Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

Karnataka legislative Council Election: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ಹಾಗಾದ್ರೆ ಯಾವಾಗ ಮತದಾನ? ನಾಮಪತ್ರ ಸಲ್ಲಿಕೆ ಆರಂಭ ಯಾವಾಗ ಎನ್ನುವ ವಿವರ ಈ ಕೆಳಗಿನಂತಿದೆ.

Karnataka MLC Election 2024: ಕರ್ನಾಟಕ ವಿಧಾನ ಪರಿಷತ್​ನ 11  ಸ್ಥಾನಗಳಿಗೆ ಚುನಾವಣೆ ಘೋಷಣೆ
Follow us
ರಮೇಶ್ ಬಿ. ಜವಳಗೇರಾ
|

Updated on:May 20, 2024 | 5:03 PM

ಬೆಂಗಳೂರು, (ಮೇ 20): ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್‌ನ ( Karnataka legislative Council ) 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್​ಗೆ ಆಯ್ಕೆಯಾಗಿರುವ 11 ಸದಸ್ಯರ ಅಧಿಕಾರವಾಧಿ ಜೂನ್ 17ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಇಂದು(ಮೇ 20) ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಜೂನ್ 13ರಂದು ಮತದಾನ ನಡೆಯಲಿದೆ. ಇನ್ನು ಅಂದೇ (ಜೂನ್ 13) ಫಲಿತಾಂಶ ಪ್ರಕಟವಾಗಲಿದೆ.

ಚುನಾವಣೆಯ ಪ್ರಮುಖ ದಿನಾಂಕಗಳು

  • 2024 ಮೇ 27ರಂದು ಚುನಾವಣಾ ಅಧಿಸೂಚನೆ
  • 2024, ಜೂನ್ 3ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನ
  • 2024, 4ರಂದು ನಾಮಪತ್ರ ಪರಿಶೀಲನೆ
  • 2024, ಜೂನ್ 6ರಂದು ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
  • 2024, ಜೂನ್ 13ರಂದು ಮತದಾನ
  • 2024, ಜೂನ್ 13ರ ಸಂಜೆ 5ಗಂಟೆಗೆ ಮತದಾನ ಎಣಿಕೆ

ಇದನ್ನೂ ಓದಿ: egislative Council Election: ಕರ್ನಾಟಕ ವಿಧಾನಪರಿಷತ್‌ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಯಾವೆಲ್ಲ ಸದಸ್ಯರ ಅವಧಿ ಅಂತ್ಯ?

ಇದೇ ಜೂನ್ 17ಕ್ಕೆ  ಅಧಿಕಾವಧಿ ಮುಗಿಯುವ ವಿಧಾನಪರಿಷತ್​ನ 11 ಸದಸ್ಯರು ಯಾರ್ಯಾರು ಎನ್ನುವುದನ್ನು ನೋಡುವುದಾದರೆ,  ಅರವಿಂದ್ ಕುಮಾರ್ ಅರಳಿ, ಎನ್​ಎಸ್​ ಬೋಸರಾಜು (ಪ್ರಸ್ತುತ ಸಚಿವರು) , ಕೆ ಗೋವಿಂದರಾಜ್ (ಸಿಎಂ ರಾಜಕೀಯ ಕಾರ್ಯದರ್ಶಿ), ತೇಜಸ್ವಿನಿ ಗೌಡ,  ಮುಜಿರಾಜು ಗೌಡ ಪಿಎಂ, ಕೆಪಿ ನಂಜುಂಡಿ, ಬಿಎಂ ಫಾರುಖ್, ರಘುನಾಥ್ ರಾವ್ ಮಲ್ಕಾಪೂರೆ, ಎನ್​ ರವಿ ಕುಮಾರ್, ಎಸ್ ರುದ್ರೇಗೌಡ, ಕೆ ಹರೀಶ್ ಕುಮಾರ್.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದೊರೆಯುತ್ತೆ?

ವಿಧಾನಸಭೆಯ ಬಲಾಬಲದ ಪ್ರಕಾರ, ಒಟ್ಟು 11 ಸ್ಥಾನಗಳಲ್ಲಿ ಏಳು ಕಾಂಗ್ರೆಸ್ ಪಾಲಾಗಲಿವೆ. ಬಿಜೆಪಿಗೆ ಮೂರು ಮತ್ತು ಜೆಡಿಎಸ್​ಗೆ ಒಂದು ಸ್ಥಾ ದೊರಕಲಿದೆ, ಇನ್ನು ಜಗದೀಶ್ ಶೆಟ್ಟರ್ ಅವರ ಸ್ಥಾನ ಕಾಂಗ್ರೆಸ್​ ತೆಕ್ಕೆಗೆ ಹೋಗಲಿದೆ. ​

ಮೇಲ್ಮನೆಗೆ ಹೋಗುತ್ತಾರಾ ಯತೀಂದ್ರ?

ಇನ್ನು ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್​ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೂರು ಪಕ್ಷಗಳಲ್ಲಿ ಭಾರೀ ಪೈಪೋಟಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ ಯತೀಂದ್ರ ಅವರನ್ನು ಮೇಲ್ಮನೆಗೆ ತರಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ ಎಂದು ತಿಳಿದುಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಯತೀಂದ್ರ ಅವರು ವರುಣಾ ಕ್ಷೇತ್ರವನ್ನು ತಮ್ಮ ತಂದೆ ಸಿದ್ದರಾಮಯ್ಯನವರಿಗೆ ಬಿಟ್ಟುಕೊಟ್ಟಿದ್ದರು. ಇದೀಗ ಯತೀಂದ್ರ ಅವರನ್ನ ವಿಧಾನಪರಿಷತ್​ಗೆ ಕರೆತರುವ ಕಸರತ್ತು ನಡೆದಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:22 pm, Mon, 20 May 24

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು