AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಬಹಿಷ್ಕಾರ ಹೋರಾಟ: ಕೆಂಚಿಕೊಪ್ಪ ಗ್ರಾಮಸ್ಥರಿಂದ ದಾಖಲೆ ಪತ್ರ ಮಾಡಿಸಿಕೊಡುವಂತೆ ಒತ್ತಾಯ

ಭದ್ರಾ ಡ್ಯಾಂಗೆ ಭೂಮಿ ನೀಡಿದ್ದಕ್ಕೆ ಗ್ರಾಮಗಳು ಮುಳುಗಡೆಯಾಗಿವೆ. ಪ್ರತಿ ಚುನಾವಣೆ ವೇಳೆ ಚಿಕ್ಕಮಗಳೂರು ಜಿಲ್ಲಾಡಳಿತ ಭರವಸೆ ಕೊಟ್ಟು ಸುಮ್ಮನಾಗುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಬಹಿಷ್ಕಾರ ಹೋರಾಟ: ಕೆಂಚಿಕೊಪ್ಪ ಗ್ರಾಮಸ್ಥರಿಂದ ದಾಖಲೆ ಪತ್ರ ಮಾಡಿಸಿಕೊಡುವಂತೆ ಒತ್ತಾಯ
ಇಂದಿನಿಂದ 4 ದಿನಗಳ ಕಾಲ ಚುನಾವಣಾ ಬಹಿಷ್ಕಾರ ಹೋರಾಟ
preethi shettigar
| Edited By: ಸಾಧು ಶ್ರೀನಾಥ್​|

Updated on: Mar 16, 2021 | 12:33 PM

Share

ಚಿಕ್ಕಮಗಳೂರು: ಇಂದಿನಿಂದ 4 ದಿನಗಳ ಕಾಲ ಚುನಾವಣಾ ಬಹಿಷ್ಕಾರ ಹೋರಾಟ ನಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಂಚಿಕೊಪ್ಪ ಪಂಚಾಯತಿಯ ಕೆಂಚಿಕೊಪ್ಪ, ದೊಡ್ಡಕುಂದೂರು, ಮಾಳಿಕೊಪ್ಪ, ಮಠದಹಳ್ಳಿ, ಮಂಡರವಳ್ಳಿಯ ಗ್ರಾಮಸ್ಥರಿಂದ ಬಹಿಷ್ಕಾರದ ಹೋರಾಟ ನಡೆಯುತ್ತಿದ್ದು, ಕೆಂಚಿಕೊಪ್ಪ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರಕ್ಕೆ ಹೋರಾಟಕ್ಕೆ ಮುಂದಾಗಿದ್ದಾರೆ.

ಜನರ ಸಮಸ್ಯೆಗೆ ಸ್ಪಂದಿಸದ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದು, ಮನೆ, ಜಮೀನು ದಾಖಲೆ ಪತ್ರ ಮಾಡಿಸಿಕೊಡುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಆದರೆ ಈ ಗ್ರಾಮಗಳು ಇ-ಸ್ವತ್ತು ವ್ಯಾಪ್ತಿಗೆ ಬರುವುದಿಲ್ಲ ಎಂದು ಅಧಿಕಾರಿಗಳು ಹಿಂಬರಹ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮನೆ, ಜಮೀನುಗಳ ದಾಖಲೆಗಾಗಿ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧಾರ ಮಾಡಿದ್ದಾರೆ.

2020ರ ಡಿಸೆಂಬರ್​ನಲ್ಲಿ ನಡೆದ ಚುನಾವಣೆಯನ್ನೂ ಕೂಡ ಈ ಭಾಗದ ಜನರು ಬಹಿಷ್ಕರಿಸಿದ್ದರು. ಭದ್ರಾ ಡ್ಯಾಂಗೆ ಭೂಮಿ ನೀಡಿದ್ದಕ್ಕೆ ಗ್ರಾಮಗಳು ಮುಳುಗಡೆಯಾಗಿವೆ. ಪ್ರತಿ ಚುನಾವಣೆ ವೇಳೆ ಚಿಕ್ಕಮಗಳೂರು ಜಿಲ್ಲಾಡಳಿತ ಭರವಸೆ ಕೊಟ್ಟು ಸುಮ್ಮನಾಗುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತದ ಕ್ರಮಕ್ಕೆ ಬೇಸರಗೊಂಡ ಗ್ರಾಮಸ್ಥರು ಸಭೆ ನಡೆಸಿ ಚುನಾವಣೆ ಬಹಿಷ್ಕರಿಸಲು ತೀರ್ಮಾನ ಮಾಡಿದ್ದಾರೆ.

boycott election

ಕೆಂಚಿಕೊಪ್ಪ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರಕ್ಕೆ ಹೋರಾಟ

ಮಾರ್ಚ್ 29 ರ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧಾರ: ತರೀಕೆರೆ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿವೆ. ಮನೆ, ಜಮೀನು ದಾಖಲೆ ಪತ್ರ ಮಾಡಿಸಿಕೊಳ್ಳಲು ಗ್ರಾಮಸ್ಥರು ಹಲವು ದಶಕಗಳಿಂದ ಹೋರಾಟ ಮಾಡುತ್ತಿದ್ದು. ಪ್ರತಿ ಚುನಾವಣೆ ವೇಳೆ ಜಿಲ್ಲಾಡಳಿತ ಭರವಸೆ ಕೊಟ್ಟು ಕೈ ಚೆಲ್ಲಿ ಕೂರುತ್ತಿದೆ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಐದು ವರ್ಷದ ಹಿಂದೆಯೂ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾಗ, ಜಿಲ್ಲಾಡಳಿತ ದಾಖಲಾತಿ ನೀಡುವ ಭರವಸೆ ನೀಡಿತ್ತು. ಆದರೆ, ಈವರೆಗೂ ದಾಖಲಾತಿ ನೀಡಲು ಕ್ರಮ ಕೈಗೊಂಡಿಲ್ಲ. ಮತ್ತೊಮ್ಮೆ ಚುನಾವಣೆ ಬಂದರೂ ಸಮಸ್ಯೆ ಬಗೆಹರಿಸಿಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಗ್ರಾಮಸ್ಥರು ಸಿಟ್ಟಿಗೆದ್ದಿದ್ದಾರೆ.

ಇದನ್ನೂ ಓದಿ:

ಚಿಕ್ಕಮಗಳೂರು: ಕೆಂಚಿಕೊಪ್ಪ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲು ಮುಂದಾದ ಗ್ರಾಮಸ್ಥರು

ಚಿಕ್ಕಮಗಳೂರು: ಚುನಾವಣೆಗೆ ಬಹಿಷ್ಕಾರ ಹಾಕಿದ ನಾಲ್ಕು ಗ್ರಾಮ ಪಂಚಾಯಿತಿಗಳು

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್