AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ

ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಇದು ರಾಜ್ಯ ಸರ್ಕಾರ ಹೊಸ ತಲೆನೋವಾಗಿ ಪರಣಮಿಸಿದೆ. ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಜುಲೈ 11 ರಂದು ನಡೆಸಲಿದೆ.

ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ
ಹೈಕೋರ್ಟ್​
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 25, 2024 | 8:59 AM

Share

ಬೆಂಗಳೂರು, ಜೂನ್​ 25: ರಾಜ್ಯ ಚುನಾವಣಾ ಆಯೋಗವು (Election Commission) ರಾಜ್ಯ ಸರ್ಕಾರಕ್ಕೆ (Karnataka Government) ಶಾಕ್​ ನೀಡಿದೆ. ನ್ಯಾಯಾಲಕ್ಕೆ ನೀಡಿದ್ದ ಭರಸವತೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ (Contempt of court) ಅರ್ಜಿ ಸಲ್ಲಿಸಿದೆ. ಚುನಾವಣಾ ಆಯೋಗ ಸಲ್ಲಿಸದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ, ಜು.11ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿದರು. ಈ ಹಿಂದೆ ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಬಳಿಕ ಸರ್ಕಾರದ ಪರ ಹಾಜರಿದ್ದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೆ ಈ ಬಗ್ಗೆ ಅಡ್ವೋಕೇಟ್​ ಜನರಲ್​ ಕೆ. ಶಶಿಕಿರಣ್​ ಶೆಟ್ಟಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕೆಂದು ಕೋರಿದರು.

ಇದನ್ನೂ ಓದಿ: 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಅವಧಿ ಮುಗಿದ ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ಗೆ ಚುನಾವಣೆ ನಡೆಸಲು ಕೋರಿ ಚುನಾವಣಾ ಆಯೋಗ ಈ ಹಿಂದೆ ನ್ಯಾಯಾಲಯದಲ್ಲಿ ಪಿಐಎಲ್​ ಸಲ್ಲಿಸಿತ್ತು. ಅರ್ಜಿಯಲ್ಲಿ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಆಯೋಗ ರಚಿಸಿರುವುದನ್ನೂ ಪ್ರಶ್ನಿಸಿತ್ತು.

ಈ ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರ 2023ರ ಡಿಸೆಂಬರ್​ 19ರಂದು ಪುನರ್​​ವಿಂಗಡೆ ಅಧಿಸೂಚನೆ ಹೊರಡಿಸುವುದಾಗಿ ಹೇಳಿತ್ತು. ಸರ್ಕಾರದ ಹೇಳಿಕೆ ಪರಿಗಣಿಸಿ ಹೈಕೋರ್ಟ್​ ಅರ್ಜಿ ಇತ್ಯರ್ಥಪಡಿಸಿತ್ತು. ಆದರೆ, ಸರ್ಕಾರ ತಾನು ಹೇಳಿದಂತೆ ನಡೆದುಕೊಂಡಿಲ್ಲ ಎಂದು ಚುನಾವಣಾ ಆಯೋಗ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ