AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆಯಲ್ಲಿ ಸ್ಪರ್ಧೆ: ಅನರ್ಹರಿಗೆ ಆಯೋಗದಿಂದ ಗ್ರೀನ್ ಸಿಗ್ನಲ್​?

ದೆಹಲಿ: ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ಈ ವೇಳೆ ಉಪಚುನಾವಣೆಗೆ ತಡೆ ನೀಡುವುದು ಅಥವಾ ಮುಂದೂಡುವುದು ಸಾಧ್ಯವಿಲ್ಲ. ಆದ್ರೆ ಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸುವ ಬಗ್ಗೆ ನಮ್ಮದು ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಹೇಳಿದರು. ತಕ್ಷಣ ರಾಕೇಶ್ ದ್ವಿವೇದಿ ವಾದಕ್ಕೆ ವಕೀಲ ಕಪಿಲ್ ಸಿಬಲ್ […]

ಉಪಚುನಾವಣೆಯಲ್ಲಿ ಸ್ಪರ್ಧೆ: ಅನರ್ಹರಿಗೆ ಆಯೋಗದಿಂದ ಗ್ರೀನ್ ಸಿಗ್ನಲ್​?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 23, 2019 | 3:46 PM

Share

ದೆಹಲಿ: ರಾಜೀನಾಮೆ ನೀಡಿದ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ.

ಇಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಇತ್ತು. ಈ ವೇಳೆ ಉಪಚುನಾವಣೆಗೆ ತಡೆ ನೀಡುವುದು ಅಥವಾ ಮುಂದೂಡುವುದು ಸಾಧ್ಯವಿಲ್ಲ. ಆದ್ರೆ ಚುನಾವಣೆಗೆ ಅನರ್ಹ ಶಾಸಕರು ಸ್ಪರ್ಧಿಸುವ ಬಗ್ಗೆ ನಮ್ಮದು ತಕರಾರು ಇಲ್ಲ ಎಂದು ಚುನಾವಣಾ ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಹೇಳಿದರು. ತಕ್ಷಣ ರಾಕೇಶ್ ದ್ವಿವೇದಿ ವಾದಕ್ಕೆ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿ, ನಿಮ್ಮ ಅಭಿಪ್ರಾಯ ಇಲ್ಲಿ ಕೇಳಿಲ್ಲ. ನೀವು ಸ್ವಯಂಪ್ರೇರಿತವಾಗಿ ನಿಮ್ಮ ಅಭಿಪ್ರಾಯ ಹೇಳುವಂತಿಲ್ಲ. ಚುನಾವಣಾ ಆಯೋಗ ಒಂದು ಪಕ್ಷ ಅಲ್ಲ ಎಂದು ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್​ನ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದೆ.

ಚುನಾವಣಾ ಆಯೋಗ ಮಧ್ಯಪ್ರವೇಶ ಸರಿಯಲ್ಲ: ಅನರ್ಹರ ಸ್ಪರ್ಧೆ ವಿಚಾರದಲ್ಲಿ ಚುನಾವಣಾ ಆಯೋಗ ಮಧ್ಯಪ್ರವೇಶಿಸಿದ್ದು ಸರಿಯಲ್ಲ. ಅನರ್ಹರ ಚುನಾವಣೆ ಸ್ಪರ್ಧೆ ಬಗ್ಗೆ ಆಯೋಗ ಹೇಳಿರಬಹುದು. ಆದ್ರೆ ಈ ಪ್ರಕರಣಕ್ಕೂ, ಚುನಾವಣಾ ಆಯೋಗಕ್ಕೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ದಿನೇಶ್​ ಗುಂಡೂರಾವ್​ಗೆ ಸುಪ್ರೀಂಕೋರ್ಟ್​ ನೋಟಿಸ್​ ನೀಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ದಿನೇಶ್​ ಗುಂಡೂರಾವ್, ಅನರ್ಹ ಶಾಸಕರು ಪಕ್ಷಾಂತರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ. ನಾವು ಕೇವಿಯೆಟ್ ಸಲ್ಲಿಸಿದ್ದೇವೆ. ಹೀಗಾಗಿ ನಮ್ಮ ವಕೀಲರು ಸ್ಪಷ್ಟ ವಾದ ಮಾಡಲಿದ್ದಾರೆ ಎಂದರು. ಉತ್ತಮ ಉದ್ದೇಶದಿಂದ ರಾಜೀವ್ ಗಾಂಧಿ ಕಾಯ್ದೆ ಜಾರಿಗೆ ತಂದಿದ್ದರು. ಆ ಕಾಯ್ದೆಯನ್ನು ಸ್ಪೀಕರ್ ಎತ್ತಿಹಿಡಿದಿದ್ದಾರೆ. ಅಲ್ದೆ ಜನ ಕೂಡಾ ಸ್ಪೀಕರ್ ಆದೇಶವನ್ನೇ ಬಯಸಿದ್ದರು. ಹೀಗಾಗಿ ಕೋರ್ಟ್ ಸ್ಪೀಕರ್ ಆದೇಶ ಎತ್ತಿಹಿಡಿಯಲಿದೆ ಅಂತ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್​-ಜೆಡಿಎಸ್​ನ 17 ಶಾಸಕರು ರಾಜೀನಾಮೆ ನೀಡಿದ್ದರು. ಆಗ ಅಂದಿನ ಸ್ಪೀಕರ್ ರಮೇಶ್​ ಕುಮಾರ್ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಅನರ್ಹತೆ ಆದೇಶ ಪ್ರಶ್ನಿಸಿ 17 ಶಾಸಕರು ಸುಪ್ರೀಂಕೋರ್ಟ್​ನ ಮೆಟ್ಟಿಲೇರಿದ್ದರು.

Published On - 2:31 pm, Mon, 23 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ