AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕ್ಲೋನ್ ಅಬ್ಬರಕ್ಕೆ ಸಿಕ್ಕಿ ಸಾವನ್ನೆ ಗೆದ್ದು ಬಂದ ಕಾರವಾರ ವೃದ್ಧ

ವೃದ್ಧನೋರ್ವ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗಿ ಮೂರು ದಿನದಿಂದ ಗಿಡ ಹಿಡಿದುಕೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಆದರೆ ಕೊನೆಗೂ ಸಾವನ್ನೆ ಗೆದ್ದು ಬಂದಿದ್ದಾರೆ. ಈ ಘಟನೆ ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ.

ಸೈಕ್ಲೋನ್ ಅಬ್ಬರಕ್ಕೆ ಸಿಕ್ಕಿ ಸಾವನ್ನೆ ಗೆದ್ದು ಬಂದ ಕಾರವಾರ ವೃದ್ಧ
ಸಾವನ್ನು ಗೆದ್ದು ಬಂದ ಅಜ್ಜ
sandhya thejappa
sandhya thejappa|

Updated on: May 20, 2021 | 2:40 PM

Share

ಕಾರವಾರ: ತೌಕ್ತೆ ಸೈಕ್ಲೋನ್​ನಿಂದ ರಾಜ್ಯದ ಹಲವು ಕಡೆ 4-5 ದಿನಗಳ ಹಿಂದೆ ಮಳೆ ಅಬ್ಬರ ಜೋರಾಗಿತ್ತು. ಕರಾವಳಿ ಭಾಗದಲ್ಲಿ ವಾಸಿಸುವ ಜನರು ಜೀವವನ್ನು ಕೈಯಲ್ಲಿ ಹಿಡಿದು ಕೂತ್ತಿದ್ದರು. ಸಮುದ್ರದ ಅಲೆಗಳು ಜೋರಾಗಿ ಬಂದು ಅಪ್ಪಳಿಸುತ್ತಿದ್ದ ವೇಗಕ್ಕೆ ಅಲ್ಲಿ ವಾಸಿಸುವ ಜನರನ್ನು ಸ್ಥಳಾಂತರ ಮಾಡಲಾಗಿತ್ತು. ಕೆಲವು ಕಡೆ ಜಲಾವೃತವೂ ಅಗಿತ್ತು. ಈ ಎಲ್ಲಾ ಅವಾಂತರದ ನಡುವೆ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧರೊಬ್ಬರು ಮೂರು ದಿನದ ಬಳಿಕ ಬದುಕಿ ಬಂದಿದ್ದಾರೆ.

ವೃದ್ಧನೋರ್ವ ನದಿಯ ಹಿನ್ನೀರಿನಲ್ಲಿ ಕೊಚ್ಚಿ ಹೋಗಿ ಮೂರು ದಿನದಿಂದ ಗಿಡ ಹಿಡಿದುಕೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಆದರೆ ಕೊನೆಗೂ ಸಾವನ್ನೆ ಗೆದ್ದು ಬಂದಿದ್ದಾರೆ. ಈ ಘಟನೆ ಕಾರವಾರ ತಾಲೂಕಿನ ಹಣಕೋಣದಲ್ಲಿ ನಡೆದಿದೆ. ವೆಂಕಟರಾಯ್ ಕೋಠಾರಕರ್ ಮೇ 16 ರ ಸಂಜೆ ಕೋಣವನ್ನು ಹುಡುಕಿಕೊಂಡು ಬರುವುದಾಗಿ ತೌಕ್ತೆ ಚಂಡಮಾರುತ ಅಬ್ಬರಿಸುತ್ತಿದ್ದ ವೇಳೆಗೆ ತೆರಳಿದ್ದರು. ಆದರೆ ತಂದೆ ಸಂಜೆಯಾದರು ಮನೆಗೆ ಬಾರದೆ ಇದ್ದಾಗ ಎಲ್ಲೆಡೆ ಹುಡುಕಾಡಿದ್ದಾರೆ.

ಕೊನೆಗೆ ಊರಿನವರಿಗೂ ವಿಷಯ ತಿಳಿಸಿದ್ದು, ಎಲ್ಲರೂ ಗಾಬರಿಗೊಂಡು ಎರಡು ದಿನ ಹುಡುಕಿದ್ದಾರೆ. ಆದರೆ ಎಲ್ಲಿಯೂ ಸಿಗದೆ ಇದ್ದಾಗ ಹಳ್ಳ, ಬಾವಿ ಎಲ್ಲೆಡೆ ಹುಡುಕಾಡಿದರು. ಕೊನೆಗೆ ಕಾಳಿ ನದಿ ತೀರದುದ್ದಕ್ಕೂ ಹುಡುಕುತ್ತಿದ್ದಾಗ ನದಿಯ ಹಿನ್ನೀರಿನಲ್ಲಿ ಮುಳುಗಿಕೊಂಡು ಸಣ್ಣದೊಂದು ಗಿಡ ಹಿಡಿದುಕೊಂಡು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವುದು ಗೊತ್ತಾಗಿದೆ. ತಕ್ಷಣ ಊರಿನ ಕೆಲವರು ನದಿಗೆ ಇಳಿದು ಆತನನ್ನು ರಕ್ಷಣೆ ಮಾಡಿ ಮನೆಗೆ ಕರೆತಂದು ಆರೈಕೆ ಮಾಡಲಾಗಿದೆ. ಮೂರು ದಿನ ನೀರಿನಲ್ಲಿದ್ದ ಕಾರಣ ಅಸ್ವಸ್ಥರಾದ ಸ್ಥಿತಿಯಲ್ಲಿದ್ದಾರೆ ಎಂದು ಊರಿನ ಮಂದಿ ತಿಳಿಸಿದರು.

ಇದನ್ನೂ ಓದಿ

ಆಕ್ಸಿಜನ್ ಪ್ಲಾಂಟ್ ಸ್ಥಾಪನೆಗೆ ಕರ್ನಾಟಕದಲ್ಲಿ ಎದುರಾಗಿದೆ ತಜ್ಞರ ಕೊರತೆ: ಸಚಿವ ಜಗದೀಶ್ ಶೆಟ್ಟರ್ ಕಳವಳ

ಕೊವಿಡ್ ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳಿ, ಪ್ರತಿಯೊಂದು ಜೀವವನ್ನು ಕಾಪಾಡಲು ನಾವು ಬದ್ಧ: ನರೇಂದ್ರ ಮೋದಿ

(Elderly man stayed in backwaters for three days at Uttara Kannada)

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು