್ಕೆ ತಹಶೀಲ್ದಾರ್ ಜಿಎಮ್‌ ಕುಲಕರ್ಣಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಳೇದಗುಡ್ಡ ರೈಲ್ವೆ ಸ್ಟೇಷನ್ ಮೂಲಕ ವಲಸಿಗರು ಬಂದಿದ್ದಾರೆ. ವಲಸಿಗರಿಂದಲೇ ಕೊವಿಡ್ ಹರಡಿರುವ ಶಂಕೆ ಇದೆ ಎಂದು ತಹಶೀಲ್ದಾರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡಲು ವೈದ್ಯರ ಹಿಂದೇಟು; ವಿಜಯಪುರ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆರೋಪ

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ