AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆಯ ಮುನ್ನವೇ ನಡೆಯಲಿದೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

ಚುನಾವಣೆ ಆಯೋಗವು ಜೂ. 14ರಂದು ಲಿಖಿತ ನಿರ್ದೇಶನ ನೀಡಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಮತದಾರ ಪರಿಷ್ಕರಣೆ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆ ಇಲ್ಲವೇ ಏತನ್ಮಧ್ಯೆಯೇ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ.

ಕೊರೊನಾ ಮೂರನೇ ಅಲೆಯ ಮುನ್ನವೇ ನಡೆಯಲಿದೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
TV9 Web
| Edited By: |

Updated on:Jun 19, 2021 | 1:59 PM

Share

ಧಾರವಾಡ : ಬಹು ನಿರೀಕ್ಷಿತ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಮುಂಬರುವ ಎರಡು ತಿಂಗಳಲ್ಲಿ ಚುನಾವಣೆ ನಡೆಯುವುದು ಬಹುತೇಕ ಖಚಿತವಾಗಿದೆ.ಈ ದಿಸೆಯಲ್ಲಿ ರಾಜ್ಯ ಚುನಾವಣೆ ಆಯೋಗ ಹುಬ್ಬಳ್ಳಿ-ಧಾರವಾಡ ಪಾಲಿಕೆ ಜತೆಗೆ ದೂರದ ಕಲಬುರಗಿ ಪಾಲಿಕೆಗೂ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್​ಗಳ ಮತದಾರರ ಪರಿಷ್ಕೃತ ಪಟ್ಟಿ ತಯಾರಿಸಿ, ಜುಲೈ 9ರ ಒಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಚುನಾವಣೆ ಆಯೋಗವು ಜೂ. 14ರಂದು ಲಿಖಿತ ನಿರ್ದೇಶನ ನೀಡಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಮತದಾರ ಪರಿಷ್ಕರಣೆ ಪಟ್ಟಿ ಅಂತಿಮಗೊಳ್ಳುತ್ತಿದ್ದಂತೆ ಇಲ್ಲವೇ ಏತನ್ಮಧ್ಯೆಯೇ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ. ಕೊರೋನಾ ಎರಡನೇ ಅಲೆ ತಕ್ಕ ಮಟ್ಟಿಗೆ ತಹಬದಿಗೆ ಬಂದಿರುವ ಹಿನ್ನೆಲೆಯಲ್ಲಿ ಹಾಗೂ ಮೂರನೇ ಅಲೆ ಏಳುವ ಮುನ್ನವೇ ಎರಡೂ ಪಾಲಿಕೆಗಳಿಗೆ ಚುನಾವಣೆ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಚುನಾವಣೆ ಆಯೋಗ ಬಂದಿದೆ.

ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಆಗಸ್ಟ್ ತಿಂಗಳಲ್ಲಿ ಚುನಾವಣೆ ಪ್ರಕ್ರಿಯೆ ಶುರುವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಪಾಲಿಕೆಗೆ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವುದರಲ್ಲಿ ಅನುಮಾನವಿಲ್ಲ. ವಾರ್ಡ್​ಗಳ ಮರುವಿಂಗಡಣೆ ಹಾಗೂ ವಾರ್ಡ್ ಮೀಸಲಾತಿ ಪ್ರಕ್ರಿಯೆಯನ್ನು ನಗರಾಭಿವೃದ್ಧಿ ಇಲಾಖೆ ಇತ್ತೀಚೆಗಷ್ಟೇ ಪೂರ್ಣಗೊಳಿಸಿದೆ. ವಾರ್ಡ್​ಗಳ ವಿಂಗಡಣೆ ಅಧಿಸೂಚನೆಯಂತೆ ಮತದಾರರನ್ನು ಗುರುತಿಸಲು ಜೂನ್ 17ರಿಂದ 19 ರವರಗೆ ಅವಕಾಶ ನೀಡಲಾಗಿದೆ. ಜೂನ್ 28ರಂದು ಮತದಾರರ ಕರಡುಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಬೇಕು. ಜುಲೈ 1ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ತಿದ್ದುಪಡಿ, ಪುನರ್ ಪರಿಶೀಲನೆ ಸೇರಿ ಎಲ್ಲ ಪ್ರಕ್ರಿಯೆ ಮುಗಿಸಿ ಜುಲೈ 9ರಂದು ಅಂತಿಮ ಪಟ್ಟಿ ಸಲ್ಲಿಸುವಂತೆ ರಾಜ್ಯ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ಇದನ್ನೂ ಓದಿ:

Mysuru Mayor Election: ಇಂದು ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆ ನಡೆಯೋದಿಲ್ಲ; ಹೈಕೋರ್ಟ್​ನಿಂದ ತಡೆ

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ ಸ್ಮಾರ್ಟ್ ಯೋಜನೆ; ನಗರದಲ್ಲಿ ಹೆಚ್​ಡಿಪಿಇ ಮೂತ್ರಿ ಅಳವಡಿಸಲು ನಿರ್ಧಾರ

Published On - 1:56 pm, Sat, 19 June 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು