AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ

ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಇದು ರಾಜ್ಯ ಸರ್ಕಾರ ಹೊಸ ತಲೆನೋವಾಗಿ ಪರಣಮಿಸಿದೆ. ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಜುಲೈ 11 ರಂದು ನಡೆಸಲಿದೆ.

ಸರ್ಕಾರದ ವಿರುದ್ಧ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಚುನಾವಣಾ ಆಯೋಗ
ಹೈಕೋರ್ಟ್​
ವಿವೇಕ ಬಿರಾದಾರ
|

Updated on: Jun 25, 2024 | 8:59 AM

Share

ಬೆಂಗಳೂರು, ಜೂನ್​ 25: ರಾಜ್ಯ ಚುನಾವಣಾ ಆಯೋಗವು (Election Commission) ರಾಜ್ಯ ಸರ್ಕಾರಕ್ಕೆ (Karnataka Government) ಶಾಕ್​ ನೀಡಿದೆ. ನ್ಯಾಯಾಲಕ್ಕೆ ನೀಡಿದ್ದ ಭರಸವತೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್​ಗೆ ನ್ಯಾಯಾಂಗ ನಿಂದನೆ (Contempt of court) ಅರ್ಜಿ ಸಲ್ಲಿಸಿದೆ. ಚುನಾವಣಾ ಆಯೋಗ ಸಲ್ಲಿಸದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್​.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ, ಜು.11ಕ್ಕೆ ಮುಂದೂಡಿದೆ.

ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿದರು. ಈ ಹಿಂದೆ ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್​ ಮತ್ತು ತಾಲೂಕು ಪಂಚಾಯತ್​ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.

ಬಳಿಕ ಸರ್ಕಾರದ ಪರ ಹಾಜರಿದ್ದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೆ ಈ ಬಗ್ಗೆ ಅಡ್ವೋಕೇಟ್​ ಜನರಲ್​ ಕೆ. ಶಶಿಕಿರಣ್​ ಶೆಟ್ಟಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕೆಂದು ಕೋರಿದರು.

ಇದನ್ನೂ ಓದಿ: 13 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಅವಧಿ ಮುಗಿದ ಜಿಲ್ಲಾ ಪಂಚಾಯತ್​, ತಾಲೂಕು ಪಂಚಾಯತ್​ಗೆ ಚುನಾವಣೆ ನಡೆಸಲು ಕೋರಿ ಚುನಾವಣಾ ಆಯೋಗ ಈ ಹಿಂದೆ ನ್ಯಾಯಾಲಯದಲ್ಲಿ ಪಿಐಎಲ್​ ಸಲ್ಲಿಸಿತ್ತು. ಅರ್ಜಿಯಲ್ಲಿ ಕ್ಷೇತ್ರ ಮರುವಿಂಗಡಣೆಗೆ ಸರ್ಕಾರ ಆಯೋಗ ರಚಿಸಿರುವುದನ್ನೂ ಪ್ರಶ್ನಿಸಿತ್ತು.

ಈ ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರ 2023ರ ಡಿಸೆಂಬರ್​ 19ರಂದು ಪುನರ್​​ವಿಂಗಡೆ ಅಧಿಸೂಚನೆ ಹೊರಡಿಸುವುದಾಗಿ ಹೇಳಿತ್ತು. ಸರ್ಕಾರದ ಹೇಳಿಕೆ ಪರಿಗಣಿಸಿ ಹೈಕೋರ್ಟ್​ ಅರ್ಜಿ ಇತ್ಯರ್ಥಪಡಿಸಿತ್ತು. ಆದರೆ, ಸರ್ಕಾರ ತಾನು ಹೇಳಿದಂತೆ ನಡೆದುಕೊಂಡಿಲ್ಲ ಎಂದು ಚುನಾವಣಾ ಆಯೋಗ ಇದೀಗ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ